ಮಾರ್ಚ್ 22ಕ್ಕೆ ನೀರಿನ ಅದಾಲತ್: ದೂರುಗಳ ಕುರಿತು ಮುಕ್ತ ಚರ್ಚೆ
ಬೆಂಗಳೂರು, ಮಾರ್ಚ್ 21: ಬೆಂಗಳೂರು ಜನಮಂಡಳಿಯು ಮಾರ್ಚ್ 22ರಂದು ನೀರಿನ ಅದಾಲತ್ ನ್ನು ಬೆಳಗ್ಗೆ 9.30ರಿಂದ 11ಗಂಟೆಯವರೆಗೆ ನಡೆಸಲಿದೆ.
ಈಶಾನ್ಯ-3 ಉಪವಿಭಾಗದಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆಯಲ್ಲಿ ವಿಳಂಬ ಮತ್ತಿತರೆ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಗುರುವಾರ ನೀರಿನ ಅದಾಲತ್ ನಡೆಯಲಿದೆ.
ನೀರಿನ ಮಹತ್ವ ಸಾರಲು ವಾಕಥಾನ್ ಏರ್ಪಡಿಸಿದ ಎಂಟರ ಬಾಲೆ
ಗುರುವಾರ (ಈಶಾನ್ಯ-3) ಉಪವಿಭಾಗದ ವ್ಯಾಪ್ತಿಗೆ ಬರುವ ಆರ್.ಟಿ.ನಗರ, ಕಾವಲ್ ಭೈರಸಂದ, ಸಂಜಯನಗರ, ಬಿ.ಇ.ಎಲ್ ರಸ್ತೆ, ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು 3ನೇ ಅಡ್ಡರಸ್ತೆ, ಪಿ ಟಿ ಕಾಲೋನಿ, ಆರ್.ಟಿ.ನಗರ ಇಲ್ಲಿ ನಡೆಸಲಿದ್ದು ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ಈಶಾನ್ಯ)22945124. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಈಶಾನ್ಯ-3) ಉಪವಿಭಾಗ-22945139. ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ-22238888, ಸಹಾಯವಾಣಿ 1916 ಹಾಗೂ ವಾಟ್ಸ್ ಆಪ್ ಸಂಖ್ಯೆ-8762228888 ಗೆ ಸಂಪರ್ಕಿಸಬಹುದಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಗಳ ಸೌಲಭ್ಯ ಬಳಸಿಕೊಳ್ಳ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.