ಕನ್ನಡಿಗರಿಗೆ ಗೆಲುವು: ನಮ್ಮ ಮೆಟ್ರೋ ಹಿಂದಿ ಬೋರ್ಡ್ ಗೆ ಬಿತ್ತು ಮಸಿ
ಬೆಂಗಳೂರು, ಜುಲೈ 3: ಕೊನೆಗೂ ಬೆಂಗಳೂರಿಗರ, ಅದರಲ್ಲೂ ಕನ್ನಡ ಪ್ರೇಮಿಗಳ ಹೋರಾಟಕ್ಕೆ ಜಯಲಭಿಸಿದೆ. 'ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಬೇಡ' ಆಂದೋಲನಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕ ಅಭೂತಪೂರ್ವ ಬೆಂಬಲ ಬಿಎಂಆರ್ ಸಿ ಎಲ್(ಬೆಂಗಳೂರು ಮೆಟ್ರೋ ರೇಲ್ ಕಾರ್ಪೋರೇಶನ್ ಲಿಮಿಟೆಡ್) ಅಧಿಕಾರಿಗಳನ್ನೂ ನಡುಗಿಸಿದೆ.
ಅದಕ್ಕೆ ಸಾಕ್ಷಿ ಎಂಬಂತೆ, ಕೆಂಪೇಗೌಡ ಇಂಟರ್ ಚೇಂಜ್ (ಮೆಜೆಸ್ಟಿಕ್) ಮೆಟ್ರೋ ಸ್ಟೇಶನ್ ಮತ್ತು ಗ್ರೀನ್ ಲೈನ್ ನ 'ಚಿಕ್ಕಪೇಟೆ ಮೆಟ್ರೋ ನಿಲ್ದಾಣ'ಗಳಲ್ಲಿ ಹಾಕಲಾಗಿದ್ದ ಬೋರ್ಡ್ ನಲ್ಲಿದ್ದ ಹಿಂದಿ ವಾಕ್ಯಗಳನ್ನು ಬಿಎಂಆರ್ ಸಿಎಲ್ ಅಳಿಸಿಹಾಕಿದೆ! ' ಈ ಬೋರ್ಡ್ ಗಳಲ್ಲಿ ಹಿಂದಿ ಅಳಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕನ್ನಡಪರ ಹೋರಾಟಗಾರರು ಬೆದರಿಕೆ ಹಾಕಿದ್ದರ ಪರಿಣಾಮ ಇದು!
ವಿವಿಧತೆಯಲ್ಲಿ ಏಕತೆ ಎನ್ನುವವರು ನಾವು, ಎಲ್ಲವನ್ನೂ ಸ್ವೀಕರಿಸಬೇಕು' ಎಂದು ಬೊಬ್ಬೆಯಿಡುತ್ತ, ಹಿಂದಿ ಹೇರಿಕೆಯನ್ನು ಒಪ್ಪಿಕೊಳ್ಳುವುದಕ್ಕೆ, ಸಮರ್ಥಿಸಿಕೊಳ್ಳುವುದಕ್ಕೆ ಹೊರಟ ಹಲವರಿಗೆ ಬಿಎಂಆರ್ ಸಿಎಲ್ ನ ಈ ನಡೆ ಹಿನ್ನೆಡೆಯನ್ನುಂಟುಮಾಡಿದೆ.
Our campaign working on the ground. #NammaMetroHindiBeda pic.twitter.com/fgbHYquXxH
— Ganesh Chetan (@ganeshchetan) July 1, 2017
ಬೆಂಗಳೂರಿನ ಹೆಮ್ಮೆಯ 'ನಮ್ಮ ಮೆಟ್ರೋ' ಮೊದಲ ಹಂತ ಪೂರ್ಣಗೊಂಡು, ಜೂನ್ 19 ರಂದು ಸಾರ್ವಜನಿಕ ಅನುಕೂಲಕ್ಕೆ ದಕ್ಕುತ್ತಿದ್ದಂತೆಯೇ ಹೊಸ ವಿವಾದ ಹುಟ್ಟಿಕೊಂಡಿತ್ತು. ಅದು, ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆಯ ವಿಚಾರ.
ದೇಶದ ವಿವಿಧೆಡೆಗಳಲ್ಲಿರುವ ಮೆಟ್ರೊಗಳಲ್ಲಿ ಇಂಗ್ಲಿಷ್ ಮತ್ತು ನಿರ್ದಿಷ್ಟ ಪ್ರದೇಶದ ಪ್ರಾದೇಶಿಕ ಭಾಷೆ ಮಾತ್ರ ಇದ್ದರೆ, ಬೆಂಗಳೂರಿನಲ್ಲಿ ಮಾತ್ರ ಸೈನ್ ಬೋರ್ಡ್ ಗಳಲ್ಲಿ, ಕನ್ನಡ, ಇಂಗ್ಲಿಷ್ ನೊಂದಿಗೆ, ಹಿಂದಿ ಸಹ ಹೇರಲಾಗಿತ್ತು. ಈ ಕುರಿತು ಕನ್ನಡ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಹಿಂದಿ ಹೇರಿಕೆಗೆ ಸಿದ್ದರಾಮಯ್ಯ ವಿರೋಧ
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ವಿರೋಧ ವ್ಯಕ್ತಪಡಿಸಿದ್ದರು. ಇದು ರಾಜ್ಯ ಸರ್ಕಾರದ ಯೋಜನೆ, ಕೇಂದ್ರ ಸರ್ಕಾರದ್ದಲ್ಲ. ಹೀಗಿರುವಾಗ ಮೆಟ್ರೋದಲ್ಲಿ ಹಿಂದಿ ಹೇರಿಕೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.
|
ಬಿಎಂಆರ್ ಸಿಎಲ್ ಗೆ ನೋಟೀಸ್
ಅಲ್ಲದೆ ಬಿಎಂಆರ್ ಸಿಎಲ್ ನ ಈ ಕ್ರಮವನ್ನು ಖಂಡಿಸಿ, ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ(ಕೆಡಿಎ), ಬಿಎಂಆರ್ ಸಿಎಲ್ ಗೆ ನೋಟೀಸ್ ಸಹ ಜಾರಿಗೊಳಿಸಿತ್ತು. ಬಹುಸಂಖ್ಯಾತ ಕನ್ನಡಿಗರ ಭಾವನೆಗೆ ನೋವುಂಟು ಮಾಡುವ ಹಿಂದಿ ಹೇರಿಕೆಯ ಕ್ರಮವನ್ನು ಕೈಬಿಡುವಂತೆ ಹೇಳಿತ್ತು.

ರಾಷ್ಟ್ರೀಯ ಮಾಧ್ಯಮಗಳಲ್ಲೂ ಮೆಟ್ರೋ ಸದ್ದು
ಕೆಲವು ರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಕುರಿತು ಪರ-ವಿರೋಧ ಚರ್ಚೆಯಾಗಿತ್ತು. ಉತ್ತರ ಭಾರತದ ಹಲವು ಮಾಧ್ಯಮಗಳು ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಂಡು, ಬೆಂಗಳೂರಿಗರು ಉದಾರಿಗಳಾಗಬೇಕು ಎಂಬೆಲ್ಲ ಸಲಹೆಯನ್ನೂ ನೀಡಿದ್ದರು. ಆದರೆ ಕನ್ನಡವನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ತಂತ್ರ ಇದು ಎಂಬುದನ್ನು ಅರ್ಥ ಮಾಡಿಕೊಂಡಿದ್ದ ಕೆಲ ಪ್ರಜ್ಞಾವಂತ ಕನ್ನಡಿಗರ ಕಾಳಜಿ ತುಂಬಿದ ಹೋರಾಟದಿಂದಾಗಿ ನಮ್ಮ ಮೆಟ್ರೋದಲ್ಲಿ 'ಹಿಂದಿ ಬೇಡ' ಹೋರಾಟ ಯಶಸ್ಸು ಕಾಣುತ್ತಿದೆ.
|
ಹೋರಾಟಕ್ಕೆ ಇಂಬು ನೀಡಿದ ಹ್ಯಾಶ್ ಟ್ಯಾಗ್ಸ್
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆಯಾಗುತ್ತಿದೆ ಎಂಬುದು ತಿಳಿಯುತ್ತಿದ್ದಂತೆಯೇ ಹಲವು ಕನ್ನಡ ಪ್ರೇಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಶ್ ಟ್ಯಾಗ್ ಗಳನ್ನು ಸೃಷ್ಟಿಸಿ ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಇಂಬುನೀಡಿದರು. #nammametrohindibeda ಹಾಗೂ #nammametrokannadasaaku ಎಂಬ ಎರಡು ಹ್ಯಾಶ್ ಟ್ಯಾಗ್ ಗಳು ಕನ್ನಡಿಗರ ಆಕ್ರೋಶ ಪ್ರಕಟಣೆಗೆ ಸಾಧನವಾದವು. ಅಷ್ಟೇ ಅಲ್ಲ, ಹಲವು ಪರಭಾಷಿಕರೂ(ತಮಿಳು, ತೆಲುಗು) ನಮ್ಮ ಮೆಟ್ರೋದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡೇ ಭಾಷೆಯನ್ನು ಉಪಯೋಗಿಸಬೇಕು ಎಂಬುದನ್ನು ಬೆಂಬಲಿಸಿದ್ದು ಇಲ್ಲಿ ಉಲ್ಲೇಖನೀಯ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು









Click it and Unblock the Notifications