ಪ್ರವಾಹ ತಡೆಗೆ ಬಿಬಿಎಂಪಿಯಿಂದ 61 ಕಂಟ್ರೋಲ್ ರೂಂ
ನೆರೆ ಸೇರಿದಂತೆ ಮಳೆಗೆ ಸಂಬಂಧಿಸಿದ ತುರ್ತು ಅವಘಡಗಳನ್ನು ನಿಭಾಯಿಸಲು ಎಲ್ಲಾ 61 ಉಪವಿಭಾಗಗಳಲ್ಲೂ ಕಂಟ್ರೋಲ್ ರೂಂಗಳನ್ನು ಸ್ಥಾಪನೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ.
ಬೆಂಗಳೂರು, ಮೇ 21: ಮಳೆಗಾಲ ಎದುರಿಸಲು ಬಿಬಿಎಂಪಿ ಸಜ್ಜಾಗಿದೆ. ಎಲ್ಲಾ ಬಗೆಯ ಮಳೆಗಾಲದ ಪರಿಸ್ಥಿತಿಗಳನ್ನು ನಿಭಾಯಿಸಲು ಎಲ್ಲಾ 61 ಉಪ ವಿಭಾಗಗಳಲ್ಲೂ ಕಂಟ್ರೋಲ್ ರೂಂ ಸ್ಥಾಪನೆ ಮಾಡಲು ನಿರ್ಧರಿಸಿದೆ.
ಈಗಾಗಲೇ ನೆರೆ ಬರಬಹುದಾದ 299 ಸ್ಥಳಗಳನ್ನು ಗುರುತಿಸಲಾಗಿದೆ. ಸಂಚಾರಿ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡದಿಂದ ಮಾಹಿತಿ ಪಡೆದು ಈ ಸಾಂಭಾವ್ಯ ನೆರೆ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಇದರಲ್ಲಿ 253 ಪ್ರದೇಶಗಳಲ್ಲಿ ಪ್ರವಾಹ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ ಉಳಿದ 46 ಪ್ರದೇಶಗಳಲ್ಲಿ ಬೃಹತ್ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ.[ಧಾರಾಕಾರ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಬಿಬಿಎಂಪಿ ಕಾರ್ಮಿಕ]

ಇದಲ್ಲದೆ ಎಲ್ಲಾ ರೀತಿಯ ತುರ್ತು ಅವಘಡಗಳನ್ನು ನಿಭಾಯಿಸಲು 61 ಕಂಟ್ರೋಲ್ ರೂಂಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೆ ಎಲ್ಲಾ ಉಪ ವಿಭಾಗಗಳಲ್ಲೂ ತುರ್ತು ನಿರ್ವಹಣೆ ವಾಹನಗಳನ್ನು ಅಗತ್ಯ ಸಲಕರಣೆಗಳೊಂದಿಗೆ ಸಜ್ಜಾಗಿಡುವಂತೆ ಆದೇಶ ನೀಡಲಾಗಿದೆ. ಸದ್ಯ ಬಿಬಿಎಂಪಿಯ 8 ವಲಯಗಳು ಹಾಗೂ ಮಲ್ಲೇಶ್ವರಂನ ಐಪಿಪಿ ಕೇಂದ್ರ ಜಾಗೂ ಬಿಬಿಎಂಪಿಯ ಕೇಂದ್ರ ಕಚೇರಿಗಳ ಕಂಟ್ರೋಲ್ ರೂಂ ಗಳಿಂದ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ಸದ್ಯದಲ್ಲೇ ಈ 61 ಕಂಟ್ರೋಲ್ ರೂಂಗಳು ಕಾರ್ಯಾರಂಭ ಮಾಡಲಿವೆ.
ಇದಲ್ಲದೆ 160ಕ್ಕೂ ಹೆಚ್ಚು ಪ್ರದೇಶಗಳಲ್ಲಿ ರಾಜಕಾಲುವೆ ದುರಸ್ತಿ ಕಾಮಗಾರಿಯನ್ನೂ ಆರಂಭಿಸಲಾಗಿದೆ. ಮಳೆಗಾಲದಲ್ಲಿ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹಾದುಹೋಗಲು ಅನುಕೂಲವಾಗುವಂತೆ ಈ ಸುರಸ್ತಿ ಕಾಮಗಾರಿಯನ್ನುಕೈಗೊಳ್ಳಲಾಗಿದೆ.[ವಾರಾಂತ್ಯದ ಮಳೆಗೆ ಕಂಗಾಲಾದ ಬೆಂಗಳೂರಿಗರು, ನೆಲ ಕಂಡ ಮರಗಳು]
ಸದ್ಯಕ್ಕೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಿಂತಿದೆಯಾದರೂ ನರೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ರಾಜಕಾಲುವೆ ಒತ್ತುವರಿಯನ್ನು ಸಂಪುರ್ಣವಾಗಿ ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ












Click it and Unblock the Notifications