ರವಿ ಸಾವಿನ ತನಿಖೆ ಸಿಬಿಐಗೆ ಒಪ್ಪಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಮಾ.23: ಜನರ ಭಾವನೆಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಅಧಿಕಾರಿ ಡಿಕೆ ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸದನದಲ್ಲಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನರ ಭಾವನೆಗಳಿಗೆ ಸರ್ಕಾರ ಸದಾಕಾಲ ಬೆಲೆ ನೀಡುತ್ತಾ ಬಂದಿದೆ. ರವಿ ಅವರ ಪೋಷಕರು ಇಲ್ಲಿ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಬಳಿ ಧರಣಿ ನಡೆಸಿದ್ದಾಗಲೂ ನಾನು ಇದೇ ಮಾತು ಹೇಳಿದ್ದೆ. [ಸಿಬಿಐ ತನಿಖೆ : ವಿಳಂಬ ಏಕೆ? ಟ್ವಿಟ್ಟರ್ ನಲ್ಲಿ ಪ್ರಶ್ನೆಗಳ ಬಾಣ]
ವಿಪಕ್ಷಗಳು ವಿನಾಕಾರಣ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ. ಸಿಬಿಐ ಎಂದರೆ ಕಾಂಗ್ರೆಸ್ ಬಚಾವೋ ಏಜೆನ್ಸಿ ಎನ್ನುತ್ತಿದ್ದ ಬಿಜೆಪಿಯವರು ಈಗ ನಮ್ಮ ವಿರುದ್ಧ ದನಿ ಎತ್ತಿದ್ದಾರೆ. ನಾನು ಸಿಬಿಐ ಹಾಗೂ ಸಿಐಡಿ ಎರಡಕ್ಕೂ ಸಮಾನ ಗೌರವ ನೀಡುತ್ತಾ ಬಂದಿದ್ದೇನೆ.[ರವಿ ಸೂಪರ್ ಟ್ರ್ಯಾಕ್ ರೆಕಾರ್ಡ್]
ಸಿಐಡಿ ಮಧ್ಯಂತರ ವರದಿ ಪಡೆದು ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರೆ, ವರದಿ ಮಂಡಿಸದಂತೆ ಹೈಕೋರ್ಟ್ ತಡೆ ನೀಡಿದೆ. ನಮ್ಮ ಸರ್ಕಾರಕ್ಕೆ ಸಿಐಡಿ ಹಾಗೂ ಸಿಬಿಐ ಎರಡ ಮೇಲೂ ನಂಬಿಕೆ ಇದೆ.ಯಾರನ್ನು ನಾವು ರಕ್ಷಿಸುತ್ತಿಲ್ಲ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ ಎಂದರು. [ರವಿ ಸಾವು : ಸೋಮವಾರದ ಬೆಳವಣಿಗೆಗಳು]

ಸೋಮವಾರ ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೌನ್ಸಿಲ್ ಆಫ್ ಮಿನಿಸ್ಟರ್ಸ್ ಸಭೆ ನಡೆಸಲಾಯಿತು. ಡಿಕೆ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. [ಮರಳು ಮಾಫಿಯಾ ಎಂದರೇನು? ಏನಿದರ ಮರ್ಮ?]
ಡಿಕೆ ರವಿ ಕುಟುಂಬದವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸೋಮವಾರದ ಗಡುವು ನೀಡಿದ್ದವು. ಡಿಕೆ ರವಿ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರೂ ಸದನದಲ್ಲಿ ವಿಪಕ್ಷಗಳು ಇನ್ನೂ ಸರ್ಕಾರದ ವಿರುದ್ಧ ತಿರುಗಿ ಬಿದ್ದಿವೆ.[ಸಿಐಡಿ ಮತ್ತು ಸಿಬಿಐ ನಡುವಿನ ವ್ಯತ್ಯಾಸವೇನು?]

ಸಿಬಿಐ ತನಿಖೆಗೆ ನೀಡುವ ಪ್ರಕ್ರಿಯೆ: ರಾಜ್ಯದ ಪ್ರಕರಣವೊಂದನ್ನು ಸಿಬಿಐಗೆ ವಹಿಸುವ ಪ್ರಕ್ರಿಯೆಯಲ್ಲಿ ಮೊದಲಿಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಮನವಿ ಸಲ್ಲಿಸಬೇಕಾಗುತ್ತದೆ. ನಂತರ ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಸಿಬಿಐಗೆ ಸೂಚನೆ ನೀಡುತ್ತದೆ. [ಕೊನೆಗೂ ಈಡೇರದ ರವಿ ದೊಡ್ಡ ಕನಸು]
ಡಿಕೆ ರವಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಶುಕ್ರವಾರವೇ ತೀರ್ಮಾನಿಸಲಾಗಿತ್ತು. ಅದರೆ, ಸದನದ ಕಲಾಪವನ್ನು ಸೋಮವಾರದ ತನಕ ಮುಂದೂಡಲಾಗಿತ್ತು. [ಡಿಕೆ ರವಿ ಉಸಿರುಗಟ್ಟಿ ಸಾವು]
ಹೀಗಾಗಿ ಸೋಮವಾರ ಅಧಿಕೃತವಾಗಿ ಸದನದಲ್ಲಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಈಗ ಸ್ಪೀಕರ್ ಅವರು ಸರ್ಕಾರದ ಘೋಷಣೆಗೆ ಅಂಕಿತ ಹಾಕಿದ ಮೇಲೆ ಈ ಮನವಿ ಪತ್ರ ಗೃಹ ಸಚಿವಾಲಯದ ಕೈ ಸೇರಲಿದೆ. [ತಾಯಿ ಗೌರಮ್ಮನವರ ಸಂದರ್ಶನ ]
The @CMofKarnataka's statement on the floor of the assembly on the handover of #DKRavi's case to the CBI. (part 1) pic.twitter.com/avuE8hanX0
— GOK Updates (@GOKUpdates) March 23, 2015 ಗೃಹ ಸಚಿವಾಲಯದ ನಿರ್ದೇಶನದ ನಂತರ ಸಿಬಿಐ ವಿಶೇಷ ತಂಡವನ್ನು ರಚಿಸಿ ತನಿಖೆಗೆ ಮುಂದಾಗುತ್ತದೆ. ಪೊಲೀಸರು, ಸಿಐಡಿ ತಂಡ ಕಲೆ ಹಾಕಿರುವ ಮಾಹಿತಿ, ವೈದ್ಯಕೀಯ ವರದಿಯಲ್ಲದೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರನ್ನು ಮತ್ತೊಮ್ಮೆ ಸಿಬಿಐ ವಿಚಾರಣೆಗೊಳಪಡಿಸುತ್ತಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications