ಬಿಜೆಪಿ ಗೆಲುವಿನ ರಹಸ್ಯ ಬಿಚ್ಚಿಟ್ಟ ವಕ್ತಾರ ಪ್ರಕಾಶ್
ಬೆಂಗಳೂರು, ಆಗಸ್ಟ್ 25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗದ್ದುಗೆ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸೋಲಿನ ಕಾರಣಗಳು ಸ್ಪಷ್ಟವಾಗುತ್ತಿದೆ. ಜೊತೆಗೆ ಬಿಜೆಪಿಗೆ ಮತದಾರ ಪ್ರಭು ಮತ್ತೊಮ್ಮೆ ಮನ್ನಣೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ಬಿಜೆಪಿ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಅವರು ಒನ್ ಇಂಡಿಯಾ ಪ್ರತಿನಿಧಿಗೆ ಉತ್ತರ ನೀಡಿದ್ದಾರೆ.
ಹಾಗೆ ನೋಡಿದರೆ ಬಿಜೆಪಿ ಗೆಲುವಿನ ಹಿಂದೆ ಅಂಥಾ ರಹಸ್ಯವೇನು ಅಡಗಿಲ್ಲ. ಮತದಾರರಲ್ಲಿ ಹೆಚ್ಚಿನ ಗೊಂದಲ ಮೂಡಿಸದಂತೆ ನಮ್ಮ ತಪ್ಪು ನೆಪ್ಪುಗಳನ್ನು ಅವರ ಮುಂದಿಟ್ಟೆವು. ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಜನಪ್ರಿಯ ಯೋಜನೆಗಳಲ್ಲಿ ಹೆಚ್ಚಿನ ಪಾಲು ನಗರದ ಮೂಲ ಸೌಕರ್ಯ ಅಭಿವೃದ್ಧಿಯತ್ತ ಸುತ್ತಾ ಹೆಣೆಯಲಾಗಿದೆ.[ಬಿಜೆಪಿಗೆ ಸ್ಪಷ್ಟ ಬಹುಮತ, ಕಾಂಗ್ರೆಸ್ಸಿಗೆ ಮುಖಭಂಗ]
ಫಲಿತಾಂಶ: ಬೆಂಗಳೂರು ದಕ್ಷಿಣ | ಉತ್ತರ ಜಿಲ್ಲೆ | ನಗರ ಜಿಲ್ಲೆ| ಸೆಂಟ್ರಲ್ ಜಿಲ್ಲೆ
ಬಿಬಿಎಂಪಿಯ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ನೀಡುವ ಭರವಸೆ ಹಾಗೂ ವೈಜ್ಞಾನಿಕ ರೀತಿ ಕ್ರಮದ ಬಗ್ಗೆ ಜನರಿಗೆ ಭರವಸೆ ಮೂಡಿದೆ. ಲೋಕಸಭೆ, ಅಸೆಂಬ್ಲಿ ಚುನಾವಣೆ ನಂತರ ದಕ್ಷಿಣ ಭಾರತದಲ್ಲಿ 'ಮೋದಿ ಅಲೆ' ಇಲ್ಲ ಎಂದು ಅಣಕವಾಡಿದವರಿಗೆ ಈ ಫಲಿತಾಂಶ ತಕ್ಕ ಉತ್ತರ ನೀಡಿದೆ ಎಂದು ಪ್ರಕಾಶ್ ಹೇಳಿದರು. ಇನ್ನಷ್ಟು ಪ್ರಶ್ನೋತ್ತರ ಮುಂದಿದೆ.

ಆಡಳಿತಾರೂಢ ಪಕ್ಷವನ್ನು ಜನತೆ ತಿರಸ್ಕರಿದ್ದೇಕೆ?
ಕಾಂಗ್ರೆಸ್ ಪಕ್ಷ ಸತತವಾಗಿ ಎರಡು ವರ್ಷದಿಂದ ನೀಡಿರುವ ದುರಾಳಡಳಿತದಿಂದ ಬೇಸತ್ತಿದ್ದಾರೆ.ಈಗ ಬಂದಿರುವ ಫಲಿತಾಂಶಕ್ಕೆ ನಮ್ಮ ಕಾರ್ಪೊರೇಟರ್ ಗಳ ಕಾರ್ಯವೂ ಕಾರಣ. ಸಿದ್ದರಾಮಯ್ಯ ಸರ್ಕಾರ ಬೆಂಗಳೂರನ್ನು ಒಡೆಯಲು ಯತ್ನಿಸಿದ್ದು ಅವರಿಗೆ ಮುಳುವಾಯಿತು. ಮನೆ ಒಡೆಯುವುದನ್ನು ಯಾರು ಒಪ್ಪುವುದಿಲ್ಲ.

ಬಿಜೆಪಿಗೆ ಈ ಪರಿ ಜಯದ ನಿರೀಕ್ಷೆ ಇತ್ತಾ?
2010ರಲ್ಲಿ ನಮ್ಮ ಕಾರ್ಪೊರೇಟರ್ ಗಳ ಕಾರ್ಯವೈಖರಿ ಹಾಗೂ ಸಮಸ್ಯೆಗಳತ್ತ ಕೈಗೊಂಡ ಕ್ರಮಗಳು ಇಂದಿಗೂ ಸಾರ್ವಜನಿಕರಿಗೆ ನೆನಪಿದೆ ಹಾಗೂ ಈ ಕಾರ್ಯಗಳಿಗೆ ಸಿದ್ದರಾಮಯ್ಯ ಸರ್ಕಾರ ತಂದ ವಿಘ್ನಗಳು ಹೇಗೆ ಮಾರಕವಾಯಿತು ಎಂಬುದು ಜನರಿಗೆ ಅರಿವಾಗಿದೆ. ಹೀಗಾಗಿ ಈ ಬಾರಿ ಜಯದ ನಿರೀಕ್ಷೆ ಇತ್ತು.

ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಕುತ್ತುಂಟಾಗುತ್ತದೆಯೆ?
ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಕಾಂಗ್ರೆಸ್ ಸೂಕ್ತ ನಿರ್ಧಾರ ಕೈಗೊಳ್ಳಲಿ. ನಾವು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅದು ಅವರ ಆಂತರಿಕ ವಿಚಾರ. ಕಾಂಗ್ರೆಸ್ ಸೋಲು, ಸಿದ್ದರಾಮಯ್ಯ ಕುರ್ಚಿ ಬಗ್ಗೆ ವಿಚಾರ ಬೇಡ.

ಬಿಬಿಎಂಪಿಗೆ ಫಂಡ್ ಸಮಸ್ಯೆಯಾಗುವುದಿಲ್ಲವೇ?
ಹಾಗೇನಿಲ್ಲ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂಬ ನಂಬಿಕೆ ಇದೆ. ಅನುದಾನ ಹಾಗೂ ಯೋಜನೆಗಳಿಗೆ ಸಹಕಾರ ನೀಡಿದರೆ ಜನತೆ ಪಕ್ಷಾತೀತವಾಗಿ ಎಲ್ಲರನ್ನು ಹರಸುತ್ತಾರೆ. ಇಲ್ಲದಿದ್ದರೆ ಎಲ್ಲಾ ಪಕ್ಷಕ್ಕೂ ತೊಂದರೆ ತಪ್ಪಿದ್ದಲ್ಲ. ಬೆಂಗಳೂರಿನಲ್ಲಿ ನಮ್ಮ ಮೂವರು ಸಂಸದರಿದ್ದಾರೆ ಎಂಬುದನ್ನು ಮರೆಯುವಂತಿಲ್ಲ.

ಮುಂದಿನ ಮೇಯರ್ ಯಾರಾಗಬಹುದು?
ಮೀಸಲಾತಿ ಪ್ರಕಟವಾದ ಮೇಲೆ ಮೇಯರ್ ಗೆ ಯಾರು ಸೂಕ್ತ ಎಂಬುದನ್ನು ಅನುಭವದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈಗಲೇ ಯಾರ ಹೆಸರನ್ನು ಸೂಚಿಸಲು ಸಾಧ್ಯವಿಲ್ಲ. ಸೂಕ್ತ ಸಮಯಕ್ಕೆ ಸೂಕ್ತ ನಿಧಾರ ಕೈಗೊಳ್ಳಲಾಗುತ್ತದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications