ರಾಜ ಕಾಲುವೆ ಒತ್ತುವರಿ : 14 ಅಧಿಕಾರಿಗಳ ಅಮಾನತು
ಬೆಂಗಳೂರು, ಆಗಸ್ಟ್ 10 : ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಮೇಲೆ 14 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ನಗರದಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ. [ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳಿಗೆ ಯಾವ ಶಿಕ್ಷೆ?]
ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲು 20 ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಅಧಿಕಾರಿಗಳ ಹೆಸರುಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಡುಗಡೆ ಮಾಡಿದೆ. ಅಧಿಕಾರಿಗಳನ್ನು ಅಮಾನತು ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]
ಕ್ರಮ ಕೈಗೊಳ್ಳಲು ಸೂಚಿಸಿರುವ 20 ಅಧಿಕಾರಿಗಳಲ್ಲಿ 6 ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಬಿಬಿಎಂಪಿ ಗುರುತಿಸಿರುವ 20 ಅಧಿಕಾರಿಗಳು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಿದ್ದಾರೆ ಎಂಬುದು ಪ್ರಾಥಮಿಕವಾಗಿ ಸಾಬೀತಾಗಿದೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]
ಬಿಬಿಎಂಪಿ ಪಟ್ಟಿ ಮಾಡಿರುವ 20 ಅಧಿಕಾರಿಗಳ ಪೈಕಿ ಸೇವೆಯಲ್ಲಿರುವ ಎಲ್ಲರನ್ನೂ ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ (ಕಾಮಗಾರಿ) ಅವರಿಂದ ಈ ಬಗ್ಗೆ ತನಿಖೆ ಆದೇಶ ನೀಡಲಾಗಿದೆ.[ರಾಜಕಾಲುವೆ ಒತ್ತುವರಿ ತೆರವಿನಲ್ಲೂ ಪ್ರಭಾವದ ಒಳಸುಳಿ]
ನಿವೃತ್ತರಾಗಿರುವ
ಅಧಿಕಾರಿಗಳು
ಕಾನೂನು
ಹೋರಾಟ
ನಡೆಸಬೇಕಾಗಿದೆ.
ಅವರ
ವಿರುದ್ಧ
ಪ್ರಕರಣ
ದಾಖಲಿಸಲು
ಮತ್ತು
ವಿಚಾರಣೆ
ನಡೆಸಲು
ನಿರ್ಧರಿಸಲಾಗಿದೆ.