ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಸ್ತೆಗುಂಡಿ ಮುಚ್ಚುವ ಗಂಡಾಗುಂಡಿ ತಡೆಗೆ ಕೋರ್ಟ್ ಕಮಿಷನ್ ನೇಮಕ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗುಂಡಿಗಳನ್ನು ಮುಚ್ಚಲು ಸೆ.24ರವರೆಗೆ ಹೈಕೋರ್ಟ್ ಗಡುವು ನೀಡಿತ್ತು. ಸೋಮವಾರ ನಡೆಸಿದ ವಿಚಾರಣೆಯಲ್ಲಿ ಕೇವಲ 300 ಗುಂಡಿಗಳು ಮಾತ್ರ ಬಾಕಿ ಇವೆ ಎಂದು ಬಿಬಿಎಂಪಿ ಹೇಳಿತ್ತು, ಅದನ್ನು ಮುಚ್ಚಲು ಎರಡು ಗಂಟೆಗಳ ಗಡುವು ನೀಡಲಾಗಿತ್ತು.

ಸೆ.24ರೊಳಗೆ ಗುಂಡಿ ಮುಕ್ತ ಬೆಂಗಳೂರು: ಹೈಕೋರ್ಟ್ ಡೆಡ್ ಲೈನ್ ಸೆ.24ರೊಳಗೆ ಗುಂಡಿ ಮುಕ್ತ ಬೆಂಗಳೂರು: ಹೈಕೋರ್ಟ್ ಡೆಡ್ ಲೈನ್

ನಗರದಲ್ಲಿರುವ ಎಲ್ಲಾ ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚಲಾಗಿದೆಯೇ , ಈ ಭರ್ತಿ ಮಾಡಿರುವ ಗುಂಡಿಗಳನ್ನು ಪರಿಶೀಲಿಸಲು ಇಬ್ಬರು ಸದಸ್ಯರನ್ನೊಳಗೊಂಡ ಕೋರ್ಟ್ ಕಮಿಷನ್ ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನೆರಡು ದಿನ ಮುಂದುವರಿಯುವ ಸೂಚನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನೆರಡು ದಿನ ಮುಂದುವರಿಯುವ ಸೂಚನೆ

ಬಿಬಿಎಂಪಿ ಸಂಪೂರ್ಣವಾಗಿ ಗುಂಡಿ ಮುಚ್ಚಲಾಗಿದೆ ಎನ್ನಲಾದ ಪಶ್ಚಿಮ ವಲಯದ ಯಲಹಂಕ, ಮಲ್ಲೇಶ್ವರ ಮತ್ತು ಮಹಾಲಕ್ಷ್ಮೀ ಲೇಔಟ್ ಪ್ರದೇಶವನ್ನು ಪರಿಶೀಲಿಸಿ, ಪ್ರಾಥಮಿಕ ವರದಿ ಸಲ್ಲಿಸಬೇಕು. ಕಮಿಷನ್ ಮಂಗಳವಾರ ಮಧ್ಯಾಹ್ನ 3.30ರ ನಂತರ ಕಾರ್ಯಾರಂಭ ಮಾಡಬೇಕು.

HC forms court commission on pothole filling in Bengaluru

ಮುಚ್ಚಿರುವ ಗುಂಡಿಗಳನ್ನು ಪರಿಶೀಲಿಸಿಪ್ರತಿ ಸೂಕ್ಷ್ಮ ಅಂಶಗಳನ್ನು ಟಿಪ್ಪಣಿ ಮಾಡಿಕೊಂಡು, ಅಗತ್ಯ ಕೋರ್ಟ್ ಕಮಿಷನ್ ದಿನವೂ ಕಾಮಗಾರಿ ಪರಿಶೀಲಿಸಿ ಅಂತಿಮವಾಗಿ ಸಮಗ್ರ ವರದಿ ಸಲ್ಲಿಸಬೇಕೆಂದು ಸೂಚಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ

ಅಲ್ಲದೆ, ಕೋರ್ಟ್ ಕಮಿಷನ್ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ನ್ಯಾಯಾಲಯವು ಅಗತ್ಯ ಆದೇಶ ಹೊರಡಿಸಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ. ಬಿಬಿಎಂಪಿ ಅಧಿಕಾರಿಗಳು ಹಾಗೂ ಎಂಜಿನಿಯರ್ ಗಳು, ಐಐಎಸ್ ಸಿ ಎಂಜಿನಿಯರ್ ಗಳು ತಮ್ಮ ಅನಿಸಿಕೆಗಳನ್ನು ಕಮಿಷನರ್‌ ಗೆ ತಿಳಿಸಬಹುದಾಗಿದೆ.

English summary
Condemning BBMPs failure in pothole filling operations, high court has formed court commission on supervision the pothole filling work headed by MEG engineer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X