ಮರಣಶಯ್ಯೆಯಲ್ಲಿರುವ ಬಾಲಕನ ಕನಸಿಗೆ 'ರೆಕ್ಕೆ'!
ಬೆಂಗಳೂರು, ನ. 15: ಪೈಲಟ್ ಆಗುವ ಕನಸು ಕಾಣುತ್ತಿದ್ದ ಮಾರಕ ರೋಗದಿಂದ ಬಳಲುತ್ತಿರುವ 14 ವರ್ಷಗಳ ಬಾಲಕ ಚಂದನ್ ಕೊನೆಯ ಆಸೆಯನ್ನು ಈಡೇರಿಸಲು ಭಾರತೀಯ ವಾಯು ಸೇನೆ (ಐಎಎಫ್) ವು ಸಜ್ಜಾಗಿದೆ.

ಗುರುವಾರ ಬಾಲಕ ಹಾಗೂ ಆತನ ತಂದೆ ಗಿರೀಶ್ ಮಂಡಲ್ ಅವರನ್ನು ಅಂಬಾಲಾ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಐಎಎಫ್ ಚೀಫ್ ಅರುಪ್ ರಹಾ ಬಾಲಕನ ಕೊನೆಯ ಆಸೆ ಈಡೇರಿಸಲು ಸಹಕರಿಸುವುದಾಗಿ ಭರವಸೆ ನೀಡಿದರು. [10 ವರ್ಷದ ಬಾಲಕ ಹೈದರಾಬಾದ್ ಪೊಲೀಸ್ ಕಮಿಷನರ್]

ಬಾಲಕ ಚಂದನ್ ಪೈಲಟ್ ಆಗಲು ಬಯಸುತ್ತಿದ್ದ. ಆದರೆ, ಆತ ಮಾರಕ ರೋಗದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಈ ಆಸೆ ಈಡೇರುವುದು ಸಾಧ್ಯವಿಲ್ಲ. ಆದ್ದರಿಂದ ಆತನ ಆಸೆಯನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಕಾಕ್ಪಿಟ್ ಲಗತ್ತಿಸಿ ಸರಳೀಕರಣಗೊಳಿಸಿದ ವಿಮಾನದಲ್ಲಿ ಬಾಲಕನಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಒನ್ಇಂಡಿಯಾಕ್ಕೆ ವಾಯು ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೆ ಆರ್ಭಟಿಸಲಿದೆ ಸುಖೋಯಿ: ಕಳೆದ ತಿಂಗಳು ಸುಖೋಯಿ ಯುದ್ಧ ವಿಮಾನವನ್ನು ಸಂಪೂರ್ಣ ಪರೀಕ್ಷಿಸಿರುವ ಹಿನ್ನೆಲೆಯಲ್ಲಿ ಭಾರತೀಯ ವಾಯು ಸೇನೆ (ಐಎಎಫ್) ವು ವಿಮಾನದ ಹಾರಾಟಕ್ಕೆ ಅನುಮತಿ ನೀಡಿದೆ. ಐಎಎಫ್ ಹಾಗೂ ಹಿಂದೂಸ್ತಾನ್ ಏರೋನಾಟಿಕಲ್ ಲಿ. (ಹಾಲ್) ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದ್ದು, ಈ ಯುದ್ಧ ವಿಮಾನಗಳು ಮುಂದಿನ ವಾರ ಕಾರ್ಯಾಚರಣೆ ಆರಂಭಿಸಲಿವೆ.

ಕಳೆದ ತಿಂಗಳು ಪುಣೆಯಲ್ಲಿ ಒಂದು ಸುಖೋಯಿ ವಿಮಾನ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ಸುಮಾರು 200 ಸುಖೋಯಿಗಳನ್ನು ಇಳಿಸಿ ಉಪಯೋಗ ನಿಲ್ಲಿಸಲಾಗಿತ್ತು. ತಕ್ಷಣ ಕಾರ್ಯಾಚರಣೆ ಆರಂಭಿಸುವ ಕುರಿತು ಸ್ಪಷ್ಟ ಸೂಚನೆ ಸಿಕ್ಕಿರಲಿಲ್ಲ. ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅರುಪ್ ರಹಾ, ತನಿಖೆಯು ಮುಗಿಯುತ್ತಿದೆ. ಶೀಘ್ರ ಈ ಯುದ್ಧವಿಮಾನ ಕಾರ್ಯಾಚರಣೆಗಿಳಿಯಲಿದೆ ಎಂದು ತಿಳಿಸಿದರು.
ಪರೀಕ್ಕರ್ಗೆ ಗಾರ್ಡ್ ಆಫ್ ಹಾನರ್: ಈಚೆಗಷ್ಟೇ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಮನೋಹರ ಪರೀಕರ್ ಶನಿವಾರ ಪ್ರಥಮ ಬಾರಿಗೆ ಸೇನೆಯಿಂದ ಗಾರ್ಡ್ ಆಫ್ ಹಾನರ್ ಸ್ವೀಕರಿಸಿದರು. ವೈಸ್ ಅಡ್ಮಿರಲ್ ಅನಿಲ್ ಛೋಪ್ರಾ ಸ್ವಾಗತಿಸಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications