ಹಂತಕರು 15 ದಿನದಿಂದ ಗೌರಿ ಲಂಕೇಶ್ ಹಿಂಬಾಲಿಸುತ್ತಿದ್ದರು
Recommended Video

ಬೆಂಗಳೂರು, ಸೆಪ್ಟೆಂಬರ್ 07 : ಗೌರಿ ಲಂಕೇಶ್ ಹತ್ಯೆ ಒಂದು ಪೂರ್ವನಿಯೋಜಿತ ಕೃತ್ಯ ಎಂಬುದು ಬಯಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಹಂತಕರು 15 ದಿನಗಳಿಂದ ಗೌರಿ ಲಂಕೇಶ್ ಅವರನ್ನು ಹಿಂಬಾಲಿಸುತ್ತಿದ್ದರು.
ಗೌರಿ ಲಂಕೇಶ್ ಹತ್ಯೆಯ ತನಿಖೆ ನಡೆಸುತ್ತಿರುವ ತಂಡದ ಅಧಿಕಾರಿಗಳು ಒನ್ ಇಂಡಿಯಾಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬುದು ಗೌರಿ ಲಂಕೇಶ್ ಅವರಿಗೂ ತಿಳಿದಿತ್ತು. ಆದ್ದರಿಂದ, ಅವರು ಮನೆಗೆ ಸಿಸಿಟಿವಿ ಅಳವಡಿಸಿದ್ದರು.

ಮಂಗಳವಾರ ರಾತ್ರಿ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿದೆ. ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಅವರು ತಾಯಿಯ ಬಳಿ ಹೇಳಿಕೊಂಡಿದ್ದರು. ಗಾಂಧಿ ಬಜಾರಿನ ಕಚೇರಿಯಿಂದ ಆರ್.ಆರ್.ನಗರದ ನಿವಾಸದ ತನಕ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ ಎಂಬುದು ಸದ್ಯದ ಮಾಹಿತಿ.
ಗೌರಿ ಲಂಕೇಶ್ ಅವರ ನಿವಾಸ, ಅಕ್ಕ-ಪಕ್ಕದ ರಸ್ತೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ತಮ್ಮನ್ನು ಅಪರಿಚಿತರು ಹಿಂಬಾಲಿಸುತ್ತಿರುವುದನ್ನು ತಿಳಿದಿದ್ದ ಗೌರಿ ಲಂಕೇಶ್ ಅವರು, ಪೊಲೀಸರಿಗೆ ಮಾತ್ರ ಈ ಕುರಿತು ಮಾಹಿತಿ ನೀಡಿರಲಿಲ್ಲ.
ಗೌರಿ ಲಂಕೇಶ್ ಅವರು ಸೋಮವಾರ ಗೃಹ ಸಚಿವರನ್ನು ಭೇಟಿಯಾಗುವ ಕಾರ್ಯಕ್ರಮವಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಗೃಹ ಸಚಿವರನ್ನು ಭೇಟಿ ಮಾಡಿದ್ದರೆ ಈ ಬಗ್ಗೆ ಮಾಹಿತಿ ನೀಡುತ್ತಿದ್ದರೆನೋ? ಎಂದು ಪೊಲೀಸರು ಹೇಳಿದ್ದಾರೆ.
ಹತ್ಯೆ ಮಾಡಲು ಮೊದಲೇ ಸಂಚು ರೂಪಿಸಿದ್ದ ತಂಡ ಸುಮಾರು ಒಂದು ತಿಂಗಳಿನಿಂದ ಅವರ ಚಲನ-ವಲನದ ಬಗ್ಗೆ ಮಾಹಿತಿ ಸಂಗ್ರಹಿಸಿರಬಹುದು. ಇಬ್ಬರು ವ್ಯಕ್ತಿಗಳು ಅವನ್ನು ಹಿಂಬಾಲಿಸಿರಬಹುದು ಎಂದು ತನಿಖೆಯ ವೇಳೆ ತಿಳಿದುಬಂದಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications