ಧಾರಾಕಾರ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಬಿಬಿಎಂಪಿ ಕಾರ್ಮಿಕ
ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಬಿಬಿಎಂಪಿ ಕಾರ್ಮಿಕ ಶಾಂತ ಕುಮಾರ್ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದಾರೆ. ಸದ್ಯ ಅವರಿಗಾಗಿ ಅಗ್ನಿಶಾಮಕ ದಳದ 12 ಜನರ ತಂಡ ಹುಡುಕಾಟ ನಡೆಸುತ್ತಿದೆ.
ಬೆಂಗಳೂರು, ಮೇ 21: ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಬಿಬಿಎಂಪಿ ಕಾರ್ಮಿಕರೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಬಿಬಿಎಂಪಿ ಕಾರ್ಮಿಕ ಶಾಂತ ಕುಮಾರ್ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದಾರೆ. ಅವರು ಸಂಬಂಧದಲ್ಲಿ ಗುತ್ತಿಗೆದಾರ ಬಸವರಾಜ್ ಸೋದರಳಿಯ.ಸದ್ಯ ಅವರಿಗಾಗಿ ಅಗ್ನಿಶಾಮಕ ದಳದ 12 ಜನರ ತಂಡ ಹುಡುಕಾಟ ನಡೆಸುತ್ತಿದೆ.[ವಾರಾಂತ್ಯದ ಮಳೆಗೆ ಕಂಗಾಲಾದ ಬೆಂಗಳೂರಿಗರು, ನೆಲ ಕಂಡ ಮರಗಳು]

ಕುರುಬರ ಹಳ್ಳಿ ಪೈಪ್ ಲೈನ್ ಬ್ರಿಡ್ಜ್ ಬಳಿ ಅಗ್ನಿಶಾಮಕ ದಳದ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದ್ದು, ಹುಡುಕಾಟಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯೂ ಸಾಥ್ ನೀಡಿದೆ.ಇದಲ್ಲದೇ ಇದೀಗ ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯೂ ಹುಡುಕಾಟಕ್ಕೆ ಚಿಂತನೆ ನಡೆಸಲಾಗುತ್ತಿದೆ












Click it and Unblock the Notifications