ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಹತ್ಯೆ ಆರೋಪಿಗಳಿಗೆ ಎಸ್‌ಐಟಿಯಿಂದ 'ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್'?

By Manjunatha
|
Google Oneindia Kannada News

Recommended Video

ಗೌರಿ ಲಂಕೇಶ್ ಹಂತಕರಿಗೆ ಸಿಕ್ತು ಥರ್ಡ್ ಡಿಗ್ರಿ ಟ್ರೀಟ್ಮೆಂಟ್

ಬೆಂಗಳೂರು, ಜೂನ್ 19: ಗೌರಿ ಹತ್ಯೆ ಆರೋಪಿಗಳಿಗೆ ಎಸ್‌ಐಟಿ ಪೊಲೀಸರು 'ಥರ್ಡ್ ಡಿಗ್ರಿ ಟ್ವೀಟ್‌ಮೆಂಟ್' ನೀಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯಗಳಿಗೆ ಈ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದೆ.

ಗೌರಿ ಹತ್ಯೆ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ ಯಡವೆ, ರಾಮಚಂದ್ರ ದೆಗ್ವೇಕರ್ ಅವರುಗಳಿಗೆ ವಿಚಾರಣೆ ವೇಳೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಗಳ ಪರ ವಕೀಲ ರಿಟ್ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದರು.

ಗೌರಿ ಲಂಕೇಶ್‌ರನ್ನು ಕೊಲ್ಲಲು ಕೊಟ್ಟಿದ್ದು ಕೇವಲ 13000 ರೂಪಾಯಿ ಗೌರಿ ಲಂಕೇಶ್‌ರನ್ನು ಕೊಲ್ಲಲು ಕೊಟ್ಟಿದ್ದು ಕೇವಲ 13000 ರೂಪಾಯಿ

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಕೆ.ಎನ್.ಫಣೀಂದ್ರ, ಈ ಕುರಿತು ದಾಖಲೆಗಳನ್ನು ಪರಿಶೀಲಿಸುವಂತೆ ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸಿದೆ.

Gauri Murder accused filed RIT application to high court

ಅರ್ಜಿದಾರರಿಗೆ ಪೊಲೀಸರು ನೀಡಿರುವ ಚಿತ್ರಹಿಂಸೆಯ ಬಗ್ಗೆ 1 ಮತ್ತು 3ನೇ ಎಸಿಎಂಎಂ ಕೋರ್ಟ್‌ ಗಮನಕ್ಕೆ ತರಲಾಗಿದೆ. ಆದರೂ, ಅರ್ಜಿದಾರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಆದೇಶಿಸಿಲ್ಲ' ಎಂದು ಆಕ್ಷೇಪಿಸಿದ್ದರು.

ಆರೋಪಿಗಳ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ಪರ ವಕೀಲ ರಾಚಯ್ಯ, ಆರೋಪಿಗಳನ್ನುಇ ಈಗಾಗಲೇ ಹಲವು ಬಾರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಆದರೆ ಅವರು ಇದರ ಬಗ್ಗೆ ಒಮ್ಮೆಯೂ ನ್ಯಾಯಾಧೀಶರ ಗಮನಕ್ಕೆ ತಂದಿಲ್ಲ' ಎಂದರು.

ಗೌರಿ ಹತ್ಯೆಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಆರೋಪಿ ಪರಶುರಾಮ್ಗೌರಿ ಹತ್ಯೆಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಆರೋಪಿ ಪರಶುರಾಮ್

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಸೂಚನೆ ನೀಡಿರುವುದರಿಂದ ವಿಚಾರಣಾ ನ್ಯಾಯಾಲಯವು ಆರೋಪಿಗಳ ವೈದ್ಯಕೀಯ ಪರೀಕ್ಷೆ ಹಾಗೂ ಹೇಳಿಕೆ ದಾಖಲಿಗೆ ಎಸ್‌ಐಟಿಗೆ ಸೂಚಿಸಲಿದೆ.

English summary
Gauri Lankesh murder accused filed RIT application to high court that SIT police giving 'third degree treatment' to them in the name of investigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X