ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಹತ್ಯೆ ಆರೋಪಿ ಪರಶುರಾಮ್ ನ್ಯಾಯಾಂಗ ಬಂಧನ ವಿಸ್ತರಣೆ

By Manjunatha
|
Google Oneindia Kannada News

ಬೆಂಗಳೂರು, ಜೂನ್ 25: ಗೌರಿ ಲಂಕೇಶ್ ಹತ್ಯೆ ಆರೋಪಿ ಪರಶುರಾಮ್ ವಾಘ್ಮೋರೆಯ ನ್ಯಾಯಾಂಗ ಬಂಧನವನ್ನು ವಿಸ್ತರಣೆಗೊಳಿಸುವಂತೆ ಎಸ್‌ಐಟಿ ನೀಡಿದ್ದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

14 ದಿನಗಳ ಎಸ್‌ಐಟಿ ಕಸ್ಟಡಿ ಅಂತ್ಯವಾದ ಕಾರಣ ಪರಶುರಾಮ್‌ನನ್ನು ಎಸ್ಐಟಿಯು 3ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಿತ್ತು.

ಗೌರಿ ಹತ್ಯೆ ಆರೋಪಿಯಿಂದ ಮತ್ತೊಂದು ಸ್ಫೋಟಕ ಮಾಹಿತಿ ಹೊರಕ್ಕೆ ಗೌರಿ ಹತ್ಯೆ ಆರೋಪಿಯಿಂದ ಮತ್ತೊಂದು ಸ್ಫೋಟಕ ಮಾಹಿತಿ ಹೊರಕ್ಕೆ

ಪರಶುರಾಮ್‌ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿತು. ಆದೇಶಕ್ಕೂ ಮುನ್ನಾ ಪರಶುರಾಮ್‌ನನ್ನು ಹಲವು ಪ್ರಶ್ನೆಗಳನ್ನು ನ್ಯಾಯಾಧೀಶರು ಕೇಳಿದರು.

Gauri Lankesh murder accused judicial costedy extension

ಪೊಲೀಸರು ಹೊಡೆದರಾ, ನಿಂದಿಸಿದರಾ, ಕಸ್ಟಡಿಯಲ್ಲಿ ಏನಾದರೂ ತೊಂದರೆಯಾಯಿತಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ನೀಡಿದರು.

ತಂದೆ-ತಾಯಿಯನ್ನು ಭೇಟಿಯಾದ ಪರುಶರಾಮ್ ವಾಘ್ಮೋರೆ ತಂದೆ-ತಾಯಿಯನ್ನು ಭೇಟಿಯಾದ ಪರುಶರಾಮ್ ವಾಘ್ಮೋರೆ

ಪರಶುರಾಮ್ ವಾಘ್ಮೋರೆಯನ್ನು ಎಸ್‌ಐಟಿ ತಂಡ 14 ದಿನಗಳಿಂದ ತೀವ್ರ ವಿಚಾರಣೆ ನಡೆಸಿದ್ದು, ಹಲವು ಮಹತ್ವದ ವಿಚಾರಗಳನ್ನು ಬಯಲಿಗೆಳೆದಿದೆ. ವಾಘ್ಮೋರೆಯೇ ಗೌರಿ ಲಂಕೇಶ್‌ಗೆ ಗುಂಡು ಹೊಡೆದಿರುವುದು ಎಂದು ಎಸ್‌ಐಟಿ ಕೋರ್ಟ್‌ಗೆ ಹೇಳಿದ್ದು ಹೆಚ್ಚಿನ ತನಿಖೆ ಕೈಗೊಂಡಿದೆ.

English summary
Gauri Lankesh murder accused Parashuram Vagmore's judicial costedy has been extension. 3rd ACMM court has ordered judicial costedy extension.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X