ಬೆಂಗಳೂರು ಪೊಲೀಸರ ಮೂರ್ಖತನ ಇದೇ ಮೊದಲಲ್ಲ
ಬೆಂಗಳೂರು, ಏಪ್ರಿಲ್, 19: ಬೆಂಗಳೂರು ಪೊಲೀಸರ ಮೂರ್ಖತನಕ್ಕೆ ನಾಗರಿಕರು ಮಂಗಳವಾರ ನಲುಗಿ ಹೋಗಿದ್ದಾರೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ಪರಿಣಾಮ ಸಾಮಾನ್ಯ ನಾಗರಿಕರು ಪರಿತಪಿಸಿದ್ದಾರೆ.
ಸೋಮವಾರ ಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ ನಡೆದಾಗಲೇ ಪೊಲೀಸರು ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ಬೊಮ್ಮನಹಳ್ಳಿಯಲ್ಲಿ ಮಾತ್ರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಉಳಿದ ಭಾಗಗಳನ್ನು ಮರೆತಿದ್ದರು.[ಗಾರ್ಮೆಂಟ್ಸ್ ಪ್ರತಿಭಟನೆ ಕ್ಷಣ ಕ್ಷಣದ ಮಾಹಿತಿ]
ಮಂಗಳವಾರ ಬೆಳಗ್ಗೆ ಎಂದಿನಂತೆ ಶಾಂತ ರೀತಿಯಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಆದರೆ ಇದ್ದಕ್ಕಿದ್ದಂತೆ ನಗರದ ನಾಲ್ಕು ಕಡೆಯ ಗಾರ್ಮೆಂಟ್ಸ್ ಕಾರ್ಮಿಕರು ಬೀದಿಗಿಳಿದರು. ಆನೇಕಲ್, ಹೆಬ್ಬಗೋಡಿ, ಪೀಣ್ಯ, ಮೈಸೂರು ರಸ್ತೆ, ಗೊರಗುಂಟೆ ಪಾಳ್ಯ, ಬೊಮ್ಮನಹಳ್ಳಿ ಹೀಗೆ ಎಲ್ಲ ದಿಕ್ಕಿನಲ್ಲಿ ನುಗ್ಗಿ ಬಂದ ಕಾರ್ಮಿಕರನ್ನು ತಡೆಯಲು ಪೊಲಿಸರ ಬಳಿ ಸಾಧ್ಯವಾಗಲಿಲ್ಲ...[ನೀರು ಕೇಳಿದ್ದವರ ರಕ್ತ ಬಸೆದಿದ್ದ ಸರ್ಕಾರ]

ಸೂಟು ಬೂಟಿನ ಪ್ರತಿಭಟನಾಕಾರರಿಲ್ಲ
ಇಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗುತ್ತಿರುವವರು ಯಾವ ಸೂಟು ಬೂಟಿನ ಕಾರ್ಮಿಕ ನಾಯಕರಲ್ಲ. ಎಂಟು-ಹತ್ತು ಸಾವಿರ ಸಂಬಳ ತೆಗೆದುಕೊಳ್ಳುವ ದಿನಗೂಲಿ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದ್ದಾರೆ.

ಏಕ ನಾಯಕನಿಲ್ಲ
ಉಳಿದ ಪ್ರತಿಭಟನೆಗಳಿಗಿರುವಂತೆ ಇಲ್ಲಿ ಯಾವ ಒಬ್ಬ ನಾಯಕ ಇಲ್ಲ. ಅಲ್ಲಲ್ಲಿ ಸಾವಿರ, ಎರಡು ಸಾವಿರ ಕಾರ್ಮಿಕರು ಒಂದಾಗಿ ರಸ್ತೆ ತಡೆ ನಡೆಸುತ್ತಿದ್ದಾರೆ. ಬಿಟಂಟಿಸಿ ಬಸ್ ಗಳ ಮೇಲೂ ದಾಳಿ ಮಾಡಿದ್ದಾರೆ.

ರೈತರ ಪ್ರತಿಭಟನೆ
ನೀರು ಕೇಳಿಕೊಂಡು ರಾಜಧಾನಿಗೆ ಬಂದಿದ್ದ ರೈತರನ್ನು ನಿಯಂತ್ರಿಸಲು ಸಾಧ್ಯವಾಗದೇ ಅಂತಿಮವಾಗಿ ರಾಜ್ಯ ಸರ್ಕಾರ ಲಾಠಿ ಬೀಸಿತ್ತು. ರೈತರ ರಕ್ತ ಬಸಿದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಎದುರಾಗಿತ್ತು.

ಪರಿಣಾಮವೇನು
ಈಗ ಸಹ ಕಾರ್ಮಿರಕ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಅಲ್ಲದೇ ಗಾಳಿಯಲ್ಲೂ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ನಿಯಂತ್ರಣಕ್ಕೆ ತರಲು ಪ್ರಯತ್ನ ಮಾಡಲಾಗುತ್ತಿದೆ.

ನಾಗರಿಕರ ಆಕ್ರೋಶ
ಸರಿಯಾದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಾಮಾನ್ಯ ನಾಗರಿಕರು ಹಿಡಿಶಾಪ ಹಾಕವಂತೆ ಆಗಿದೆ. ಒಟ್ಟಿನಲ್ಲಿ ನಗರದ ಜನ ಜೀವನವನ್ನು ಒಂದು ದಿನದ ಮಟ್ಟಿಗೆ ಕಾರ್ಮಿಕರ ಪ್ರತಿಭಟನೆ ಬಲಿ ತೆಗೆದುಕೊಂಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ












Click it and Unblock the Notifications