ರವಿ ಕೇಸ್: ಎಫ್ಎಸ್ಎಲ್ ವರದಿ ಕೇಳಿದ ಸಿಬಿಐ ಟೀಂ
ಬೆಂಗಳೂರು, ಮಾ,29: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುವ ತಂಡದ ವಿವರ ಈಗ ಪ್ರಕಟವಾಗಿದೆ. ಚೆನ್ನೈ ಸಿಬಿಐ ಘಟಕದ ಡಿಐಜಿ ಸೆಲ್ವರಾಜ್ ಸೆಂಗತ್ತೀರ್ ಹಾಗೂ ವಿಶೇಷ ಬ್ರ್ಯಾಂಚಿನ ಎಸ್ಪಿ ಶರವಣನ್ ಅವರ ನೇತೃತ್ವದ ವಿಶೇಷ ತಂಡ ತನಿಖೆ ನಡೆಸಲಿದೆ.
ಡಿಕೆ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಕರ್ನಾಟಕ ಸರ್ಕಾರ ಅಧಿಕೃತ ಪತ್ರ ಕಳಿಸಿದ ಮೇಲೆ ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ಡಿ.ಕೆ.ರವಿ ಪ್ರಕರಣವನ್ನು ಚೆನ್ನೈ ಘಟಕದ ಸಿಬಿಐ ತಂಡ ತನಿಖೆ ಕೈಗೆತ್ತಿಕೊಂಡಿದೆ. ಡಿಐಜಿ ಸೆಲ್ವರಾಜ್ ಸೆಂಗತ್ತೀರ್ ಜತೆಗೆ ಚೆನ್ನೈ ವಿಭಾಗದ ಸಿಬಿಐ ಎಸ್ಪಿ ಸೇರಿ 8 ಅಧಿಕಾರಿಗಳು ಈ ವಿಶೇಷ ತಂಡದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಸಿಬಿಐ ಮೊದಲ ಹೆಜ್ಜೆ:
ಚೆನ್ನೈನ ಸಿಬಿಐ ಕಚೇರಿ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಳ್ಳಲಿದ್ದಾರೆ. ನಂತರ ಬೆಂಗಳೂರಿಗೆ ಆಗಮಿಸಿ ಈ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ವಿವರಗಳನ್ನು ಸಿಐಡಿ ತಂಡದಿಂದ ಪಡೆದುಕೊಳ್ಳುತ್ತಾರೆ. ಚೆನ್ನೈ ಸಿಬಿಐನ ವಿಶೇಷ ತಂಡ ಬೆಂಗಳೂರು ಸಿಬಿಐ ಘಟಕದ ಸಹಕಾರದೊಂದಿಗೆ ಪ್ರಕರಣದ ತನಿಖೆ ನಡೆಸುತ್ತದೆ ಎಂದು ಬೆಂಗಳೂರು ಸಿಬಿಐ ಘಟಕದ ಮುಖ್ಯಸ್ಥ ರೂಪ್ ಕುಮಾರ್ ದತ್ತಾ ಹೇಳಿದ್ದಾರೆ. [ಸಿಐಡಿ ಮತ್ತು ಸಿಬಿಐ ನಡುವಿನ ವ್ಯತ್ಯಾಸವೇನು?]

ಎಫ್ಎಸ್ಎಲ್ ವರದಿ ಎಲ್ಲಿ?: ಡಿಕೆ ರವಿ ಶವದ ಮರಣೋತ್ತರ ಪರೀಕ್ಷೆ ನಡೆಸಿದ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಪ್ರಾಥಮಿಕ ವರದಿಯನ್ನಷ್ಟೇ ತಯಾರಿಸಿದ್ದಾರೆ. ಅಟೋಪ್ಸಿ ಹಾಗೂ ಎಫ್ ಎಸ್ಎಲ್ ವರದಿ ಇನ್ನೂ ಲಭ್ಯವಾಗಿಲ್ಲ.[ತನಿಖೆ ಸಿಬಿಐಗೆ ಒಪ್ಪಿಸಿದ ರಾಜ್ಯ ಸರ್ಕಾರ]
ರವಿ ದೇಹದ ಮೆದಳು, ಕಿಬ್ಬೊಟ್ಟೆ, ಕರಳು ಸೇರಿದಂತೆ ಕೆಲವು ಅಂಗಗಳ ಪರೀಕ್ಷೆ ಹೈದರಾಬಾದಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಸಲಾಗಿದೆ. ಇಲ್ಲಿಂದ ವರದಿ ಬಂದ ಮೇಲೆ ಸಿಬಿಐ ತಂಡ ಮುಂದಿನ ಕ್ರಮ ಕೈಗೊಳ್ಳಲಿದೆ.[ರವಿ ಕೇಸ್: ಸಾವು, ಸಿಐಡಿ, ಸಿಬಿಐ ತನಕ ಟೈಮ್ ಲೈನ್]
ವಿಚಾರಣೆ: ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು, ಕುಟುಂಬಸ್ಥರಿಗೆ ಸಿಬಿಐ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸಲಿದೆ. ರವಿ ಸಾವಿನಿಂದ ಯಾರಿಗೆ ಲಾಭ, ಕೊಲೆ ಅಥವಾ ಅತ್ಮಹತ್ಯೆ ಹಿಂದಿನ ಉದ್ದೇಶವೇನು ಎಂಬುದನ್ನು ಅರಿಯಲು ಸಿಬಿಐ ಯತ್ನಿಸಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications