ವಿಜಯನಗರ: ಯುವಕನ ಮೇಲೆ ಯುವತಿಯಿಂದ Acid ದಾಳಿ
ಮದುವೆಯಾಗಲು ಒಲ್ಲೆ ಎಂದ ಯುವಕನ ಮೇಲೆ ಭಗ್ನ ಪ್ರೇಮಿ ಯುವತಿಯೊಬ್ಬಳು ಆಸಿಡ್ ಎರಚಿದ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಯುವಕನ ಮೇಲೆ ದಾಳಿ ನಡೆಸಿದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು, ಜನವರಿ 17: ಮದುವೆಯಾಗಲು ಒಲ್ಲೆ ಎಂದ ಯುವಕನ ಮೇಲೆ ಭಗ್ನ ಪ್ರೇಮಿ ಯುವತಿಯೊಬ್ಬಳು ಆಸಿಡ್ ಎರಚಿದ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಯುವಕನ ಮೇಲೆ ದಾಳಿ ನಡೆಸಿದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಸಿಡ್ ದಾಳಿ ನಡೆಸಿದ ಯುವತಿಯನ್ನು ವಿದ್ಯಾ ಎಂದು ಗುರುತಿಸಲಾಗಿದೆ.

ಮದುವೆಯಾಗುವಂತೆ ಯುವಕನೊಬ್ಬನ ಹಿಂದೆ ಬಿದ್ದಿದ್ದ ವಿದ್ಯಾ ನಿರಾಶೆ ಕಾದಿತ್ತು. ವಿದ್ಯಾ ಸಲ್ಲಿಸಿದ ಮದುವೆ ಆಫರ್ ರಿಜೆಕ್ಟ್ ಆಗಿತ್ತು. ಇದರಿಂದ ಸಿಟ್ಟಿಗೆದ್ದ ಯುವತಿ ಆಸಿಡ್ ದಾಳಿ ನಡೆಸಿದ್ದಲ್ಲದೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ.
ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿ ವಿದ್ಯಾಳನ್ನು ಸಾರ್ವಜನಿಕರೆ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಹಲ್ಲೆಗೊಳಗಾಗಿದ್ದ ವಿಜಯ್ ಕುಮಾರ್ ನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರು ಶ್ರೀರಾಮಪುರದ ನಿವಾಸಿಗಳಾಗಿದ್ದು, ಬಹುಕಾಲದಿಂದ ಗೆಳೆತನವಿತ್ತು. ಆದರ್, ವಿದ್ಯಾಳಿಗೆ ವಿಜಯ್ ಕುಮಾರ್ ಮದುವೆಯಾಗುವ ಆಸೆ ಹುಟ್ಟಿತು. ಮದುವೆಯಾಗುವಂತೆ ಕೇಳಿಕೊಂಡಿದ್ದಾಳೆ. ಮದುವೆಗೆ ವಿಜಯ್ ನಿರಾಕರಿಸಿದ್ದಾನೆ.
ಇದರಿಂದ ಸಿಟ್ಟಿಗೆದ್ದ ವಿದ್ಯಾ, ವಿಜಯನಗರ ಬಳಿ ದ್ವಿಚಕ್ರವಾಹನದಲ್ಲಿ ಬಂದು ವಿಜಯ್ ಕುಮಾರ್ ಮೇಲೆ ಆಸಿಡ್ ದಾಳಿ ನಡೆಸಿದ್ದಾಳೆ. ವಾಹನದ ನಂಬರ್ ಪ್ಲೇಟ್ ಕೂಡಾ ಅಳಿಸಿದ್ದ ವಿದ್ಯಾ, ಪರಾರಿಯಾಗಲು ಯೋಜನೆ ಹಾಕಿಕೊಂಡಿದ್ದಳು, ಆದರೆ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು ಈಗ ಪೊಲೀಸರ ಅತಿಥಿಯಾಗಿದ್ದಾಳೆ.(ಒನ್ ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications