ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಮನ್ವಯ ಸಮಿತಿಗೆ ಸೇರ್ಪಡೆ ವಿಚಾರ: ಕಾದು ನೋಡೋಣ ಎಂದ ವಿಶ್ವನಾಥ್

|
Google Oneindia Kannada News

ಬೆಂಗಳೂರು, ಸೆ.27: ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಆದ ನಂತರ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಸದಸ್ಯನಾಗಬೇಕಿತ್ತು. ಆದರೆ ಅಧ್ಯಕ್ಷ ಆಗಿಬಿಟ್ಟೆ ಎಂಬ ಕಾರಣಕ್ಕೆ ನಾನಾಗಿಯೇ ಹೋಗಿ ಸಮನ್ವಯ ಸಮಿತಿ ಸಭೆಯಲ್ಲಿ ಹೋಗಿ ಕುಳಿತುಕೊಳ್ಳಲು ಆಗವುದಿಲ್ಲ. ಹೀಗಾಗಿ ಸ್ವಲ್ಪ ಕಾದು ನೋಡಬೇಕು ಎಂದು ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿಗೆ ಹೋಗಬೇಕೆಂಬ ಇಚ್ಛೆ ಇದೆ ಆದರೆ ರಾಜ್ಯಾಧ್ಯಕ್ಷರಾದ ತಕ್ಷಣ ಹೋಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಮುಂದೆ ನೋಡೋಣ ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದರು.

'ಸಮನ್ವಯ ಸಮಿತಿಗೆ ನನ್ನನ್ನು ಬರಬೇಡಿ ಎನ್ನಲು ಸಿದ್ದರಾಮಯ್ಯ ಯಾರು?' 'ಸಮನ್ವಯ ಸಮಿತಿಗೆ ನನ್ನನ್ನು ಬರಬೇಡಿ ಎನ್ನಲು ಸಿದ್ದರಾಮಯ್ಯ ಯಾರು?'

ಪಕ್ಷದಲ್ಲಿ ಆರೋಪ, ಪ್ರತ್ಯಾರೋಪಗಳು ಸಹಜ, ಇದು ಎಲ್ಲಾ ಪಕ್ಷಗಳಲ್ಲೂ ಇರುತ್ತೆ, ಪಂಚಾಯ್ತಿ ಮಟ್ಟದಿಂದ ಪಾರ್ಲಿಮೆಂಟ್ ವರೆಗೂ ಎಷ್ಟು ಜನ ಕ್ರಿಮಿನಲ್ ಹಿನ್ನೆಲೆಯವರಿಲ್ಲ ಹೇಳಿ, ಒಮ್ಮೊಮ್ಮೆ ರಾಜಕೀಯದಲ್ಲಿ ಇದೆಲ್ಲಾ ಆಗುತ್ತದೆ ಎಂದರು.

H.Vishwanath still hope to join coordination committee

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಎಚ್ ವಿಶ್ವನಾಥ್ ಸಂದರ್ಶನಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಎಚ್ ವಿಶ್ವನಾಥ್ ಸಂದರ್ಶನ

ಜೆಡಿಎಸ್ ಎಂಎಲ್ ಸಿ ಅಭ್ಯರ್ಥಿಯಾಗಿ ರಮೇಶ್ ಗೌಡ ಆಯ್ಕೆ ವಿಚಾರ ಮಾತನಾಡಿ, ನಮ್ಮ ರಾಷ್ಟ್ರಾಧ್ಯಕ್ಷರು ಒಪ್ಪಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ, ಇದು ಮುಗಿದ ಅಧ್ಯಾಯ ದೊಡ್ಡವರು ಎಲ್ಲರ ಸಹಮತ ಪಡೆದು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

English summary
JDS state president H.Vishwanath has said that he wouldn't go and sit in coordination committee meeting as he had become party state president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X