ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂದು ಯಡಿಯೂರಪ್ಪ ಅವರನ್ನು ಕೇಳಿ:ಡಿಕೆಶಿ
ಬೆಂಗಳೂರು, ಜನವರಿ 1: ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂದು ಯಡಿಯೂರಪ್ಪ ಅವರನ್ನು ಕೇಳಿ ನನ್ನನ್ಯಾಕೆ ಕೇಳ್ತೀರಾ ಎಂದು ಸಚಿವ ಡಿಕೆ ಶಿವಕುಮಾರ್ ಗರಂ ಆಗಿ ಉತ್ತರ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಮಾತು ಕೇಳ್ತಾರೆ: ಜಿ.ಟಿ.ದೇವೇಗೌಡ
ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರ ವಕ್ತಾರ ಅಲ್ಲ ಅವರು ಎಲ್ಲಿದ್ದಾರೆ ಎಂದು ತಿಳಿಯಬೇಕಿದ್ದರೆ ಯಡಿಯೂರಪ್ಪ ಅವರನ್ನು ಕೇಳಿ ಎಂದು ಹೇಳಿದರು.
ರಮೇಶ್ ಒಬ್ಬ ಹಠವಾದಿ: ಸತೀಶ್ ಜಾರಕಿಹೊಳಿ ಹೇಳಿಕೆ
ಗೋವಿಂದ ರಾಜು ಹಣ ಸಂಗ್ರಹಣೆ ಮಾಡಿದ್ದಾರೆಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಆದರೆ, ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ವಿಪಕ್ಷದವರು ಸಲಹೆ ನೀಡಲಿ, ಅದನ್ನು ಸ್ವಿಕರಿಸುತ್ತೇವೆ.ಆದರೆ ನಾವು ನಮ್ಮ ಕೆಲಸ ಮಾಡುತ್ತಿರುತ್ತೇವೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದಿಲ್ಲ ಎಂದು ಹೇಳಿದ್ದಾರೆ ಆದರೆ, ಶೆಟ್ಟರ್, ಉಮೇಶ್ ಕತ್ತಿ, ಶ್ರೀರಾಮುಲು ಅವರು ಆಪರೇಷನ್ ಕಮಲಕ್ಕೆ ಪೂರಕವಾದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.