ಈಜುವ ಸಾಹಸಕ್ಕಿಳಿದು ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳು
ಬೆಂಗಳೂರು, ಏ. 24 : ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಬಂಡೆ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ನಾಲ್ಕು ಶವಗಳು ಗುರುವಾರ ಪತ್ತೆಯಾಗಿದ್ದು, ಇನ್ನೊಂದು ಶವ ಶುಕ್ರವಾರ ಬೆಳಗ್ಗೆ ಸಿಕ್ಕಿದೆ.
ಮೃತರೆಲ್ಲರೂ ಚಿಕ್ಕಜಾಲದ ರೇವಣಸಿದ್ದೇಶ್ವರ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ನ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳು. ಗುರುವಾರ ಮಧ್ಯಾಹ್ನ ಊಟದ ಸಮಯದಲ್ಲಿ ಈಜಾಡಲೆಂದು 8 ವಿದ್ಯಾರ್ಥಿಗಳು ದೇವನಹಳ್ಳಿ ಸಮೀಪದ ಬೆಟ್ಟಹಲಸೂರು ಬಂಡೆಯ ಕ್ವಾರಿಗೆ ಆಗಮಿಸಿದ್ದರು.

ಮೃತಪಟ್ಟವರನ್ನು ನೇಪಾಳ ಮೂಲದ ಖಾಮ್ಪಟಾ ಲಿಮ್ (19), ರಾಜೇಶ್ (20), ಬೆಂಗಳೂರಿನ ಗಂಗಾನಗರದ ಹರೀಶ್ (19), ವಿದ್ಯಾರಣ್ಯಪುರದ ಅರುಣ್ ಚಂದ್ರ ಶೆಟ್ಟಿ (19), ಅಮೃತಹಳ್ಳಿಯ ನಂದಕುಮಾರ್ (20) ಎಂದು ಗುರುತಿಸಲಾಗಿದೆ. [ಕಲ್ಲು ಕ್ವಾರಿಯಲ್ಲಿ ಮುಳುಗಿ ಮೂರು ಮಕ್ಕಳ ಸಾವು]
ರಾಜೇಶ್ ಮತ್ತು ಅರುಣ್ ಚಂದ್ರ ಶೆಟ್ಟಿ ಕಡಿಮೆ ಆಳವಿರುವ ಜಾಗದಲ್ಲಿ ಸ್ನಾನ ಮಾಡುತ್ತಿದ್ದರು. ರಾಜೇಶ್ ಸ್ನಾನ ಮಾಡುತ್ತಾ ಹೆಚ್ಚು ಆಳವಿರುವ ಸ್ಥಳಕ್ಕೆ ತೆರಳಿ ಮುಳುಗಿದ. ಈ ಸಂದರ್ಭದಲ್ಲಿ ಅವರನ್ನು ರಕ್ಷಿಸಲು ಹೋದ ಖಾಮ್ಪಟಾ ಲಿಮ್ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. [ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ]
ಎಂಟು ವಿದ್ಯಾರ್ಥಿಗಳ ಪೈಕಿ ಈಜು ಬಾರದ ಸಿ.ಪಿ.ಕಾರ್ತಿಕ್, ಹರಿನಂದನ್ ಮತ್ತು ನಿತಿನ್ ಜೈನ್ ಅವರು ದಡದಲ್ಲಿದ್ದರು. ಸ್ನೇಹಿತರು ನೀರಿನಲ್ಲಿ ಮುಳುಗಿದ್ದನ್ನು ಕಂಡ ಅವರು ಸ್ಥಳೀಯರು ಮತ್ತು ಪೊಲೀಸರಿಗೆ ವಿಷಯ ಮುಟ್ಟಿಸಿದರು.
ಹರೀಶ್ ಶವ ಇಂದು ಬೆಳಗ್ಗೆ ಪತ್ತೆ : ಹರೀಶ್ ಶವ ಗುರುವಾರ ರಾತ್ರಿಯ ತನಕ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ನಾಲ್ವರ ಮೃತ ದೇಹಗಳನ್ನು ಅಗ್ನಿ ಶಾಮಕ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಹೊರಗೆ ತೆಗೆದಿದ್ದರು, ಇಂದು ಬೆಳಗ್ಗೆ ಹರೀಶ್ ಶವ ದೊರಕಿದೆ. [ಪಿಟಿಐ ಚಿತ್ರ]
-
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications