ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ: ಎಸ್.ಎಂ.ಕೃಷ್ಣ ಮೋದಿಗೆ ಪತ್ರ

|
Google Oneindia Kannada News

ಬೆಂಗಳೂರು, ಜನವರಿ 20: ತುಮಕೂರಿನ ಸಿದ್ದಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಶಿವಕುಮಾರ ಸ್ವಾಮೀಜಿಗಳಿಗೆ ಇದೀಗ 111 ವರ್ಷ ವಯಸ್ಸು, ಕಳೆದ 80 ವರ್ಷಗಳಿಗಿಂತ ಹೆಚ್ಚು ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ದೈವಭಕ್ತಿ, ಆಂಗ್ಲ ಭಾಷೆಯ ಹಿಡಿತ, ಕನ್ನಡ ಮತ್ತು ಸಂಸ್ಕೃತ ಸಾಹಿತ್ಯದ ಮೇಲಿನ ನೈಪುಣ್ಯತೆ, ಸಾಮಾಜಿಕ ಪಿಡುಗಗಳ ವಿರುದ್ಧ ಹೋರಾಟ ಇವೆಲ್ಲಾ ಕ್ಷೇತ್ರಗಳಲ್ಲೂ ಸ್ವಾಮೀಜಿ ಸೇವೆ ಸಲ್ಲಿಸಿದ್ದಾರೆ. ಬಡವ, ಬಲ್ಲಿದರ ಪರವಾಗಿ ನಿಂತಿದ್ದಾರೆ.

ಮೇ ತಿಂಗಳಲ್ಲಿ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುತ್ತೇನೆ: ಎಸ್.ಎಂ. ಕೃಷ್ಣಮೇ ತಿಂಗಳಲ್ಲಿ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುತ್ತೇನೆ: ಎಸ್.ಎಂ. ಕೃಷ್ಣ

Former Chief minister Sm Krishna urges Bharata Ratna to Siddaganga Seer

ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನವನ್ನು ನೀಡಬೇಕು ಎನ್ನುವುದು ಲಕ್ಷಾಂತರ ಭಕ್ತರ ಮನವಿಯಾಗಿದೆ. ಅವರನ್ನು ನಡೆದಾಡುವ ದೇವರೆಂದೇ ಎಲ್ಲರು ನಂಬಿದ್ದಾರೆ. ಶ್ರೀಗಳಿಗೆ ಕೇಂದ್ರ ಸರ್ಕಾರ ಕೊಡ ಮಾಡುವ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

English summary
Former Chief minister SM Krishna has urged Prime minister Narendra modi to confer Dr. Shivakumar swamiji of Siddaganga mutt Tumkur with Country's highest civilian ward Bharata Ratna for his contribution to the society. He has written a letter to Modi, describing swamiji's achievements and contributions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X