ಬೆಂಗಳೂರು ಹಾಪ್ಕಾಮ್ಸ್ನಲ್ಲಿ ‘ಆರ್ಗಾನಿಕ್ ಕಾರ್ನರ್’
ಬೆಂಗಳೂರು, ಅ.10 : ಬೆಂಗಳೂರಿಗರು ಇನ್ನುಮುಂದೆ ಹಾಪ್ಕಾಮ್ಸ್ಗಳಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಹಣ್ಣು ಮತ್ತು ತರಕಾರಿಗಳನ್ನು ಖರೀದಿ ಮಾಡಬಹುದು. ಹಾಪ್ಕಾಮ್ಸ್ಗಳಲ್ಲಿ ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ.
ಸಾವಯವ ಉತ್ಪನ್ನಗಳಿಗೆ ಇತ್ತೀಚಿನ ದಿನಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ. ಆದರೆ, ಅವುಗಳ ಮಾರಾಟಕ್ಕೆ ಸೂಕ್ತ ಸ್ಥಳಗಳಿಲ್ಲ. ಅಲ್ಲೊಂದು, ಇಲ್ಲೊಂದು ಮಳಿಗೆಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ ಸರ್ಕಾರ ಈ ಯೋಜನೆ ಜಾರಿಗೆ ತರಲು ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕೃಷಿ ಸಚಿವ ಕೃಷ್ಣಬೈರೇಗೌಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಹಾಪ್ಕಾಮ್ಸ್ನ ಆಡಳಿತ ಮಂಡಳಿಯೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಾಯೋಗಿಕವಾಗಿ ನಗರದ 25-30 ಹಾಪ್ಕಾಮ್ಸ್ ಮಳಿಗೆಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.
ಸಾವಯವ ಉತ್ಪನ್ನಗಳ ಮಾರಾಟವನ್ನು ಮೊದಲು ನಗರದ ಪ್ರಮುಖ ಸ್ಥಳಗಳಲ್ಲಿರುವ ಹಾಪ್ಕಾಮ್ಸ್ನಲ್ಲಿ ಪ್ರಾರಂಭಿಸಲಾಗುವುದು. ಜನರ ಪ್ರತಿಕ್ರಿಯೆ ನೋಡಿಕೊಂಡು ಎಲ್ಲಾ ಕಡೆ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತ್ಯೇಕ ವಿಭಾಗ : ಹಾಪ್ಕಾಮ್ಸ್ಗಳಲ್ಲಿ 'ಆರ್ಗಾನಿಕ್ ಕಾರ್ನರ್' ಎಂದು ಪ್ರತ್ಯೇಕ ವಿಭಾಗ ಮಾಡಿ ಅಲ್ಲಿ ಕೀಟನಾಶಕಗಳನ್ನು ಸಿಂಪಡಿಸದೆ ಸಂಪೂರ್ಣ ಸಾವಯವ ಮಾದರಿಯಲ್ಲಿ ಬೆಳೆದಂತಹ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಉದ್ದೇಶಿಸಲಾಗಿದೆ.
ಗ್ರಾಹಕರ ಬೇಡಿಕೆ ಗಮನಿಸಿ ಮುಂದೆ ಸರ್ಕಾರ ಅನುಮತಿ ನೀಡಿದರೆ ಹಣ್ಣು ಮತ್ತು ತರಕಾರಿ ಜತೆಗೆ ಅಕ್ಕಿ, ಬೇಳೆ, ರಾಗಿ, ಜೋಳ, ಗೋಧಿ ಹೀಗೆ ಸಾವಯವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಚಿಂತನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 290 ಹಾಪ್ಕಾಮ್ಸ್ ಮಳಿಗೆಗಳಿವೆ. ಬೆಂಗಳೂರಿನ ವಾಪ್ತಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳು ಬರುತ್ತವೆ. ಹಾಪ್ಕಾಮ್ಸ್ ಆರ್ಗಾನಿಕ್ ತರಕಾರಿಗಳಿಗೂ ಬೆಲೆ ನಿಗದಿ ಮಾಡಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications