Get Updates
Get notified of breaking news, exclusive insights, and must-see stories!

ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಮ್ಮ?

ಬೆಂಗಳೂರು, ಮೇ 11 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ವಿಶೇಷ ಕೋರ್ಟ್ ನೀಡಿರುವ 4 ವರ್ಷದ ಜೈಲು ಶಿಕ್ಷೆ ತೀರ್ಪು ಪ್ರಶ್ನಿಸಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಇಂದು ಪ್ರಕಟಿಸಿದೆ. ಜಯಲಲಿತಾ ಅವರನ್ನು ಆರೋಪ ಮುಕ್ತವಾಗಿಸಿದ್ದು, ವಿಶೇಷ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ರದ್ದುಗೊಳಿಸಿದೆ. ['ಅಕ್ರಮ ಆಸ್ತಿ ಪ್ರಕರಣ: ಜಯಲಲಿತಾ ನಿರ್ದೋಷಿ']

ಕರ್ನಾಟಕ ಹೈಕೋರ್ಟ್‌ನ ವಿಶೇಷ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ಮಾ.11ರಂದು ಮುಕ್ತಾಯಗೊಳಿಸಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ತೀರ್ಪು ನೀಡಿದರು. [ಅಕ್ರಮ ಆಸ್ತಿಗಳಿಕೆ ಪ್ರಕರಣ Time line]

Jayalalithaa case

2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಬೆಂಗಳೂರಿನ ವಿಶೇಷ ನ್ಯಾಯಾಲ­ಯ ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಜಯಲಲಿತಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ತೀರ್ಪಿನ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ [ಜಯ ಪ್ರಕರಣದ ಎಸ್ ಪಿಸಿ ಬಿವಿ ಆಚಾರ್ಯ ಸಂದರ್ಶನ]

ಸಮಯ 2.40 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಜಯಲಲಿತಾ ಅವರು ಪುನಃ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುವ ಸಾಧ್ಯತೆ ಇದೆ. ಎರಡು ದಿನಗಳ ಕಾಲ ರಾಜೀನಾಮೆ ನೀಡಬಾರದು ಎಂದು ಅವರು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಸೂಚನೆ ನೀಡಿದ್ದಾರೆ.

ಸಮಯ 2 ಗಂಟೆ : ಕೆಲವು ಕಾರ್ಯಕರ್ತರನ್ನು ಮಾತ್ರ ಮನೆಯಲ್ಲಿ ಭೇಟಿ ಮಾಡಿದ ಜಯಲಲಿತಾ, ಹೂವಿನ ಹಾರ ಹಾಕಿ ಕಾರ್ಯಕರ್ತರಿಂದ ಅಭಿನಂದನೆ ಸಲ್ಲಿಕೆ. 'ಕಾರ್ಯಕರ್ತರು ಮನೆಯ ಬಳಿ ಬರಬೇಡಿ, ದೇವರಿಗೆ ಪ್ರಾರ್ಥನೆ ಸಲ್ಲಿಸಿ' ಎಂದು ಜಯಲಲಿತಾ ಕರೆ ನೀಡಿದ್ದಾರೆ

ಸಮಯ 1.30 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ದೋಷಮುಕ್ತರಾದ ಜಯಲಲಿತಾ ಶೀಘ್ರದಲ್ಲೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ

ಸಮಯ 1 ಗಂಟೆ : ಜಯಲಲಿತಾ ನೋಡಲು ನಿವಾಸದ ಮುಂದೆ ಕಾದು ಕುಳಿತಿರುವ ನೂರಾರು ಅಭಿಮಾನಿಗಳು, ಇನ್ನೂ ಮನೆಯಿಂದ ಹೊರಬಾರದ ಜಯಲಲಿತಾ

ಸಮಯ 12.15 : 10 ಸಂಪುಟದಲ್ಲಿ 918 ಪುಟಗಳ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ಅವರನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸಮಯ 12.07 : ಜಯಲಲಿತಾ ಅವರನ್ನು ದೋಷಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಡಿಎಂಕೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದೆ. ಕರುಣಾನಿಧಿ ಅವರ ನಿವಾಸದಲ್ಲಿ ನಡೆದ ಡಿಎಂಕೆ ನಾಯಕರ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ

ಸಮಯ 12 ಗಂಟೆ : 'ತೀರ್ಪಿನ ಪ್ರತಿ ಇನ್ನೂ ಸಿಕ್ಕಿಲ್ಲ, ಪ್ರತಿ ಸಿಗುವ ತನಕ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಮುಯ 11.45 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತಗೊಂಡಿರುವ ಜಯಲಲಿತಾ ಅವರು ಪುನಃ ತಮಿಳುನಾಡು ಸಿಎಂ ಆಗುವ ಸಾಧ್ಯತೆ ಇದೆ. ಮೇ 17ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ತಿಳಿದುಬಂದಿದೆ [ಅಭಿಮಾನಿಗಳ ಸಂಭ್ರಮಾಚರಣೆ ವಿಡಿಯೋ ನೋಡಿ]

ಸಮಯ 11.30 : ಜಯಲಲಿತಾ ಪರವಾಗಿ ತೀರ್ಪು ಬಂದಿರುವುದರಿಂದ ಜಯಾ ಅವರ ಚೆನ್ನೈ ನಿವಾಸದ ಮುಂದೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಎಐಎಡಿಎಂಕೆ ಸಂಸದರು ಸಂತಸದಿಂದ ಕಣ್ಣೀರು ಹಾಕಿದ್ದಾರೆ.

ಸಮಯ 11.25 : 'ಜಯಲಲಿತಾ ಅವರಿಗೆ ನ್ಯಾಯ ಸಿಕ್ಕಿದೆ. ಅವರು ತಮಿಳುನಾಡು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬಹುದು' ಎಂದು ಜಯಾ ಪರ ವಕೀಲ ಬಿ.ಕುಮಾರ್ ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸಮಯ 11.19 : 'ಹೈಕೋರ್ಟ್ ಆದೇಶ ಆಶ್ಚರ್ಯ ಮತ್ತು ಅಘಾತತಂದಿದೆ. ಈ ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇನೆ' ಎಂದು ದೂರುದಾರ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ

ಸಮಯ 11.17 : ಜಯಲಲಿತಾ ನಿವಾಸಕ್ಕೆ ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಭೇಟಿ, ಜಯ ನಿವಾಸದ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ

Tamilnadu

ಸಮಯ 11.12 : ಕೋರ್ಟ್ ತೀರ್ಪಿನಿಂದಾಗಿ ಜಯಲಲಿತಾ ಅವರು ಪುನಃ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬಹುದು

ಸಮುಯ 11.11 : ಎರಡು ಸಾಲು ತೀರ್ಪು ಓದಿದಿ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ

Karnataka high court

ಸಮಯ 11.06 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ಆರೋಪ ಮುಕ್ತ

ಸಮಯ 11.02 : ಜಯಲಲಿತಾ ದೋಷ ಮುಕ್ತ, ಕೆಳಹಂತದ ನ್ಯಾಯಾಲಯದ ತೀರ್ಪು ರದ್ದುಗೊಳಿಸಿದ ಹೈಕೋರ್ಟ್

ಸಮಯ 11 ಗಂಟೆ : ಕೋರ್ಟ್‌ ಹಾಲ್ 14ರಲ್ಲಿ ಕಲಾಪ ಆರಂಭ

ಸಮಯ 10.45 : ಕೋರ್ಟ್ ಹಾಲ್ 14 ವಕೀಲರಿಂದ, ಪತ್ರಕರ್ತರಿಂದ ತುಂಬಿ ಹೋಗಿದೆ. ಕೆಲವೇ ಕ್ಷಣಗಳಲ್ಲಿ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಕೋರ್ಟ್‌ಗೆ ಆಗಮಿಸಲಿದ್ದಾರೆ

ಸಮಯ 10.37 : 'ವಿಶೇಷ ಕೋರ್ಟ್ ನೀಡಿರುವ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿಯಲಿ ಎಂದು ನಾನು ನಿರೀಕ್ಷಿಸುತ್ತಿದ್ದೇನೆ' ಎಂದು ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸಮಯ 10.30 : ಹೈಕೋರ್ಟ್‌ಗೆ ಆಗಮಿಸಿದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಸಿ) ಬಿ.ವಿ.ಆಚಾರ್ಯ

ಸಮಯ 10.23 : 15 ವಕೀಲರನ್ನು ಕೋರ್ಟ್‌ವೊಳಗೆ ಬಿಡುವಂತೆ ಜಯಲಲಿತಾ ಪರ ವಕೀಲರು ಮಾಡಿದ ಮನವಿಯನ್ನು ಪೊಲೀಸರು ತಿರಸ್ಕರಿಸಿದರು

Justice C.R. Kumaraswamy

ಸಮಯ 10.08 : ಹೈಕೋರ್ಟ್‌ಗೆ ಪ್ರವೇಶ ನೀಡುವ ಸಂಬಂಧ ತಮಿಳುನಾಡು ವಕೀಲರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸುತ್ತಿದ್ದಾರೆ. ಬಾರ್ ಕೌನ್ಸಿಲ್ ಗುರತಿನ ಪತ್ರ ಹೊಂದಿರುವ ವಕೀಲರಿಗೆ ಮಾತ್ರ ಕೋರ್ಟ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತಿದೆ [ಜಯಲಲಿತಾಗೆ ಜಾಮೀನು ಸಿಕ್ಕಿದ್ದೇಕೆ? ಆದೇಶ ಪ್ರತಿ ಓದಿ]

ಸಮಯ 10.05 : ಜಯಲಲಿತಾ ಅವರ ಶಿಕ್ಷೆ ರದ್ದಾಗಲಿ ಎಂದು ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ

ಸಮಯ 10.02 : ಹೈಕೋರ್ಟ್‌ಗೆ ಆಗಮಿಸಿದ ನ್ಯಾಯಮೂರ್ತಿ ಸಿ.ಆರ್. ಕುಮಾರಸ್ವಾಮಿ. ಕೋರ್ಟ್‌ಹಾಲ್‌ 14ರಲ್ಲಿ 11 ಗಂಟೆಗೆ ಕಲಾಪ ಆರಂಭವಾಗಲಿದೆ

ಸಮಯ 10 ಗಂಟೆ : ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಉಭಯ ರಾಜ್ಯಗಳ ಪೊಲೀಸರು ಗಸ್ತು ತಿರುಗುತ್ತಿದ್ದಾರೆ

ಸಮಯ 9.45 : ಜಯಲಲಿತಾ ಶಿಕ್ಷೆ ರದ್ದಾಗುತ್ತದೆ ಎಂದು ಅಭಿಮಾನಿಗಳು ಅವರ ನಿವಾಸದ ಮುಂದೆ ಸಂಭ್ರಮಾಚರಣೆ ಆರಂಭಿಸಿದ್ದಾರೆ

ಸಮಯ 9.27 : ಜಯಲಲಿತಾ ತೀರ್ಪಿನ ಹಿನ್ನಲೆಯಲ್ಲಿ ತಮಿಳುನಾಡಿನಿಂದ ಹಲವು ವಕೀಲರು ಕರ್ನಾಟಕಕ್ಕೆ ಆಗಮಿಸಿದ್ದಾರೆ

ಸಮಯ 9.20 : ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ​ನೇತೃತ್ವದಲ್ಲಿ 5 ಸಹಾಯಕ ಪೊಲೀಸ್ ಆಯುಕ್ತರು, 20 ಪೊಲೀಸ್ ಇನ್ಸ್​ಪೆಕ್ಟರ್ ಮತ್ತು 200 ಕಾನ್ಸ್​ಟೇಬಲ್‌ಗಳು, ಕೆಎಸ್​ಆರ್​ಪಿ ಮತ್ತು ಸಿಎಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸಮಯ 9.10 : ಕರ್ನಾಟಕ ಹೈಕೋರ್ಟ್ ಸುತ್ತ-ಮತ್ತು 1000 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಸಮಯ 8.45 : ಜಯಲಲಿತಾ ತೀರ್ಪು ಪ್ರಕಟಗೊಳ್ಳುವ ಹಿನ್ನಲೆಯಲ್ಲಿ ಚೆನ್ನೈನ ಪೋಯಸ್ ಗಾರ್ಡನ್‌ನಲ್ಲಿರುವ ಜಯಾ ನಿವಾಸಕ್ಕೆ ನೂರಾರು ಅಭಿಮಾನಿಗಳು ಆಗಮಿಸುತ್ತಿದ್ದಾರೆ

ಸಮಯ 8.25 : ತೀರ್ಪು ಪ್ರಕಟಗೊಳ್ಳುವ ತನಕ ಕೆಎಸ್ಆರ್‌ಟಿಸಿ ಬಸ್ ಎಂದಿನಂತೆ ತಮಿಳುನಾಡಿಗೆ ಸಂಚರಿಸಲಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ

ಸಮಯ 8 ಗಂಟೆ : ಜಯಲಲಿತಾ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

Jayalalithaa

ಸಮಯ 7.30 : ಜಯಲಲಿತಾ ಖುದ್ದಾಗಿ ಇಂದು ನ್ಯಾಯಾಲಕ್ಕೆ ಹಾಜರಾಗುವುದಿಲ್ಲ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+