ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕೀಯ ಜಂಜಾಟದ ನಡುವೆಯೇ ಮುಂದುವರೆದ ಎಚ್ಡಿಕೆ ಟೆಂಪಲ್ ರನ್

|
Google Oneindia Kannada News

Recommended Video

ಮತ್ತೆ ಟೆಂಪಲ್ ರನ್ ಶುರು ಮಾಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯ ಸಮ್ಮಿಶ್ರ ಸರ್ಕಾರ ಅಸ್ಥಿರದ ಮಾತು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎನ್ನುವ ವಿಚಾರ ಸಮ್ಮಿಶ್ರ ಸರ್ಕಾರಕ್ಕೆ ತೀವ್ರ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ಮುಖಂಡರ ಕೆಲವು ಭರವಸೆಗಳ ಮೂಲಕ ಸ್ಥಿತಿ ಕೊಂಚ ಶಾಂತವಾಗಿದೆ.

ಇದೆಲ್ಲಾ ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ. ಶುಕ್ರವಾರ(ಸೆ.21)ರಂದು ಶೃಂಗೇರಿಗೆ ತೆರಳಲಿದ್ದಾರೆ.

ಚಿತ್ರಗಳು : ಆದಿಚುಂಚನಗಿರಿ ಮಠದಲ್ಲಿ ಕುಮಾರಸ್ವಾಮಿ ವಿಶೇಷ ಪೂಜೆ ಚಿತ್ರಗಳು : ಆದಿಚುಂಚನಗಿರಿ ಮಠದಲ್ಲಿ ಕುಮಾರಸ್ವಾಮಿ ವಿಶೇಷ ಪೂಜೆ

ಶುಕ್ರವಾರ ಸಂಜೆ ಶೃಂಗೇರಿಗೆ ತೆರಳಲಿದ್ದು ಶನಿವಾರ ಶಾರದಾಂಬೆ ದರ್ಶನ ಪಡೆಯಲಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಬಂದಿರುವ ತೊಂದರೆಗಳು ನಿವಾರಣೆಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

HDK temple run continues

10 ವರ್ಷಗಳ ಬಳಿಕ ಗೋಕರ್ಣ ದೇವಸ್ಥಾನ ಸರ್ಕಾರದ ವಶಕ್ಕೆ 10 ವರ್ಷಗಳ ಬಳಿಕ ಗೋಕರ್ಣ ದೇವಸ್ಥಾನ ಸರ್ಕಾರದ ವಶಕ್ಕೆ

ವಿಧಾನಸಭೆ ಚುನಾವಣೆಗೂ ಮುನ್ನ ಜನವರಿ ತಿಂಗಳಿನಲ್ಲಿ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಅತಿರುದ್ರಯಾಗ ನಡೆಸಿದ್ದರು. ದೇವೇಗೌಡ ಕುಟುಂಬದವರೆಲ್ಲರಿಗೂ ದೇವರ ಮೇಲೆ ಅತಿಯಾದ ನಂಬಿಕೆ ಇರುವುದು ನಿಜ, ಇದೇ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

English summary
Chief minister H.D.Kumaraswamy is visiting Shringeri on Friday and will take Darshanam of goddess Sharadambe
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X