ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆಯಿಂದ ನಮ್ಮ ನಾಯಕರಿಗಾದ ಅನ್ಯಾಯ ಸರಿಪಡಿಸಲಿ: ಎಂಬಿ ಪಾಟೀಲ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 15: ಉತ್ತರ ಕರ್ನಾಟಕದ ನಾಯಕರಿಗೆ ಮಾಡಿರುವ ಅನ್ಯಾಯವನ್ನು ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಸರಿಪಡಿಸಿ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಒತ್ತಾಯಿಸಿದ್ದಾರೆ.

ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 22ರಂದು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಆದರೆ ಈ ಮೊದಲು ಉತ್ತರ ಕರ್ನಾಟಕದ ನಾಯಕರಿಗೆ ತೋರಿದ ತಾರತಮ್ಯವನ್ನು ಸಂಪುಟ ವಿಸ್ತರಣೆಯಿಂದಲಾದರೂ ಬಗೆಹರಿಸಿ ಎಂದ ಹೇಳಿದ್ದಾರೆ.

ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ

ಡಿಸೆಂಬರ್ 21ರಂದು ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ. ಈ ಕುರಿತು ಅಂದೇ ತೀರ್ಮಾನವಾಗಲಿದೆ. ಒಂದು ವೇಳೆ ಸಂಪುಟ ವಿಸ್ತರಣೆಗೆ ಅಂದೇ ಗ್ರೀನ್ ಸಿಗ್ನಲ್ ದೊರೆತರೆ ಡಿ.22ರಂದು ಅಂಪುಟ ವಿಸ್ತರಣೆಯಾಗಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ

Injustice meted out to north Karnataka leaders should be corrected during the cabinet expansion

ನಾಲ್ಕೈದು ತಿಂಗಳಿನಿಂದಲೂ ಸಂಪುಟ ವಿಸ್ತರಣೆ ಕಾರ್ಯ ಹಲವು ಕಾರಣಗಳಿಂದ ಮುಂದೂಡಿಕೊಂಡು ಬರಲಾಗುತ್ತಿದೆ. ಇದರಿಂದ ಬೇಸತ್ತು ಹೋಗಿದ್ದ ಕಾಂಗ್ರೆಸ್​ ಸಚಿವಾಕಾಂಕ್ಷಿ ಶಾಸಕರು ಬಂಡಾಯ ಏಳುವ ಸೂಚನೆಯನ್ನು ನೀಡಿದ್ದರು. ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಖಚಿತ ಎಂದು ಮೈತ್ರಿ ನಾಯಕರು ಅತೃಪ್ತರಿಗೆ ಭರವಸೆ ನೀಡಿದ್ದರು. ಆದರೆ, ಮೌನ್ನೆ ಪ್ರಕಟವಾದ ಐದು ರಾಜ್ಯಗಳ ಫಲಿತಾಂಶದಲ್ಲಿ ಕಾಂಗ್ರೆಸ್​ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ.

English summary
Congress leader MB Patil says that state cabinet will be expanded on December 22. He also sai that injustice meted out to north karnataka leaders shpuld be corrected during the cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X