ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಖಾಡಕ್ಕಿಳಿದರು ಸ್ವತಃ ಎಚ್ ಡಿ ಕುಮಾರಸ್ವಾಮಿ: ಬಂಡಾಯ ಶಮನವಾಗುತ್ತಾ?

|
Google Oneindia Kannada News

Recommended Video

ಜಾರಕಿಹೊಳಿ ಸಹೋದರರ ಕೋಪ ಶಮನ ಮಾಡಲು ಸ್ವತಃ ಎಚ್ ಡಿ ಕೆ ಅಖಾಡಕ್ಕೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 18: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ನಿರಂತರ ರಾಜಕೀಯ ಬೆಳವಣಿಗೆಯ ನಡುವೆಯೂ ಯಾವ ಪ್ರತಿಕ್ರಿಯೆಯನ್ನೂ ನೀಡದೆ ಮೌನವಾಗಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೀಗ ಅಖಾಡಕ್ಕಿಳಿದಿದ್ದಾರೆ.

ಜಾರಕಿಹೊಳಿ ಸಹೊದರರ ಬಂಡಾಯ ಶಮನಕ್ಕೆ ಮುಂದಾಗಿರುವ ಅವರು, ಬಂಡಾಯ ಶಾಸಕರು ತಂಗಿರುವ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೊಟೇಲ್ ಗೆ ತೆರಳಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಅಖಾಡಕ್ಕಿಳಿದಿರುವುದು ಕರ್ನಾಟಕದ ರಾಜಕೀಯಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಎದುರು ರಮೇಶ್ ಜಾರಕಿಹೊಳಿ ಇರಿಸಿದ ಮೂರು ಬೇಡಿಕೆಗಳುಸಿದ್ದರಾಮಯ್ಯ ಎದುರು ರಮೇಶ್ ಜಾರಕಿಹೊಳಿ ಇರಿಸಿದ ಮೂರು ಬೇಡಿಕೆಗಳು

ಅತೃಪ್ತರೊಂದಿಗೆ ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆಯೂ ಹೆಚ್ಚು ಫಲ ನೀಡಿದ ಲಕ್ಷಣಗಳಿಲ್ಲ. ಇದೀಗ ಅತೃಪ್ತ ಶಾಸಕರು ಮಹಾರಾಷ್ಟ್ರಕ್ಕೆ ತೆರಳಿ, ಮುಂಬೈನ ರೆಸಾರ್ಟ್ ವೊಂದರಲ್ಲಿ ತಂಗಲಿದ್ದಾರೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಅಖಾಡಕ್ಕಿಳಿಯುವ ನಿರ್ಧಾರ ಮಾಡಿದ್ದಾರೆ.

HD Kumaraswamy himself try to convince rebel MLAs of Congress

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ: ಮುಂಬೈನತ್ತ ಬಂಡಾಯ ಶಾಸಕರು?ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ: ಮುಂಬೈನತ್ತ ಬಂಡಾಯ ಶಾಸಕರು?

ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬೇರೆ ಹಾದಿ ಇಲ್ಲದೆ ತಾಜ್ ವೆಸ್ಟೆಂಡ್ ಗೆ ತೆರಳಿರುವ ಕುಮಾರಸ್ವಾಮಿ ಅವರ ಭೇಟಿ ಫಲ ನೀಡುತ್ತಾ? ಸರ್ಕಾರ ಉಳಿಸಿಕೊಳ್ಳುವುದಕ್ಕಾಗಿ ಅತೃಪ್ತ ಶಾಸಕರ ಎಲ್ಲಾ ಬೇಡಿಕೆಗಳಿಗೂ ಎಚ್ಡಿಕೆ ತಲೆಯಲ್ಲಾಡಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

English summary
Chief minister HD Kumaraswamy himself has visited to Taj west end hotel in Bengaluru, where Congress rebel MLAs are stayed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X