ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡದ ಮೇಲಿನ ಆಕ್ರಮಣ ಸಹಿಸೋಲ್ಲ: ಸಿದ್ದು ಖಡಕ್ ಸಂದೇಶ

|
Google Oneindia Kannada News

ಬೆಂಗಳೂರು, ಜುಲೈ 31: "ಬೇರೆಡೆಯಿಂದ ಕರ್ನಾಟಕಕ್ಕೆ ಬರುವವರು ನಮ್ಮ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕೇ ಹೊರತು, ಅದರ ಮೇಲೆ ದಾಳಿ ಮಾಡಬಾರದು. ಯಾರಾದರೂ ಹಾಗೆ ದಾಳಿ ಮಾಡಿದರೆ ಅಂಥವರಿಗೆ ಕಟ್ಟುನಿಟ್ಟಿನ ಸಂದೇಶ ನೀಡುವಲ್ಲಿ ಹಿಂಜರಿಯಬೇಡಿ" ಇದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು.

ಮೆಟ್ರೋದಲ್ಲಿ ಹಿಂದಿ ಬಳಸಲು ಸಾಧ್ಯವಿಲ್ಲ - ಕೇಂದ್ರಕ್ಕೆ ಸಿಎಂ ಪತ್ರ ಮೆಟ್ರೋದಲ್ಲಿ ಹಿಂದಿ ಬಳಸಲು ಸಾಧ್ಯವಿಲ್ಲ - ಕೇಂದ್ರಕ್ಕೆ ಸಿಎಂ ಪತ್ರ

ಮೆಟ್ರೋದಲ್ಲಿ ಹಿಂದಿ ಹೇರಿಕೆ ಸೇರಿದಂತೆ ಕನ್ನಡ ಭಾಷೆಯ ಮೇಲಾಗುತ್ತಿರುವ ದಾಳಿಯ ಕುರಿತು ಸಿದ್ದರಾಮಯ್ಯ ಅವರು ಮಾತನಾಡಿದ 14 ನಿಮಿಷಗಳ ವಿಡಿಯೋವನ್ನು ರಾಜ್ಯ ಸರ್ಕಾರ ಜುಲೈ 29 ರಂದು ಬಿಡುಗಡೆ ಮಾಡಿದೆ. ಕರ್ನಾಟಕ ನಮ್ಮ ಹೆಮ್ಮೆ ಎಂಬ ಈ ವಿಡಿಯೋದಲ್ಲಿ ಕರ್ನಾಟಕ ರಾಜ್ಯದ ಇತಿಹಾಸ, ಕನ್ನಡ ಭಾಷೆಯ ಹಿರಿಮೆ-ಗರಿಮೆಗಳನ್ನು ಹಾಡಿಹೊಗಳಲಾಗಿದೆ.

I will never tolerate attack on Kannada: Karnataka CM Siddaramaiah

ನೆರೆರಾಜ್ಯದವರು ನಮ್ಮ ಸಹೋದರ-ಸಹೋದರಿಯರಿದ್ದಂತೆ, ನಾವು ಅವರನ್ನು ಪ್ರೀತಿಸಬೇಕು. ಆದರೆ ನಮ್ಮ ಭಾಷೆ, ನೆಲ, ಜಲದ ಮೇಲೆ ದಾಳಿ ನಡೆದಾಗಲೂ ನಾವು ಯಾವ ಖಡಕ್ ಸಂದೇಶ ನೀಡದೆ ಸುಮ್ಮನಿರುವುದು ತರವಲ್ಲ ಎಂದು ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

'ಕನ್ನಡ ಕವಲು ಸಮಿತಿ'ಯ(ಈಗಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷರಾಗುವ ಮೂಲಕವೇ ತಮ್ಮ ರಾಜಕೀಯ ಜೀವನ ಆರಂಭಿಸಿದ ಸಿದ್ದರಾಮಮಯ್ಯ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆ ಕರ್ನಾಟಕದಲ್ಲಿ ಬದುಕುತ್ತಿರುವ ಪ್ರತಿಯೊಬ್ಬನ ಆದ್ಯ ಜವಾಬ್ದಾರಿಯಾಗಬೇಕು ಎಂದು ಈ ವಿಡಿಯೋದಲ್ಲಿ ಹೇಳಿದ್ದಾರೆ.

English summary
"Being a Kannadiga, I will never tolerate attack on my language, river and land", chief minister of Karnataka Siddaramaiah told in a 14 minutes video, which was released by Information and public relations department of Karnataka on July 29th, Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X