ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಲೂಸ್ ಟಾಕ್ ನಿಂದ ಮನಸ್ಸು ಹಾಳು ಮಾಡಿದರು: ಜಮೀರ್ ಅಹ್ಮದ್

|
Google Oneindia Kannada News

ಬೆಂಗಳೂರು, ಆಗಸ್ಟ್ 1: ಒಂದು ತಿಂಗಳ ಹಿಂದೆ ಕೂಡ ಜೆಡಿಎಸ್ ನಲ್ಲೇ ಉಳಿಯುವ ಮನಸ್ಸಿತ್ತು. ಆದರೆ ಅದನ್ನು ತಮ್ಮ ಮಾತುಗಳಿಂದ ಕುಮಾರಸ್ವಾಮಿ ಹಾಳು ಮಾಡಿದರು ಎಂದು ಜೆಡಿಎಸ್ ನ ಭಿನ್ನಮತೀಯ ಶಾಸಕ ಜಮೀರ್ ಅಹ್ಮದ್ ಖಾನ್ ಮಂಗಳವಾರ ಹೇಳಿದ್ದಾರೆ.

ಏ ಕ್ಯಾ ಜಮೀರ್ ಭಾಯ್, ನಿಮ್ಮನ್ನು ಬೆಳೆಸಿದ ದೇವೇಗೌಡರಿಗೇ ಚಾಲೆಂಜಾ!ಏ ಕ್ಯಾ ಜಮೀರ್ ಭಾಯ್, ನಿಮ್ಮನ್ನು ಬೆಳೆಸಿದ ದೇವೇಗೌಡರಿಗೇ ಚಾಲೆಂಜಾ!

ತಮ್ಮ ಜನ್ಮದಿನಾಚರಣೆ ನಂತರ ಮಾಧ್ಯಮದವರ ಜತೆಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ರಾಜಕೀಯ ಗುರು. ಅವರ ಋಣ ನನ್ನ ಮೇಲಿದೆ. ನಮಗೆ (ಬಂಡಾಯ ಶಾಸಕರು) ಒಂದು ತಿಂಗಳ ಹಿಂದೆ ಜೆಡಿಎಸ್ ನಲ್ಲೇ ಉಳಿಯುವ ಮನಸ್ಸಿತ್ತು. ಕುಮಾರಸ್ವಾಮಿ ಅವರ ಲೂಸ್ ಟಾಕ್ ನಿಂದ ನಮ್ಮ ಮನಸ್ಸನ್ನು ಹಾಳು ಮಾಡಿದರು. ಇನ್ನು ಜೆಡಿಎಸ್ ನಲ್ಲಿ ಉಳಿಯುವ ಮನಸ್ಸಿಲ್ಲ ಎಂದರು.

HDK spoil our intention with lose talk: Zameer Ahmed

ನನಗೆ ಕಾಂಗ್ರೆಸ್ ಮಾತ್ರ ಆಯ್ಕೆಯಾಗಿ ಉಳಿದಿತ್ತು. ಕೋಮುವಾದಿ ಬಿಜೆಪಿ ಸೇರುವುದಿಲ್ಲ. ಇನ್ನು ನನ್ನ ರಾಜಕೀಯ ಗುರುಗಳು ದೇವೇಗೌಡರೇ ಹೊರತು ಕುಮಾರಸ್ವಾಮಿ ಅಲ್ಲ. ದೇವೇಗೌಡರ ವಿರುದ್ಧವಾಗಿ ಯಾವುದೇ ಹೇಳಿಕೆ ಕೊಡುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಜಮೀರ್ ಜೆಡಿಎಸ್ ಬಿಟ್ಟಿದ್ಯಾಕೆ, ರೇವಣ್ಣ ಕಂಡುಕೊಂಡ ಸತ್ಯ ಇದೇನಾ?ಜಮೀರ್ ಜೆಡಿಎಸ್ ಬಿಟ್ಟಿದ್ಯಾಕೆ, ರೇವಣ್ಣ ಕಂಡುಕೊಂಡ ಸತ್ಯ ಇದೇನಾ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಏನಾದರೂ ಜೆಡಿಎಸ್ ಗೆದ್ದರೆ ನನ್ನ ರುಂಡವನ್ನು ಕತ್ತರಿಸಿ ಇಡುತ್ತೇನೆ ಎಂದು ಜಮೀರ್ ಅಹ್ಮದ್ ಖಾನ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

English summary
Even one month back we were intended to stay in JDS. But after HD Kumaraswamy lose talk, we (rebellion MLA's of JDS) decided to leave the party, said by MLA Zameer Ahmed Khan in Bengaluru on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X