ಮರಣಶಯ್ಯೆಯಲ್ಲಿರುವ ಬಾಲಕನ ಕನಸಿಗೆ 'ರೆಕ್ಕೆ'!
ಬೆಂಗಳೂರು, ನ. 15: ಪೈಲಟ್ ಆಗುವ ಕನಸು ಕಾಣುತ್ತಿದ್ದ ಮಾರಕ ರೋಗದಿಂದ ಬಳಲುತ್ತಿರುವ 14 ವರ್ಷಗಳ ಬಾಲಕ ಚಂದನ್ ಕೊನೆಯ ಆಸೆಯನ್ನು ಈಡೇರಿಸಲು ಭಾರತೀಯ ವಾಯು ಸೇನೆ (ಐಎಎಫ್) ವು ಸಜ್ಜಾಗಿದೆ.

ಗುರುವಾರ ಬಾಲಕ ಹಾಗೂ ಆತನ ತಂದೆ ಗಿರೀಶ್ ಮಂಡಲ್ ಅವರನ್ನು ಅಂಬಾಲಾ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಐಎಎಫ್ ಚೀಫ್ ಅರುಪ್ ರಹಾ ಬಾಲಕನ ಕೊನೆಯ ಆಸೆ ಈಡೇರಿಸಲು ಸಹಕರಿಸುವುದಾಗಿ ಭರವಸೆ ನೀಡಿದರು. [10 ವರ್ಷದ ಬಾಲಕ ಹೈದರಾಬಾದ್ ಪೊಲೀಸ್ ಕಮಿಷನರ್]

ಬಾಲಕ ಚಂದನ್ ಪೈಲಟ್ ಆಗಲು ಬಯಸುತ್ತಿದ್ದ. ಆದರೆ, ಆತ ಮಾರಕ ರೋಗದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಈ ಆಸೆ ಈಡೇರುವುದು ಸಾಧ್ಯವಿಲ್ಲ. ಆದ್ದರಿಂದ ಆತನ ಆಸೆಯನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಕಾಕ್ಪಿಟ್ ಲಗತ್ತಿಸಿ ಸರಳೀಕರಣಗೊಳಿಸಿದ ವಿಮಾನದಲ್ಲಿ ಬಾಲಕನಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಒನ್ಇಂಡಿಯಾಕ್ಕೆ ವಾಯು ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೆ ಆರ್ಭಟಿಸಲಿದೆ ಸುಖೋಯಿ: ಕಳೆದ ತಿಂಗಳು ಸುಖೋಯಿ ಯುದ್ಧ ವಿಮಾನವನ್ನು ಸಂಪೂರ್ಣ ಪರೀಕ್ಷಿಸಿರುವ ಹಿನ್ನೆಲೆಯಲ್ಲಿ ಭಾರತೀಯ ವಾಯು ಸೇನೆ (ಐಎಎಫ್) ವು ವಿಮಾನದ ಹಾರಾಟಕ್ಕೆ ಅನುಮತಿ ನೀಡಿದೆ. ಐಎಎಫ್ ಹಾಗೂ ಹಿಂದೂಸ್ತಾನ್ ಏರೋನಾಟಿಕಲ್ ಲಿ. (ಹಾಲ್) ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದ್ದು, ಈ ಯುದ್ಧ ವಿಮಾನಗಳು ಮುಂದಿನ ವಾರ ಕಾರ್ಯಾಚರಣೆ ಆರಂಭಿಸಲಿವೆ.

ಕಳೆದ ತಿಂಗಳು ಪುಣೆಯಲ್ಲಿ ಒಂದು ಸುಖೋಯಿ ವಿಮಾನ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ಸುಮಾರು 200 ಸುಖೋಯಿಗಳನ್ನು ಇಳಿಸಿ ಉಪಯೋಗ ನಿಲ್ಲಿಸಲಾಗಿತ್ತು. ತಕ್ಷಣ ಕಾರ್ಯಾಚರಣೆ ಆರಂಭಿಸುವ ಕುರಿತು ಸ್ಪಷ್ಟ ಸೂಚನೆ ಸಿಕ್ಕಿರಲಿಲ್ಲ. ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅರುಪ್ ರಹಾ, ತನಿಖೆಯು ಮುಗಿಯುತ್ತಿದೆ. ಶೀಘ್ರ ಈ ಯುದ್ಧವಿಮಾನ ಕಾರ್ಯಾಚರಣೆಗಿಳಿಯಲಿದೆ ಎಂದು ತಿಳಿಸಿದರು.
ಪರೀಕ್ಕರ್ಗೆ ಗಾರ್ಡ್ ಆಫ್ ಹಾನರ್: ಈಚೆಗಷ್ಟೇ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಮನೋಹರ ಪರೀಕರ್ ಶನಿವಾರ ಪ್ರಥಮ ಬಾರಿಗೆ ಸೇನೆಯಿಂದ ಗಾರ್ಡ್ ಆಫ್ ಹಾನರ್ ಸ್ವೀಕರಿಸಿದರು. ವೈಸ್ ಅಡ್ಮಿರಲ್ ಅನಿಲ್ ಛೋಪ್ರಾ ಸ್ವಾಗತಿಸಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications