ಕರ್ಫ್ಯೂ ಹೇಗಿತ್ತು?, ಜನರನ್ನು ವ್ಯಾಪಾರಿಗಳು ಸುಲಿಗೆ ಮಾಡಿದ್ರಾ?
ಬೆಂಗಳೂರು, ಸೆಪ್ಟೆಂಬರ್ 14 : ಸೋಮವಾರ ನಡೆದ ಗಲಭೆ ಬಳಿಕ ಬೆಂಗಳೂರಿನ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇಂದು ಸಹ ಕರ್ಫ್ಯೂ ಜಾರಿಯಲ್ಲಿದ್ದು, ಅದನ್ನು ತೆರವುಗೊಳಿಸುವ ಬಗ್ಗೆ ಸಂಜೆ ನಿರ್ಧಾರ ಕೈಗೊಳ್ಳಲಾಗುತ್ತದೆ.
ನಗರದ ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗಡಿ ರೋಡ್, ರಾಜಾಜಿನಗರ, ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾಲೇಔಟ್, ಯಶವಂತಪುರ, ಮಹಾಲಕ್ಷೀ ಲೇಔಟ್, ಪೀಣ್ಯ, ಆರ್ ಎಂಸಿ ಯಾರ್ಡ್. ನಂದಿನಿ ಲೇಔಟ್, ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಲ್ಲಿದೆ.[ಗಲಭೆ: ಬೆಂಗಳೂರಿಗೆ 25 ಸಾವಿರ ಕೋಟಿ ರು ನಷ್ಟ!]

ಇವುಗಳಲ್ಲಿ ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹಲವು ಬಡಾವಣೆಗಳಲ್ಲಿ ರಸ್ತೆಗಳು ಖಾಲಿಯಾಗಿದ್ದವು, ಜನರು ರಸ್ತೆಗೆ ಬಾರದೆ ಮನೆಯಲ್ಲಿಯೇ ಕುಳಿತಿದ್ದರು. ಬೆಳಗ್ಗೆ 9 ಗಂಟೆ ವೇಳೆಗೆ ರಸ್ತೆಗೆ ಬಂದ ಕೆಲವರನ್ನು ಪೊಲೀಸರು ಮನೆಗೆ ವಾಪಸ್ ಕಳಿಸಿದರು.[ಕಾವೇರಿ ಕಿಚ್ಚು : ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ವಿವರ]
ಕರ್ಫ್ಯೂ ಯಾವಾಗ ಜಾರಿಯಲ್ಲಿದೆ?, ಯಾವಾಗ ತೆರವುಗೊಳಿಸಲಾಗುತ್ತದೆ? ಎಂಬುದರ ಬಗ್ಗೆ ಜನರಿಗೆ ಹಲವಾರು ಗೊಂದಲಗಳಿವೆ. ಕೆಲವು ಬಡಾವಣೆಗಳಲ್ಲಿ ಸಂಜೆ 6 ರಿಂದ 9ರ ತನಕ ಕರ್ಫ್ಯೂ ತೆರವುಗೊಳಿಸಿ ಜನರು ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಯಿತು.[ಕಾವೇರಿ ಕಿಚ್ಚು : ಬೆಂಗಳೂರಲ್ಲಿ 312 ಮಂದಿ ಬಂಧನ]
ಕರ್ಫ್ಯೂ ಜಾರಿಗೊಳಿಸಿದ ಮೇಲೆ ಹಲವು ಬಡಾವಣೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿತು. ಸೋಮವಾರ ಗೋಲಿಬಾರ್ ನಡೆದಿದ್ದ ಹೆಗ್ಗನಹಳ್ಳಿ ಮತ್ತು ವಿಜಯನಗರದಲ್ಲಿ ಮಂಗಳವಾರವೂ ಕೆಲವು ಕಾಲ ಪ್ರಕ್ಷುಬ್ಧ ಪರಿಸ್ಥಿತಿ ಇತ್ತು. 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ತೆರವುಗೊಳಿಸುವ ಬಗ್ಗೆ ಇಂದು ನಿರ್ಧಾರ ಕೈಗೊಳ್ಳಲಾಗುತ್ತದೆ.
ವ್ಯಾಪಾರಿಗಳ ಸುಲಿಗೆ : ಮುಂಜಾನೆ ಅಗತ್ಯ ವಸ್ತುಗಳನ್ನು ತರಲು ಹೋದ ಜನರನ್ನು ವ್ಯಾಪಾರಿಗಳು ಸುಲಿಗೆ ಮಾಡಿದರು ಎಂಬ ಆರೋಪವೂ ಇದೆ. ಬೆಳಗ್ಗೆ ಕೆಲವು ಹೋಟೆಲ್ಗಳು ಬಾಗಿಲು ತೆರೆದಿದ್ದವು. ನಂತರ ಬಾಗಿಲು ಮುಚ್ಚಿದರು.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications