5 ವರ್ಷಗಳ ನಂತರ ಗಾಲಿ ರೆಡ್ಡಿ, ಬಂಧುಗಳೇ ಅಂದಾಗ!
ಬಂಧುಗಳೇ, ಏನು ಈ ಐದು ವರ್ಷ ನಡೆಯಿತು ಎನ್ನೋದನ್ನಾ ಮರೆತುಬಿಟ್ಟಿದ್ದೀನಿ. ನಾನು ಇವತ್ತು ಇಲ್ಲಿ ನಿಲ್ಲಲು 'ರೆಡ್ಡಿ' ಅನ್ನುವುದೇ ಕಾರಣ...ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭರ್ಜರಿ ಭಾಷಣ, ರೆಡ್ಡಿ ಜನ ಸಂಘದ ಸಮಾವೇಶ ಮುಖ್ಯ ಆಕರ್ಷಣೆಯಾಗಿತ್ತು
ಬೆಂಗಳೂರು, ಜನವರಿ 30: ರೆಡ್ಡಿ ಜನ ಸಂಘದ ಪ್ರಪ್ರಥಮ ಸಮಾವೇಶದಲ್ಲಿ ಹೇಗೆಲ್ಲ ಮಿಂಚಬೇಕು ಎಂದು ಯಾರೆಲ್ಲ ಯೋಜನೆ ಹಾಕಿಕೊಂಡಿದ್ರೋ ಗೊತ್ತಿಲ್ಲ. ಆದರೆ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸರಿ ಸುಮಾರು ಐದು ವರ್ಷಗಳ ಬಳಿಕ ಬೃಹತ್ ಸಮಾವೇಶದಲ್ಲಿ ಕಾಣಿಸಿಕೊಂಡಿದ್ದಲ್ಲದೆ, ಮೈಕ್ ಹಿಡಿದು ಕ್ವಿಕ್ ಆಗಿ ಭಾಷಣ ಮಾಡಿ ಭಾರಿ ಚಪ್ಪಾಳೆ ಗಿಟ್ಟಿಸಿಕೊಂಡರು.
ಮಾಜಿ ಮುಖ್ಯಮಂತ್ರಿ ಹಾಲಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಸ್ವಾಗತಿಸಿ ವೇದಿಕೆಗೆ ಕರೆ ತಂದ ಸತೀಶ್ ರೆಡ್ಡಿ ಅವರ ಹಿಂಬದಿಯಲ್ಲೇ ಇದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಏನು ಹುಕ್ಕಿ ಬಂತೋ ಗೊತ್ತಿಲ್ಲ.[ರೆಡ್ಡಿ ಸಮುದಾಯಕ್ಕೆ ಆಶ್ವಾಸನೆ ಕೊಟ್ಟ ಸಿದ್ದರಾಮಯ್ಯ]

ಮೈಕ್ ಹತ್ತಿರಕ್ಕೆ ಬಂದು, ಬಂಧುಗಳೇ ಎನ್ನುತ್ತಿದ್ದಂತೆ, ಭಾರಿ ಚಪ್ಪಾಳೆಯ ಸ್ವಾಗತ ಸಿಕ್ಕಿತು. ಒಂದು ಕ್ಷಣ ಬಿಜೆಪಿಯ ಹಿರಿ-ಕಿರಿ ತಲೆಗಳತ್ತ ಅತ್ತ ತಿರುಗಿ ನೋಡುವಂತಾಯಿತು. ಭಾಷಣ ಮುಂದುವರೆಸಿದ ಗಾಲಿ ರೆಡ್ಡಿ, ಏನು ಈ ಐದು ವರ್ಷ ನಡೆಯಿತು ಎನ್ನೋದನ್ನಾ ಮರೆತುಬಿಟ್ಟಿದ್ದೀನಿ. ನಾನು ಇವತ್ತು ಇಲ್ಲಿ ನಿಲ್ಲಲು 'ರೆಡ್ಡಿ' ಅನ್ನುವುದೇ ಕಾರಣ, ನನ್ನನ್ನು ಈ ಮಟ್ಟಕ್ಕೆ ತಂದಿತ್ತು, ನನಗೆ ಗೌರವ ನೀಡುತ್ತಿರುವುದಕ್ಕೆ ರೆಡ್ಡಿ ಅನ್ನುವುದೇ ಕಾರಣ ಎಂದರು.
ನಾನೇನು ರಾಜಕೀಯವಾಗಿ ಬೆಳೆದು ಸಿಎಂ ಆಗಬೇಕಾಗಿಲ್ಲ. ರಾಜಕೀಯವಾಗಿ ಯಾವ ಆಶೆನೂ ಉಳಿದಿಲ್ಲ. ನಾನು ನನ್ನ ಸಮುದಾಯಕ್ಕೆ ಮುಂದಿನ ಅವಧಿಯನ್ನು ಮೀಸಲಿಡುತ್ತೇನೆ. ನನ್ನ ಸಮುದಾಯ ಚಿನ್ನಕ್ಕೆ ಸಮನಾಗಿದೆ ಎಂದರು.
ಸಮಾವೇಶದಲ್ಲಿ ರೆಡ್ಡಿ ಸಮುದಾಯವನ್ನು 2ಎಗೆ ಸೇರಿಸಬೇಕು, ಕೇಂದ್ರ ಮೀಸಲಾತಿ ನೀತಿಯಡಿ ಒಬಿಸಿ ಸೇರಿಸಬೇಕು, ಮಹಾಯೋಗಿ ವೇಮನ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರ್ಕಾರ ವತಿಯಿಂದ ಆಚರಿಸಬೇಕು ಎಂಬುದು ಬಹುಕಾಲದ ಬೇಡಿಕೆ ಎಂದು ಹೇಳಿ ಮೈಕ್ ಬಿಟ್ಟು ಸರಿದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಸಚಿವ ಎಂಬಿ ಪಾಟೀಲ್, ಮಾಜಿ ಸಚಿವ ಜನಾರ್ದನ ರೆಡ್ಡಿ, ಪರಿಸರವಾದಿ ಯಲ್ಲಪ್ಪ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications