ವಿ.ನಾಗರಾಜ್ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 21 : ಮಾಜಿ ರೌಡಿ ಶೀಟರ್ ವಿ.ನಾಗರಾಜ್ ಮತ್ತು ಅವರ ಇಬ್ಬರು ಪುತ್ರರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಮೇ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ವಿ.ನಾಗರಾಜ್ ಬಂಧಿಸಲಾಗಿತ್ತು.
ಗುರುವಾರ ಹೈಕೋರ್ಟ್ ವಿ.ನಾಗರಾಜ್, ಪುತ್ರರಾದ ಶಾಸ್ತ್ರೀ, ಗಾಂಧಿಗೆ ಏಳು ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ. ಮೇ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ನಾಗರಾಜ್ ಬಂಧಿಸಲಾಗಿತ್ತು.
ರೌಡಿ ಶೀಟರ್ ನಾಗನ ಪತ್ತೆಯ ಹಿಂದಿನ ರೋಚಕ ಕಹಾನಿ
2 ಲಕ್ಷ ರೂ. ಬಾಂಡ್, ಪ್ರತಿ ಗುರುವಾರ ಪೊಲೀಸ್ ಠಾಣೆಗೆ ಹಾಜರಾಗಬೇಕು ಎಂಬ ಷರತ್ತಿನ ಅನ್ವಯ ಜಾಮೀನು ಮಂಜೂರು ಮಾಡಲಾಗಿದೆ. ವಿ.ನಾಗರಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಿಷೇಧಿತ ನೋಟುಗಳು ಪತ್ತೆಯಾಗಿದ್ದವು.
ಸಿದ್ದರಾಮಯ್ಯ ಪಿಎ, ದಿನೇಶ್ ಗುಂಡೂರಾವ್ ವಿರುದ್ಧ ಬಾಂಬ್ ನಾಗ ಆರೋಪ
ಮನೆಯ ಮೇಲೆ ದಾಳಿ ನಡೆಯುತ್ತಿದ್ದಂತೆ ನಾಗರಾಜ್ ಮತ್ತು ಇಬ್ಬರು ಪುತ್ರರು ತಲೆಮರೆಸಿಕೊಂಡಿದ್ದರು. ಸುಮಾರು 27 ದಿನಗಳ ಬಳಿಕ ತಮಿಳುನಾಡಿನಲ್ಲಿ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು.
ತಲೆಮರೆಸಿಕೊಂಡಿದ್ದಾಗಲೇ 2 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ನಾಗ ಸಿದ್ದರಾಮಯ್ಯ ಪಿಎ ಸೇರಿದಂತೆ ಹಲವರ ವಿರುದ್ಧ ಆರೋಪಗಳನ್ನು ಮಾಡಿದ್ದ.