ರಾಜ ಕಾಲುವೆ ಒತ್ತುವರಿ : 14 ಅಧಿಕಾರಿಗಳ ಅಮಾನತು
ಬೆಂಗಳೂರು, ಆಗಸ್ಟ್ 10 : ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಮೇಲೆ 14 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ನಗರದಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ. [ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳಿಗೆ ಯಾವ ಶಿಕ್ಷೆ?]
ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲು 20 ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಅಧಿಕಾರಿಗಳ ಹೆಸರುಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಡುಗಡೆ ಮಾಡಿದೆ. ಅಧಿಕಾರಿಗಳನ್ನು ಅಮಾನತು ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]

ಕ್ರಮ ಕೈಗೊಳ್ಳಲು ಸೂಚಿಸಿರುವ 20 ಅಧಿಕಾರಿಗಳಲ್ಲಿ 6 ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಬಿಬಿಎಂಪಿ ಗುರುತಿಸಿರುವ 20 ಅಧಿಕಾರಿಗಳು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಿದ್ದಾರೆ ಎಂಬುದು ಪ್ರಾಥಮಿಕವಾಗಿ ಸಾಬೀತಾಗಿದೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]
ಬಿಬಿಎಂಪಿ ಪಟ್ಟಿ ಮಾಡಿರುವ 20 ಅಧಿಕಾರಿಗಳ ಪೈಕಿ ಸೇವೆಯಲ್ಲಿರುವ ಎಲ್ಲರನ್ನೂ ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ (ಕಾಮಗಾರಿ) ಅವರಿಂದ ಈ ಬಗ್ಗೆ ತನಿಖೆ ಆದೇಶ ನೀಡಲಾಗಿದೆ.[ರಾಜಕಾಲುವೆ ಒತ್ತುವರಿ ತೆರವಿನಲ್ಲೂ ಪ್ರಭಾವದ ಒಳಸುಳಿ]
ನಿವೃತ್ತರಾಗಿರುವ ಅಧಿಕಾರಿಗಳು ಕಾನೂನು ಹೋರಾಟ ನಡೆಸಬೇಕಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ.

-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications