ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ರಾಜಿನಾಮೆ ಕೇಳಿದರೆ ನೀಡುವೆ: ಸಚಿವ ಜಾರ್ಜ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 8: ಮಾಜಿ ಡಿವೈಎಸ್ ಪಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನನ್ನ ರಾಜಿನಾಮೆ ಕೇಳಿದರೆ, ಖಂಡಿತವಾಗಿಯೂ ಕೊಡಲು ಸಿದ್ಧ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಎಂಕೆ ಗಣಪತಿ ಸಾವಿನ ಪ್ರಕರಣ ಸಿಬಿಐಗೆ, ಜಾರ್ಜ್ ಗೆ ನಡುಕಎಂಕೆ ಗಣಪತಿ ಸಾವಿನ ಪ್ರಕರಣ ಸಿಬಿಐಗೆ, ಜಾರ್ಜ್ ಗೆ ನಡುಕ

ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಲಿ ಎಂದು ಇತ್ತೀಚೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಜಾರ್ಜ್ ಅವರ ರಾಜಿನಾಮೆಗೆ ಆಗ್ರಹಿಸುತ್ತಲೇ ಇದ್ದಾರೆ.

If CM asks to resign I will says George

ಈ ಬಗ್ಗೆ ಈ ಹಿಂದೆಯೇ ಸ್ಪಷ್ಟನೆ ನೀಡಿರುವ ಜಾರ್ಜ್, ''ಗಣಪತಿ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದಾಗಲೇ ತನಿಖೆಗೆ ಸಹಕಾರಿಯಾಗಲು ನಾನು ರಾಜಿನಾಮೆ ಸಲ್ಲಿಸಿದ್ದೆ. ಈಗ್ಯಾಕೆ ರಾಜಿನಾಮೆ ನೀಡಲಿ'' ಎಂದಿದ್ದರು.

ರಾಜಿನಾಮೆ ಕೊಡು ಅಂದ ಕೂಡಲೇ ಕೊಡಲು ಸಾಧ್ಯವಿಲ್ಲ: ಜಾರ್ಜ್ರಾಜಿನಾಮೆ ಕೊಡು ಅಂದ ಕೂಡಲೇ ಕೊಡಲು ಸಾಧ್ಯವಿಲ್ಲ: ಜಾರ್ಜ್

ಇದೀಗ, ಆ ಬಗ್ಗೆ ಸ್ಪಷ್ಟನೆ ನೀಡಿರುವ ಜಾರ್ಜ್, ಮುಖ್ಯಮಂತ್ರಿ ರಾಜಿನಾಮೆ ಕೇಳಿದರೆ ರಾಜಿನಾಮೆ ನೀಡುವೆ ಎಂದಿದ್ದಾರೆ. ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ''ಗಣಪತಿ ಆತ್ಮಹತ್ಯೆ ವಿಚಾರದಲ್ಲಿ ಬಿಜೆಪಿಗೆ ಸತ್ಯ ಬೇಕಿಲ್ಲ. ಅದಕ್ಕಿಂತಲೂ ಹೆಚ್ಚಾಗಿ ನನ್ನ ರಾಜಿನಾಮೆ ಬೇಕಿದೆ'' ಎಂದು ವ್ಯಂಗ್ಯವಾಡಿದರು.

English summary
In the wake of BJP demanding the resignation of Bengaluru Urban developement minister K.J. George, he clarifies as If Chief minister Siddaramaiah asks to resign he will quit his post. BJP demanding his resignation as he is the main accused in former DySP Ganapati's suicide case which is going to be investigated by CBI soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X