ಏನಿದು ಜನೌಷಧ? ಏನಿದರ ಮಹತ್ವ, ಎಲ್ಲೆಲ್ಲಿ ಸಿಗುತ್ತೆ?
ಆಧುನಿಕತೆಯ ಸಿರಿವಂತ ಬಡವ ಎನ್ನದೇ ಎಲ್ಲರ ಬದುಕುಗಳನ್ನು ಹಿಂಡಿ ಹಿಪ್ಪೆ ಮಾಡುವ ಮಹಾಮಾರಿ ಕಾಯಿಲೆಗಳು ಒಂದು ಕಡೆಯಾದರೆ. ಆ ಕಾಯಿಲೆ ಗುಣಪಡಿಸಲು ಸಧ್ಯ ಮಾರುಕಟ್ಟೆಯಲ್ಲಿ ಔಷದೋಪಚಾರದ ವೆಚ್ಚವೂ ಕೈಗೆಟುಕದ ಎತ್ತರದಲ್ಲಿರುವುದು ಮತ್ತೊಂದು ಕಡೆ.
ಹೀಗಿರುವಾಗ ಒಂದೊತ್ತಿನ ಊಟಕ್ಕೆ ನಸುಕಿನಿಂದ ಸಂಜೆವರೆಗೆ ಕೂಲಿ ಜೀವನ ಮಾಡುವರಿಗೆ ಕಾಯಿಲೆವೊಂದು ಬಂತೆಂದರೇ ಅವರ ಗತಿ? ಆ ದೇವರೇ ಬಲ್ಲ.
ಜನರಿಗೆ ಮಾರುಕಟ್ಟೆಯಲ್ಲಿ ದೊರಕುವ ಔಷಧಗಳ ಬೆಲೆಗಿಂತ ಅತ್ಯಂತ ಕಡಿಮೆ ಬೆಲೆಗೆ ಸುಲಭವಾಗಿ ದಕ್ಕುವಂತಾದರೆ ಅದೆಷ್ಟೋ ಜೀವಗಳು ನೆಮ್ಮದಿಯ ಬದುಕು ಕಾಣುತ್ತವೆ ಅಲ್ವೇ...
ಹೌದು.. ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆ 'ಜನೌಷಧ' ಯೋಜನೆ ಜಾರಿಗೆ ತಂದಿದೆ. ಆಸ್ಪತ್ರೆ, ಔಷಧ ವೆಚ್ಚ ಭರಿಸುವ ಸಾಮರ್ಥ್ಯವಿಲ್ಲದೇ ಅಸಹಾಯಕರಾಗಿ ಜೀವ ಕಳೆದುಕೊಳ್ಳುವ ಎಷ್ಟೋ ಜೀವಗಳಿಗೆ ಆಸರೆ ನೀಡುವ ಯೋಜನೆ ಇದಾಗಿದೆ. ಈ ಅಮೂಲ್ಯ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಇನ್ಮುಂದೆ ಕಡಿಮೆ ಬೆಲೆಗೆ ಔಷಧಗಳು ಲಭ್ಯವಾಗಲಿವೆ. ಏನಿದು ಜನೌಷಧ? ಏನಿದರ ಮಹತ್ವ? ಮುಂದೆ ಓದಿ...

ಶೇ.70ರಷ್ಟು ರಿಯಾಯ್ತಿ ದರದಲ್ಲಿ ಔಷಧ
ಕಾಯಿಲೆ ಪೀಡಿತರಾದ ಜನರಿಗೆ ಕಡಿಮೆ ದರದಲ್ಲಿ ಔಷಧ ಸಿಗುವಂತೆ ನೋಡಿ ಕೊಳ್ಳುವ ಮಹತ್ವಾಕಾಂಕ್ಷಿ ಯೋಜನೆ ಇದು. ಜನೌಷಧ ಕೇಂದ್ರಗಳಲ್ಲಿ ಮಾರುಕಟ್ಟೆ ದರಕ್ಕಿಂತ ಶೇ.70ರಷ್ಟು ರಿಯಾಯ್ತಿ ದರದಲ್ಲಿ ಔಷಧ ಹಾಗೂ ವೈದ್ಯಕೀಯ ಸಲಕರಣೆಯನ್ನು ಒದಗಿಸುವ ಅತ್ಯಂತ ಅಗ್ಗದ ಯೋಜನೆಯಾಗಿದೆ.

ಜಿಲ್ಲಾವಾರು ಮತ್ತು ಗ್ರಾಮೀಣವಾರು ಜನೌಷಧ ಮಳಿಗೆ
ಮಾರುಕಟ್ಟೆಯಲ್ಲಿನ ಬ್ರ್ಯಾಂಡೆಡ್ ಔಷಧಗಳಿಗಿಂತ ಕಡಿಮೆ ಬೆಲೆಗೆ ಎಲ್ಲರಿಗೂ ಉಚಿತ ಔಷಧೋಪಚಾರ ದೊರಕಲಿದೆ. ಈ ನಿಟ್ಟಿನಲ್ಲಿ ಜನೌಷಧ ಮಳಿಗೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಜನರ ಅವಶ್ಯಕತೆಗೆ ತಕ್ಕಂತೆ ಔಷಧಿಗಳನ್ನು ಒದಗಿಸಲು ಪ್ರತೀ ಜಿಲ್ಲಾವಾರು ಮತ್ತು ಗ್ರಾಮೀಣವಾರು ಜನೌಷಧ ಮಳಿಗೆಗಳನ್ನು ತೆರೆಯಲಾಗುತ್ತಿದೆ.

16ರೂ. ಮಾತ್ರೆ ಜನೌಷಧ ಕೇಂದ್ರದಲ್ಲಿ 4.80ರೂ
ಉದಾಹರಣೆಗೆ ಒಂದು ಆಸ್ಪಿರಿನ್ ಮಾತ್ರೆಯ ಬೆಲೆ ಮಾರುಕಟ್ಟೆಯಲ್ಲಿ 16ರೂಪಾಯಿ ಎಂದಿಟ್ಟು ಕೊಳ್ಳೋಣ ಜನೌಷಧ ಕೇಂದ್ರದಲ್ಲಿ ಅದೇ ಮಾತ್ರೆ 4.80ರೂ. ದೊರೆಯ ಬಹುದು.

ವ್ಯಾಟ್ ತೆರಿಗೆ ಹಾಗೂ ಎಕ್ಸೈಸ್ ಕರ ಇಳಿಕೆ
ಇದು ಇತರೆ ಔಷಧ ಅಂಗಡಿಗಳಲ್ಲಿ ದೊರೆಯುವ ಔಷದಗಳ ಬೆಲೆಗಿಂತ ಕಡಿಮೆ. ಸರ್ಕಾರ ಅಗತ್ಯ ಔಷಧಗಳ ಮೇಲೆ ವ್ಯಾಟ್ ತೆರಿಗೆ ಹಾಗೂ ಎಕ್ಸೈಸ್ ಕರವನ್ನು ಅತ್ಯಂತ ಕಡಿಮೆ ದರಕ್ಕೆ ಇಳಿಸಿದೆ ಹೀಗಾಗಿ ಮತ್ತಷ್ಟು ಕಡಿಮೆ ಬೆಲೆಗೆ ಜನರಿಕ್ ಮಳಿಗೆಗಳಲ್ಲಿ ಔಷಧಗಳು ಮತ್ತು ವೈದ್ಯಕೀಯ ಸಲಕರಣೆಗಳು ಲಭ್ಯ. ವಿಪರ್ಯಾಸವೆಂದರೆ ಈ ಬಗ್ಗೆ ಬಹುತೇಕ ಜನರಿಗೆ ತಿಳಿದಿಲ್ಲ.ಇದರಿಂದ ಪ್ರಜ್ಞಾವಂತ ಜನರು ಈ ಬಗ್ಗೆ ಜನಸಾಮಾನ್ಯರಿಗೆ ಹರಿವು ಮೂಡಿಸುವ ಕಾರ್ಯ ಆಗಬೇಕಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications