ಬಿಬಿಎಂಪಿಯಲ್ಲಿ ಮೈತ್ರಿ ಮುರಿಯುವ ಮಾತನಾಡಿದ ಕುಮಾರಸ್ವಾಮಿ!
ಬೆಂಗಳೂರು, ನವೆಂಬರ್ 04 : 'ಎಲ್ಲಿ ಹೋದರು ಗುಂಡಿ, ಕಸದ ರಾಶಿ. ಯಾವ ಪುರುಷಾರ್ಥಕ್ಕೆ ಆಡಳಿತ ಮಾಡುತ್ತಿದ್ದೀರಿ. ಇಂತಹ ಆಡಳಿತ ನೋಡಿ ಸಾಕಾಗಿದೆ. ಇದು ಹಿಗೇಯೇ ಮುಂದುವರೆದರೆ ನೀಡಿರುವ ಬೆಂಬಲ ವಾಪಸ್ ಪಡೆಯಬೇಕಾಗುತ್ತದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದರು.
ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಆಡಳಿತದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. 'ಫೋಟೋ ತೆಗಿಸಿಕೊಳ್ಳಲು ಮೇಯರ್ ಆದಿರಾ?' ಎಂದು ಮೇಯರ್ ಮಂಜುನಾಥ ರೆಡ್ಡಿ ಅವರನ್ನು ಪ್ರಶ್ನಿಸಿದರು. [ಬಿಬಿಎಂಪಿ ಮೈತ್ರಿ : ಜೆಡಿಎಸ್ ಗೆ ಲಾಭ ಹೆಚ್ಚು]

'ಬೆಂಗಳೂರು ನಗರದ ಎಲ್ಲಿ ಹೋದರೂ ಗುಂಡಿ, ಕಸದ ರಾಶಿ. ಇದನ್ನು ಮುಂದಿಟ್ಟುಕೊಂಡು ಬಂಡವಾಳ ಹೂಡಿಕೆ ಮಾಡಿ ಎಂದು ಆಹ್ವಾನ ನೀಡುತ್ತಿದ್ದೀರಿ. ಬಿಬಿಎಂಪಿಯಲ್ಲಿ ನೀವು ಅಧಿಕಾರ ನಡೆಸುತ್ತಿರುವುದು ಯಾವ ಪುರುಷಾರ್ಥಕ್ಕಾಗಿ?' ಎಂದು ಕೇಳಿದರು. [ಬಿಬಿಎಂಪಿ ಮೈತ್ರಿ : ಎಲ್ಲಾ ಗೊಂದಲ ಬಗೆಹರಿಸಿದ ಎಚ್ಡಿಕೆ]
ಅಭಿವೃದ್ಧಿಗಾಗಿ ಬೆಂಬಲ : 'ಬಿಬಿಎಂಪಿಯಲ್ಲಿ ಹಿಂದೆ ಆಡಳಿತ ನೀಡಿದ ಬಿಜೆಪಿಯವರು ಲೂಟಿ ಹೊಡೆದಿದ್ದರು. ಈಗ ಕಾಂಗ್ರೆಸ್ ಸರ್ಕಾರವಿದೆ. ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆಯಲಿದೆ ಎಂಬ ಕಾರಣಕ್ಕೆ ಬಿಬಿಎಂಪಿ ಮೇಯರ್ ಆಯ್ಕೆ ಸಂದರ್ಭದಲ್ಲಿ ಜೆಡಿಎಸ್ ಬೆಂಬಲ ನೀಡಿತ್ತು' ಎಂದು ಕುಮಾರಸ್ವಾಮಿ ಹೇಳಿದರು. [ಬಿಬಿಎಂಪಿ ಮೈತ್ರಿಗೆ ಎಚ್ಡಿಕೆ ಅಸಮಾಧಾನ]
'ಮೈತ್ರಿ ಮಾಡಿಕೊಂಡ ದಿನವೇ ಪಶ್ಚಾತಾಪ ವಾಗಿತ್ತು. ಇಂತಹ ಆಡಳಿತ ನೋಡಿಕೊಂಡು ಎಷ್ಟು ದಿನ ಇರಲು ಸಾಧ್ಯ. ಧಿಮಾಕು ಮಾಡಿ ಎಂದು ನಿಮಗೆ ಆಡಳಿತ ನೀಡಿಲ್ಲ. ಇಂತಹ ಆಡಳಿತ ನಡೆಸಿದರೆ ಮೈತ್ರಿಯನ್ನು ವಾಪಸ್ ಪಡೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತೇನೆ' ಎಂದರು.
ಮುನಿರತ್ನ ವಿರುದ್ಧ ಗರಂ : ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, 'ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ನ ಬಿಬಿಎಂಪಿ ಸದಸ್ಯರು ಕಸವನ್ನು ತೆರವುಗೊಳಿಸಲು ಹೋದರೆ ಮುನಿರತ್ನ ಅವರು ಅಡ್ಡಿಪಡಿಸುತ್ತಾರೆ. ಬೆಂಗಳೂರು ನಗರದ ಬಗ್ಗೆ ನಿಮಗೆ ಕಾಳಜಿ ಇಲ್ಲವೇ?' ಎಂದು ಪ್ರಶ್ನಿಸಿದರು.
ಅಂದಹಾಗೆ 2015ರ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 100, ಕಾಂಗ್ರೆಸ್ 76, ಜೆಡಿಎಸ್ 14 ಸ್ಥಾನಗಳಲ್ಲಿ ಜಯಗಳಿಸಿತ್ತು. 8 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಜೆಡಿಎಸ್ ಕಾಂಗ್ರೆಸ್ ಮೈತ್ರಿಯಿಂದಾಗಿ ಅದಕ್ಕೆ ಮೇಯರ್ ಸ್ಥಾನ ಕೈತಪ್ಪಿತು. ಜೆಡಿಎಸ್ ಬೆಂಬಲ ಪಡೆದು ಮಂಜುನಾಥ ರೆಡ್ಡಿ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications