ಮಾಜಿ ಕ್ರಿಕೆಟರ್ ವಿಜಯ್ ಭಾರದ್ವಾಜ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ
ಬೆಂಗಳೂರು, ಜೂ. 08: ಟೀಂ ಇಂಡಿಯಾದ ಮಾಜಿ ಟೆಸ್ಟ್ ಆಟಗಾರ ವಿಜಯ್ ಭಾರದ್ವಾಜ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಸಮ್ಮುಖದಲ್ಲಿ ವಿಜಯ್ ಅವರು ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.
39 ವರ್ಷ ವಯಸ್ಸಿನ ಹಾಲಿ ಕಾಮೆಂಟೆಟರ್ ಹಾಗೂ ವಿಶ್ಲೇಷಕ ವಿಜಯ್ ಭಾರದ್ವಾಜ್ ಅವರು ಭಾನುವಾರ (ಜೂ.07) ಸದಸ್ಯತ್ವ ಪಡೆದ ನಂತರ ಮಾತನಾಡಿ, ನಾನು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿ, ಮೋದಿ ಅವರು ಕ್ರೀಡೆಗೆ ನೀಡುವ ಪ್ರೋತ್ಸಾಹ ಅನುಕರಣೀಯ ಎಂದರು. ['ಯುವ ಕ್ರಿಕೆಟರ್ಸ್ ಕೋಚ್, ಥ್ರಿಲ್ಲಿಂಗ್ ವಿಷಯ' : ದ್ರಾವಿಡ್]
ಟೀಂ ಇಂಡಿಯಾ ಪರ 3 ಟೆಸ್ಟ್ ಪಂದ್ಯ ಹಾಗೂ 10 ಏಕದಿನ ಪಂದ್ಯವನ್ನಾಡಿದ್ದ ವಿಜಯ್ ಭಾರದ್ವಾಜ್ ಅವರು ಜಿಂಬಾಬ್ವೆ ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಅದರೆ, ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿಯಬೇಕಾಯಿತು. 2002ರಲ್ಲಿ ನಿವೃತ್ತಿ ಹೊಂದಿದರು. [ವಿಜಯ್ ಭಾರದ್ವಾಜ್ ವೃತ್ತಿ ಅಂಕಿ ಅಂಶ]
ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಏನು ನಿರ್ಧರಿಸಿಲ್ಲ. ಈಗಷ್ಟೇ ಸದಸ್ಯತ್ವ ಪಡೆದುಕೊಂಡಿದ್ದೇನೆ. ಪಕ್ಷದ ಹಿರಿಯರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ತಮ್ಮ ಹೊಸ ಇನ್ನಿಂಗ್ಸ್ ಬಗ್ಗೆ ಒನ್ ಇಂಡಿಯಾಕ್ಕೆ ತಿಳಿಸಿದರು.

ಅಂಡರ್ 19 ಹಾಗೂ ಭಾರತ ಎ ತಂಡಕ್ಕೆ ರಾಹುಲ್ ದ್ರಾವಿಡ್ ಅವರ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ ಭಾರದ್ವಾಜ್, ದ್ರಾವಿಡ್ ಉತ್ತಮ ಆಟಗಾರ ಅಷ್ಟೇ ಅಲ್ಲ, ಉತ್ತಮ ಕೋಚ್ ಕೂಡಾ ಹೌದು. ಭಾರತಕ್ಕೆ ಭಾರತದವರೇ ಕೋಚ್ ಆಗಿದ್ದರೆ ಇನ್ನಷ್ಟು ಉತ್ತಮ ಫಲಿತಾಂಶಗಳನ್ನು ಕಾಣಬಹುದು ಎಂದರು. (ಒನ್ ಇಂಡಿಯಾ ಸುದ್ದಿ)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications