ಬೆಂಗಳೂರಲ್ಲಿ ಮೋದಿ ಮಾಡಿದ ಭಾಷಣದ ಪೂರ್ಣಪಾಠ
ಬೆಂಗಳೂರು, ನ. 18 : ಬಿಜೆಪಿಯ ಬಹು ನಿರೀಕ್ಷಿತ 'ಭಾರತ ಗೆಲ್ಲಿಸಿ' ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆಯಿತು. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯದ ವಿವಿಧ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.
ಮೋಡಾಚ್ಛಾದಿತ ವಾತಾವರಣವಿದ್ದರೂ ಅರಮನೆ ಮೈದಾನದಲ್ಲಿ ಸೇರಿದ್ದ ಲಕ್ಷಾಂತರ ಜನರನ್ನು ಉದ್ದೇಶಿಸಿ ಗುಜರಾತ್ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಾಡಿದ ಭಾಷಣದ ಪೂರ್ಣಪಾಠ ಇಲ್ಲಿದೆ.
ವೇದಿಕೆಯಲ್ಲಿ ವಿರಾಜಮಾನರಾಗಿರುವ ಆದರಣೀಯ ರಾಜನಾಥ್ ಸಿಂಗ್ ಜೀ, ಪ್ರಹ್ಲಾದ್ ಜೋಶಿಜೀ, ವೆಂಕಯ್ಯ ನಾಯ್ಡುಜೀ, ಥಾವರ್ ಚಂದ್ ಗೆಹ್ಲೋಟ್ ಜೀ, ಅನಂತ್ ಕುಮಾರ್ ಜೀ, ಪ್ರಹ್ಲಾದ್ ಜೋಶಿ, ಸದಾನಂದ ಗೌಡಾಜೀ, ಜಗದೀಶ್ ಶೆಟ್ಟರ್, ಭಾರತೀಯ ಜನತಾ ಪಕ್ಷದ ಎಲ್ಲಾ ವರಿಷ್ಠ ನಾಯಕರೇ, ಬೆಂಗಳೂರಿನ, ಕರ್ನಾಟಕದ ಬಂಧು ಭಗಿನಿಯರೇ ನಿಮಗೆಲ್ಲಾ ನನ್ನ ನಮಸ್ಕಾರಗಳು.
ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ, ಸಂತ ಬಸವೇಶ್ವರ, ಕನಕದಾಸ, ಕಿತ್ತೂರು ರಾಣಿ ಚೆನ್ನಮ್ಮ ಎಲ್ಲರಿಗೂ ನನ್ನ ಸತ್ಪ್ರಣಾಮಗಳು.

ಬಂಧು ಭಗಿನಿಯರೇ, ಇಂದು ನಾನು ಬೆಂಗಳೂರಿಗೆ ಬಂದಿದ್ದೇನೆ. ಮೊದಲಿಗೆ ವಿಜ್ಞಾನ ಜಗತ್ತಿನಲ್ಲಿ ಭಾರತಕ್ಕೆ ಗೌರವ ತಂದ ಪ್ರೊ. ಸಿ ಎನ್ ಆರ್ ರಾವ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಭಾರತ ಕ್ರೀಡಾ ಕ್ಷೇತ್ರವನ್ನು ಉತ್ತುಂಗಕ್ಕೇರಿಸಿದ ಸಚಿನ್ ಗೂ ಭಾರತ ರತ್ನ ಪಡೆದಿದ್ದಕ್ಕೆ ಅಭಿನಂದನೆ.
ನಮ್ಮ ಬೆಂಗಳೂರು ಅಭಿವೃದ್ಧಿಯಲ್ಲಿ ಭಾರತದಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಸ್ಥಾನ ಗಳಿಸಿತ್ತು. ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ವಿದ್ಯುತ್ ಪಡೆದ ನಗರ ಬೆಂಗಳೂರು. ಇದು ಜ್ಞಾನದ ಶತಾಬ್ದಿ. ಇಂದು ಉನ್ನತ ಶಿಕ್ಷಣ, ಸೆಂಟರ್ ಫಾರ್ ಎಕ್ಸಲೆನ್ಸಿಯಲ್ಲಿ ಬೆಂಗಳೂರು ಜ್ಞಾನ ನಗರಿ ಎಂಬ ಹೆಸರಿನಲ್ಲಿ ಸ್ಥಾನ ಪಡೆದಿದೆ. ಎಲ್ಲಾ ಕರ್ನಾಟಕ ವಾಸಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.
ನಾನು ಬೆಂಗಳೂರಿಗೆ ಹಲವು ಬಾರಿ ಬಂದಿದ್ದೇನೆ. ಕರ್ನಾಟಕ ಇತಿಹಾಸದಲ್ಲಿ ಯಾವತ್ತೂ ರಾಜಕೀಯ ಪಕ್ಷಕ್ಕೆ ಇಂತಹ ದೃಶ್ಯ ನೋಡುವ ಸೌಭಾಗ್ಯ ಸಿಕ್ಕಿಲ್ಲ. ಎಲ್ಲಿ ನೋಡಿದರೂ ಕೇಸರಿ ಸಮುದ್ರದ ಅಲೆ ಏಳುತ್ತಿದೆ. ಇದೆಂತಹ ಅದ್ಭುತ ದೃಶ್ಯ. ಅನಂತ್, ಪ್ರಹ್ಲಾದ್ ಹಾಗೂ ಅಶೋಕ್ ಬಳಿ ಕೇಳಿದೆ. ಈ ರೀತಿ ಮುಂಚೆ ಯಾವಾಗ ಹೀಗೆ ಆಗಿತ್ತು? ಅವರು ಹೇಳಿದರು. ಬಿಜೆಪಿ ಮಾತ್ರವಲ್ಲ, ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಯಾವತ್ತೂ ಇಷ್ಟು ಜನ ಸೇರಿರಲಿಲ್ಲ. ಇದರ ಹಿಂದೆ ಕರ್ನಾಟಕ ಬಿಜೆಪಿ ಕಾರ್ಯಕರ್ತರ ಶ್ರಮವಿದೆ. ನಿಮಗೆ ನನ್ನ ಅಭಿನಂದನೆ.
ಬಿಜೆಪಿ ಮೇಲೆ ದಾಳಿ ಹೆಚ್ಚಾಗುತ್ತಿದೆ. ನರೇಂದ್ರ ಮೋದಿ ಮೇಲೆಯೂ ದಾಳಿ ಹೆಚ್ಚಾಗುತ್ತಿದೆ. ಅವರಿಗೆ ಇಂತಹ ದೃಶ್ಯ ನೋಡಲು ಸಿಗುತ್ತಿಲ್ಲ. ಬಿಜೆಪಿಯನ್ನು ಸದೆಬಡಿಯಲು ಯಾವ ರೀತಿಯ ಭಾಷೆ ಪ್ರಯೋಗ, ಷಡ್ಯಂತ್ರ ನಡೆಯುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು. ಈ ಸಂದರ್ಭದಲ್ಲಿ ಇಬ್ಬರು ಪ್ರಧಾನಿಗಳನ್ನು ಸ್ಮರಿಸುತ್ತೇನೆ. ಭಾರತದ ಭಾಗ್ಯ ಬದಲಿಸಲು ಇಬ್ಬರು ಪ್ರಧಾನಿಗಳು ನಮಗೆ ಸಂದೇಶ ನೀಡಿದ್ದಾರೆ.
ಲಾಲ್ ಬಹಾದ್ದೂರ್ ಶಾಸ್ತ್ರಿ ಹೇಳಿದರು - 'ಜೈ ಜವಾನ್, ಜೈ ಕಿಸಾನ್'
ವಾಜಪೇಯಿ ಹೇಳಿದರು - 'ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್'
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications