ಬಿಲಿಯನೇರ್ಗಳ ಕಣ್ಣಿಗೆ ಬೀದಿನಾಯಿಗಳು ಬೀಳಂಗಿಲ್ಲ!
ಬೆಂಗಳೂರು, ಫೆಬ್ರವರಿ 04 : ಉದ್ಯಾನ ನಗರಿ ಬೆಂಗಳೂರಿನ ಜನರಿಗೆ ಬೀದಿ ನಾಯಿಗಳ ಕಾಟದಿಂದ ಮುಕ್ತಿ ಸಿಕ್ಕಿದೆ. ಆದರೆ, ಇದು ಎಲ್ಲಾ ಬಡಾವಣೆಗಳಲ್ಲೂ ಅಲ್ಲ. ಕೇವಲ ಅರಮನೆ ಮೈದಾನದ ಸುತ್ತಮುತ್ತಲ ಪ್ರದೇಶಗಳಲ್ಲಿ ಮಾತ್ರ. ಇದಕ್ಕೆ ಕಾರಣ ಬಿಲಿಯನೇರ್ಗಳು!
ಅರಮನೆ ಮೈದಾನದಲ್ಲಿ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ 2016 ಸಮಾವೇಶಕ್ಕೆ ಚಾಲನೆ ಸಿಕ್ಕಿದ್ದು, ಕೋಟಿ-ಕೋಟಿ ರೂ.ಗಳ ಬಂಡವಾಳ ರಾಜ್ಯಕ್ಕೆ ಹರಿದುಬರುತ್ತಿದೆ. ಪ್ರತಿಷ್ಠಿತ ಸಮಾವೇಶಕ್ಕೆ ಬಂದಿರುವ ಬಿಲಿಯನೇರ್ಗಳ ಕಣ್ಣಿಗೆ ಬೀದಿನಾಯಿಗಳು ಬೀಳದಂತೆ ಬಿಬಿಎಂಪಿ ವ್ಯವಸ್ಥೆ ಮಾಡಿದೆ. [ಚಿತ್ರ : ಅರಮನೆ ಮೈದಾನದಲ್ಲಿ ಉದ್ಯಮಿಗಳ ದಂಡು]

ಇನ್ವೆಸ್ಟ್ ಕರ್ನಾಟಕ 2016 ಸಮಾವೇಶದ ವೇದಿಕೆ ಮತ್ತು ಸುತ್ತ-ಮುತ್ತಲಿನ ರಸ್ತೆಗಳಲ್ಲಿ ಅಡ್ಡಾಡಿಕೊಂಡಿದ್ದ 150ಕ್ಕೂ ಅಧಿಕ ಬೀದಿನಾಯಿಗಳನ್ನು ಕಾಯಲು ಬಿಬಿಎಂಪಿ ಜನರನ್ನು ನಿಯೋಜನೆ ಮಾಡಿದೆ. ಅಪ್ಪಿತಪ್ಪಿಯೂ ಬೀದಿ ನಾಯಿಗಳು ಅರಮನೆ ಮೈದಾನದ ಸುತ್ತ-ಮುತ್ತ ಕಾಲಿಡದಂತೆ ಕಣ್ಣಿಟ್ಟು ನೋಡಿಕೊಳ್ಳಲಾಗುತ್ತಿದೆ. [ಇನ್ವೆಸ್ಟ್ ಕರ್ನಾಟಕ : ಉದ್ಯಮಿಗಳು ಹೇಳಿದ್ದೇನು?]
ಸಮಾವೇಶಕ್ಕೆ ಆಗಮಿಸಿರುವ ಗಣ್ಯರಿಗೆ ಉದ್ಯಾನ ನಗರಿಯ ನಿಜವಾದ ಮುಖವನ್ನು ತೋರಿಸದಂತೆ ರಸ್ತೆಗಳಿಗೆ ಡಾಂಬರು ಬಳಿಯಲಾಗಿದೆ. ಫುಟ್ಪಾತ್ ದುರಸ್ತಿಗೊಳಿಸಲಾಗಿದೆ. ಅರಮನೆ ಮೈದಾನದ ಸುತ್ತಮುತ್ತಲಿದ್ದ ಬೀದಿನಾಯಿಗಳನ್ನು ಸ್ಥಳಾಂತರಗೊಳಿಸಲಾಗಿದೆ. ನಾಯಿಗಳು ಸಮಾವೇಶದ ವೇದಿಕೆ ಸುತ್ತಮುತ್ತ ಹೋಗದಂತೆ ವ್ಯವಸ್ಥೆ ಮಾಡಲಾಗಿದೆ. [ಬೆಂಗ್ಳೂರಲ್ಲಿ ಸಾಕು ನಾಯಿ ಸುಸು ಮಾಡಿದರೂ ದಂಡ ಕಟ್ಬೇಕು!]
ಭಿಕ್ಷುಕರು ಅತ್ತ ಸುಳಿಯುವಂತಿಲ್ಲ : ಬಿಬಿಎಂಪಿಯ ಸಿಬ್ಬಂದಿಗಳು ಬೀದಿ ನಾಯಿಗಳ ಮೇಲೆ ಕಣ್ಣಿಟ್ಟಿದ್ದರೆ ಪೊಲೀಸರು ಭಿಕ್ಷುಕರ ಮೇಲೆ ಕಣ್ಣಿಟ್ಟಿದ್ದಾರೆ. ಅರಮನೆ ಮೈದಾನದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಕಂಡು ಬರುತ್ತಿದ್ದ ಭಿಕ್ಷುಕರು ಅತ್ತ ಸುಳಿಯದಂತೆ ನೋಡಿಕೊಳ್ಳಲಾಗುತ್ತಿದೆ.
ಸಮಾವೇಶ ನಡೆಯುತ್ತಿರುವ ಸ್ಥಳದ ಸುತ್ತಮುತ್ತಲಿನ ರಸ್ತೆಗಳ ಸಿಗ್ನಲ್ಗಳಲ್ಲಿ ಹಲವು ಭಿಕ್ಷುಕರಿದ್ದರು. ಆದರೆ, ಸಮಾವೇಶಕ್ಕೆ ಚಾಲನೆ ಸಿಗುವ ಎರಡು ದಿನಗಳ ಮೊದಲೇ ಅವರನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿದೆ. ಮೂರು ದಿನಗಳ ಕಾಲ ಇತ್ತ ಸುಳಿದಾಡದಂತೆ ಪೊಲೀಸರು ಅವರಿಗೆ ಎಚ್ಚರಿಕೆ ನೀಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications