ಬಿಜೆಪಿ ವಕ್ತಾರ ರಮೇಶ್ ಗೆ ಫೇಸ್ ಬುಕ್ ಮೂಲಕ ಜೀವ ಬೆದರಿಕೆ
ಸಚಿವ ಎಂ ಕೃಷ್ಣಪ್ಪ ಅವರ ಭೂಹಗರಣವನ್ನು ಬಯಲಿಗೆಳೆದ ನನಗೆ ಜೀವ ಬೆದರಿಕೆ ಬಂದಿದೆ. ಫೇಸ್ ಬುಕ್ ನಲ್ಲಿ ವ್ಯಕ್ತಿಯೊಬ್ಬ ನನ್ನನ್ನು ಕೊಲ್ಲುವುದಾಗಿ ಎಚ್ಚರಿಸಿದ್ದಾನೆ ಎಂದು ಯಡಿಯೂರು ವಾರ್ಡಿನ ಮಾಜಿ ಕಾರ್ಪೊರೇಟರ್, ಬಿಜೆಪಿ ವಕ್ತಾರ ಎನ್.ಆರ್ ರಮೇಶ್
ಬೆಂಗಳೂರು, ಮೇ 09: ಸಚಿವ ಎಂ ಕೃಷ್ಣಪ್ಪ ಅವರ ಭೂಹಗರಣವನ್ನು ಬಯಲಿಗೆಳೆದ ನನಗೆ ಜೀವ ಬೆದರಿಕೆ ಬಂದಿದೆ. ಫೇಸ್ ಬುಕ್ ನಲ್ಲಿ ವ್ಯಕ್ತಿಯೊಬ್ಬ ನನ್ನನ್ನು ಕೊಲ್ಲುವುದಾಗಿ ಎಚ್ಚರಿಸಿದ್ದಾನೆ ಎಂದು ಯಡಿಯೂರು ವಾರ್ಡಿನ ಮಾಜಿ ಕಾರ್ಪೊರೇಟರ್, ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಅವರು ಹೇಳಿದ್ದಾರೆ. ಈ ಕುರಿತಂತೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
'ಹರೀಶ್ ತಲಹರಿ ಎಂಬುವರು ಫೇಸ್ಬುಕ್ನಲ್ಲಿರುವ ಪೋಸ್ಟ್ ಪ್ರಕಾರ'ಲೋ ರಮೇಶ್, ಪಕ್ಕಾ ನೀನು ಮರ್ಡರ್ ಆಗ್ತಿಯಾ. ಕಾಂಗ್ರೆಸ್ ಅವರನ್ನೇ ಟಾರ್ಗೆಟ್ ಮಾಡ್ತಿದ್ದಿಯಾ. ಹುಷಾರ್. ಕೆಲಸಾ ಕೊಟ್ರೆ. ನೀನು ಹುಡುಕಿದರೂ ಸಿಗಲ್ಲ' ಎಂದು ಬೆದರಿಕೆ ಕಾಮೆಂಟ್ ಇದೆ.

ಸಚಿವ ಎಂ.ಕೃಷ್ಣಪ್ಪ ಅವರ ಮೇಲಿನ ಆರೋಪ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ್ದೆ. ಹೀಗಾಗಿ ನನ್ನ ವಿರುದ್ಧ ಬೆದರಿಕೆ ಬಂದಿದೆ. ಮಂಗಳವಾರ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಬಳಿಕ ಪೊಲೀಸ್ ಕಮಿಷನರ್ ಅವರಿಗೂ ದೂರು ಕೊಡುತ್ತೇನೆ ಎಂದು ಎನ್ ಆರ್ ರಮೇಶ್ ಹೇಳಿದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟ ರಸ್ತೆಯಲ್ಲಿರುವ 350 ಕೋಟಿ ರು ಮೌಲ್ಯದ 4.20 ಎಕರೆ ಸರ್ಕಾರಿ ಸ್ವತ್ತನ್ನು ಸಚಿವ ಎಂ ಕೃಷ್ಣಪ್ಪ ಅವರು ಕಬಳಿಸಿ, ಖಾಸಗಿ ಸಂಸ್ಥೆಗೆ ಮಾರಾಟ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್ ಆರ್ ರಮೇಶ್ ಅವರು ಆಗ್ರಹಿಸಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications