ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ : ಶಾಸಕ ಪಿಳ್ಳಮುನಿಶಾಮಪ್ಪ

By Manjunatha
|
Google Oneindia Kannada News

ನವೆಂಬರ್ 09, ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ಕ್ಷೇತ್ರದ ಜೆ.ಡಿ.ಎಸ್ ಶಾಸಕ ಪಿಳ್ಳಮುನಿಶಾಮಪ್ಪ ಅವರು ಜೆ.ಡಿ.ಎಸ್ ತೊರೆದು ಬಿ.ಜೆ.ಪಿ ಸೇರುತ್ತಾರೆಂಬ ಊಹಾಪೋಹ ಕ್ಷೇತ್ರದಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ನವೆಂಬರ್ 9 ರ ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಅವರು ತಾವು ಜೆ.ಡಿ.ಎಸ್ ಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಮೊದಲ ಬಾರಿಗೆ ಮಂಡಲ್ ಪಂಚಾಯಿತಿಗೆ ಚುನಾವಣೆಗೆ ನಿಂತಾಗಲೂ ಜೆ.ಡಿ.ಎಸ್ ನಿಂದ ಸ್ಪರ್ಧಿಸಿದ್ದೆ, ಅಲ್ಲಿನಿಂದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮುಗಿಸಿ ಈಗ ಶಾಸಕನಾಗಿದ್ದೇನೆ, ಎಲ್ಲ ಚುನಾವಣೆಗಳನ್ನು ಜೆ.ಡಿ.ಎಸ್ ಪಕ್ಷದ ಗುರುತನ್ನು ಬೆನ್ನಿಗಿಟ್ಟುಕೊಂಡೇ ಗೆಲುವು ಸಾಧಿಸಿದ್ದೇನೆ ಹಾಗಾಗಿ ಪಕ್ಷ ಬಿಡುವ ಮಾತೇ ಇಲ್ಲ' ಎಂದರು.

JDS MLA Pillamunishamappa clarifies he is not leaving the party

ಗಾಳಿ ಸುದ್ದಿಗೆ ಕಾರಣವೇನು

ಈ ಬಾರಿಯ ಟಿಕೆಟ್ ಗಾಗಿ ನಿಸರ್ಗ ನಾರಾಯಣಸ್ವಾಮಿ ಅವರು ಭಾರಿ ಪೈಪೋಟಿ ನೀಡುತ್ತಿದ್ದು, ಪಿಳ್ಳಮುನಿಶಾಮಪ್ಪ ಅವರಿಗೆ ಚುನಾವಣಾ ಟಿಕೆಟ್ ಇನ್ನೂ ಖಾತರಿಯಾಗದ ಹಿನ್ನೆಲೆಯಲ್ಲಿ ಈ ರೀತಿಯ ಊಹಾಪೋಹ ಹರಿದಾಡಿದೆ. ಅದಲ್ಲದೆ ನವೆಂಬರ್ 08ರ ಬುಧವಾರ ಖಾಸಗಿ ವಾಹಿನಿಯೊಂದರಲ್ಲಿ ರಾಜ್ಯದ ಐದು ಮಂದಿ ಜೆ.ಡಿ.ಎಸ್ ಶಾಸಕರನ್ನು ಬಿ.ಜೆ.ಪಿ ಆಪರೇಷನ್ ಕಮಲ ಮಾಡಲಿದೆ ಎಂದು ಪ್ರಸಾರವಾದ ವರದಿಯಲ್ಲಿ ಪಿಳ್ಳಮುನಿಶಾಮಪ್ಪ ಅವರ ಹೆಸರು ಇದ್ದದರಿಂದ ಅನುಮಾನಗಳಿಗೆ ರೆಕ್ಕೆ ಪುಕ್ಕ ಬಂದು ಖುದ್ದು ಶಾಸಕರೇ ಸ್ಪಷ್ಟೀಕರಣ ನೀಡಬೇಕಾಗಿ ಬಂದಿದೆ.

English summary
Devanahalli MLA Pillamunishamappa novembre 9nth clarified that he is not leaving Jds Party at any chance. what shown on the Tv chanel is fake news.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X