ಮದ್ವೆಮನೇಲಿ ಊಟ ಸಿಗಲಿಲ್ಲ ಅಂತ ಮುರಿದುಬಿದ್ದ ಮದ್ವೆ
ಈ ಹಿಂದೆ ಬೆಂಗಳೂರಿನಲ್ಲಿ ಬಿರಿಯಾನಿ ವಿಷಯಕ್ಕೆ ಜಗಳ ನಡೆದು ಶಾದಿ ನಿಂತು ಹೋಗಿತ್ತು. ಈಗ ಮತ್ತೊಮ್ಮೆ ಆಹಾರದ ವಿಷಯಕ್ಕೆ ಜಗಳ ನಡೆದು ಮದುವೆ ಕ್ಯಾನ್ಸಲ್ ಆದ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ.
ಬೆಂಗಳೂರು, ಏಪ್ರಿಲ್ 09: ವರದಕ್ಷಿಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಮದುವೆ ನಿಂತು ಹೋದ ಸುದ್ದಿ ಕೇಳಿರುತ್ತೀರಿ. ಈ ಹಿಂದೆ ಬೆಂಗಳೂರಿನಲ್ಲಿ ಬಿರಿಯಾನಿ ವಿಷಯಕ್ಕೆ ಜಗಳ ನಡೆದು ಶಾದಿ ನಿಂತು ಹೋಗಿತ್ತು. ಈಗ ಮತ್ತೊಮ್ಮೆ ಆಹಾರದ ವಿಷಯಕ್ಕೆ ಜಗಳ ನಡೆದು ಮದುವೆ ಕ್ಯಾನ್ಸಲ್ ಆದ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ.
ಕೋಣನಕುಂಟೆಯ ಸೌಧಾಮಿನಿ ನಗರದಲ್ಲಿರುವ ಕನ್ವೆಂಷನ್ ಹಾಲ್ ನಲ್ಲಿ ನಾಗೇಂದ್ರ ಪ್ರಸಾದ್ ಹಾಗೂ ಶಿಲ್ಪಾ ಅವರ ಮದುವೆ ಆರತಕ್ಷತೆ ಮುರಿದು ಬಿದ್ದಿದು ಏಕೆ ಎಂಬುದು ಇನ್ನೂ ಗೊಂದಲವಾಗಿದೆ. ಆರತಕ್ಷತೆಗೆ ಬಂದಿದ್ದ ವರನ ಕಡೆಯವರನ್ನು ವಧುವಿನ ಕಡೆಯವರು ಸರಿಯಾಗಿ ವಿಚಾರಿಸಿಕೊಳ್ಳಲಿಲ್ಲ. ಬಂದವರಿಗೆ ಸರಿಯಾಗಿ ಊಟ ಹಾಕಲಿಲ್ಲ ಎಂದು ತಿಳಿದು ಬಂದಿದೆ.[ಬಿಸಿ-ಬಿಸಿ ಬಿರಿಯಾನಿಗಾಗಿ ಮದುವೆ ಮುರಿದು ಬಿತ್ತು!]

ವರೋಪಚಾರ ಕಡಿಮೆ ಮಾಡಿಲ್ಲ: ಸುಮಾರು 750 ಜನರಿಗೆ ಊಟ ಹಾಕಲಾಗಿದೆ. 30 ಜನರಿಗೆ ಊಟ ಕಡಿಮೆಯಾಗಿತ್ತು. ವ್ಯವಸ್ಥೆ ಮಾಡುವಷ್ಟರಲ್ಲಿ ತಾಳ್ಮೆ ಕಳೆದುಕೊಂಡು ಗಂಡಿನ ಕಡೆಯವರು ಕೂಗಾಟ ಮಾಡಿ, ಮದುವೆ ಕ್ಯಾನ್ಸಲ್ ಮಾಡಿ ಎಂದು ಹೋಗಿದ್ದಾರೆ ಎಂದು ವಧುವಿನ ಸೋದರಮಾವ ಶಿವಕುಮಾರ್ ಹೇಳಿದ್ದಾರೆ.
ಪೊಲೀಸ್ ಸಂಧಾನ ವಿಫಲ: ಈ ಛತ್ರದಿಂದ ಕೂಗಳತೆ ದೂರದಲ್ಲಿರುವ ಕೋಣನಕುಂಟೆ ಪೊಲೀಸರು ಕೂಡಾ ಈ ಮದುವೆ ಗಲಾಟೆ, ಗೊಂದಲ ಕಂಡು ತಲೆ ಕೆಡಿಸಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಹಲವು ಬಾರಿ ಎರಡು ಕಡೆಯವರನ್ನು ಕೂರಿಸಿಕೊಂಡು ಸಂಧಾನ ನಡೆಸಲು ಯತ್ನಿಸಿ ವಿಫಲರಾಗಿದ್ದಾರೆ. ಎರಡು ಕಡೆಯವರು ಪರಸ್ಪರ ದೂರು ನೀಡಿದ್ದಾರೆ.[ಇನ್ನೇನು ತಾಳಿ ಕಟ್ಟಬೇಕಿದ್ದ ವರ ಹೃದಯಾಘಾತದಿಂದ ಸಾವು]
ಈಗಲೂ ಮದ್ವೆಗೆ ರೆಡಿ: ನಾವು ಈಗಲೂ ಮದುವೆಗೆ ರೆಡಿ, ವಧುವಿಗೆ ಮದುವೆಯಾಗುವುದು ಇಷ್ಟವಿಲ್ಲ ಎಂದು ಹೇಳೆ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಮಾತುಕತೆಗೆ ಬನ್ನಿ ಎಂದರೆ ನಮ್ಮ ಮೇಲೆ ದೂರು ನೀಡಿದ್ದಾರೆ ಎಂದು ವರನ ಕಡೆಯವರು ಹೇಳಿದ್ದಾರೆ.
ಒಟ್ಟಾರೆ, ಯಾವುದು ಸತ್ಯ ಯಾವುದು ಮಿಥ್ಯ ಎಂಬ ಗೊಂದಲ ಮುಂದುವರೆದಿದೆ. ಸುದ್ದಿವಾಹಿನಿಗಳಲ್ಲಿ ಚರ್ಚೆ ನಡೆಯುತ್ತಲೇ ಇದೆ. ಗಲಾಟೆ ಮದುವೆಯಲ್ಲಿ ಊಟ ಮಾಡಿ ಹೋದವರೆ ಜಾಣರು ಎಂಬ ಮಾತು ಖಾಲಿ ಛತ್ರದಲ್ಲಿ ಪ್ರತಿಧ್ವನಿಸುತ್ತಿದೆ.
-
Live-in Couples: 2027ರ ಜನಗಣತಿ: ಲಿವ್-ಇನ್ ಸಂಬಂಧದಲ್ಲಿರುವವರಿಗೂ ವಿವಾಹಿತ ದಂಪತಿ ಸ್ಥಾನಮಾನ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications