ಜಯಾ ವಿರುದ್ಧ ಮೇಲ್ಮನವಿ ಸಲ್ಲಿಸಲು ಚುನಾವಣಾ ಲೆಕ್ಕಾಚಾರ
ಬೆಂಗಳೂರು, ಮೇ 27 : ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರಕ್ಕೆ ಆಗಸ್ಟ್ 11ರವರೆಗೆ ಅವಕಾಶವಿದೆ. ಬಿಬಿಎಂಪಿ ಚುನಾವಣೆ ಎದುರಾಗಿರುವ ಹಿನ್ನಲೆಯಲ್ಲಿ ತಮಿಳರ ಮತಗಳ ಮೇಲೆ ಕಣ್ಣಿಟ್ಟಿರುವ ಸರ್ಕಾರ, ಚುನಾವಣೆ ನಂತರ ಮೇಲ್ಮನವಿ ಸಲ್ಲಿಸಲಿದೆ.
ಮೂರು ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಮೇ 5ರಂದು ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಚುನಾವಣೆ ಮುಗಿಯಲಿ ಎಂದು ಕಾಯಲು ತೀರ್ಮಾನಿಸಿದೆ. [ಮೇಲ್ಮನವಿಗೆ ಕಾನೂನು ತೊಡಕಿದೆಯೇ?]

30 ಲಕ್ಷ ಮತಗಳು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸುಮಾರು 30 ಲಕ್ಷ ತಮಿಳರು ಮತದಾನ ಮಾಡಲಿದ್ದಾರೆ. ಇಷ್ಟು ಮತಗಳು ಯಾವುದೇ ಪಕ್ಷಕ್ಕಾದರೂ ದೊಡ್ಡ ಲಾಭ ತಂದುಕೊಡಲಿವೆ. ಆದ್ದರಿಂದ, ಚುನಾವಣೆ ಮುಗಿಯಲಿ ಎಂದು ಸರ್ಕಾರ ಕಾದು ನೋಡುವ ತಂತ್ರ ಅನುಸರಿಸಲಿದೆ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ]
ಮೂವತ್ತು ಲಕ್ಷ ಮತದಾರರ ಪೈಕಿ ಬಹುಸಂಖ್ಯಾತರು ಜಯಲಲಿತಾ ಬೆಂಬಲಿಗರು ಮತ್ತು ಎಐಎಡಿಎಂಕೆ ಪಕ್ಷವನ್ನು ಬೆಂಬಲಿಸುವವರು. ಒಂದು ವೇಳೆ ಸರ್ಕಾರ ಮೇಲ್ಮನವಿ ಸಲ್ಲಿಸಿದರೆ ಕಾಂಗ್ರೆಸ್ ಎಐಎಡಿಎಂಕೆ ವಿರೋಧಿ ಎಂದು ಜನರು ಪಕ್ಷದ ವಿರುದ್ಧ ತಿರುಗಿ ಬೀಳಬಹುದು ಎಂಬ ಅಡಗಿದೆ. [ಬಿಬಿಎಂಪಿ ವಿಭಜನೆ ಹೇಗೆ, ಇಲ್ಲಿದೆ ಮಾಹಿತಿ]
ಚುನಾವಣೆ ಲೆಕ್ಕಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಸದ್ಯಕ್ಕೆ ಮೇಲ್ಮನವಿ ಸಲ್ಲಿಸುವಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ. ಕಾನೂನು ಇಲಾಖೆಯೂ ಸರ್ಕಾರಕ್ಕೆ ಅಗತ್ಯ ವರದಿಗಳನ್ನು ನೀಡಲಿದ್ದು, ನಂತರ ಮೇಲ್ಮನವಿ ಸಲ್ಲಿಸಬಹುದು. ಅಂದಹಾಗೆ ಜುಲೈನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications