ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಲಂಕೇಶ್ ಹತ್ಯೆ ಆರೋಪಿ ನವೀನ್ ನ್ಯಾಯಾಂಗ ಬಂಧನ ವಿಸ್ತರಣೆ

By Manjunatha
|
Google Oneindia Kannada News

ಬೆಂಗಳೂರು, ಜೂನ್ 11: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.

3ನೇ ಎಸಿಎಂಎಂ ನ್ಯಾಯಾಲಯಕ್ಕೆ ಇಂದು ಆರೋಪಿ ನವೀನ್ ನನ್ನು ಹಾಜರುಪಡಿಸಲಾಗಿತ್ತು. ಇನ್ನಷ್ಟು ತನಿಖೆಯ ಅವಶ್ಯಕತೆ ಇರುವ ಕಾರಣ ಬಂಧನವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ವಿಶೇಷ ತನಿಖಾ ದಳ ಮನವಿ ಮಾಡಿತ್ತು.

ಗೌರಿಲಂಕೇಶ್ ಹತ್ಯೆ: ಹಿಂದೂ ಸಂಘಟನೆ ಪಾತ್ರದ ಬಗ್ಗೆ ಸ್ಫೋಟಕ ಮಾಹಿತಿಗೌರಿಲಂಕೇಶ್ ಹತ್ಯೆ: ಹಿಂದೂ ಸಂಘಟನೆ ಪಾತ್ರದ ಬಗ್ಗೆ ಸ್ಫೋಟಕ ಮಾಹಿತಿ

ತನಿಖಾ ದಳದ ಮನವಿಗೆ ಸ್ಪಂದಿಸಿದ ನ್ಯಾಯಾಲಯವು ಆರೋಪಿಯ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಣೆ ಮಾಡಿದೆ. ಫೆಬ್ರವರಿ 16ರಂದು ಕೆ.ಟಿ.ನವೀನ್ ಕುಮಾರ್ ಅನ್ನು ಮೆಜೆಸ್ಟಿಕ್‌ನಲ್ಲಿ ಬಂಧಿಸಲಾಗಿತ್ತು.

ಗೌರಿ ಹತ್ಯೆಯ ಮಿಸ್ಟರಿ : ಅಸಲಿಗೆ ಟ್ರಿಗರ್ ಎಳೆದದ್ದು ಯಾರು?ಗೌರಿ ಹತ್ಯೆಯ ಮಿಸ್ಟರಿ : ಅಸಲಿಗೆ ಟ್ರಿಗರ್ ಎಳೆದದ್ದು ಯಾರು?

Judicial custody expended for Gauri Lankesh murder accused Naveen Kumar

ಗೌರಿ ಲಂಕೇಶ್‌ ಹಂತಕರಿಗೆ ನವೀನ್ ಕುಮಾರ್ ಸಹಾಯ ಮಾಡಿದ್ದ ಎಂದು ಆರೋಪ ಮಾಡಲಾಗಿದ್ದು, ಹತ್ಯೆಯಲ್ಲಿ ಈತನ ಪಾತ್ರ ಮಹತ್ವದ್ದು ಎನ್ನಲಾಗಿದೆ. ವಿಶೇಷ ತನಿಖಾ ದಳವು ಈಗಾಗಲೇ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದು, ಇನ್ನಷ್ಟು ವಿಚಾರಣೆ ನಡೆಸಬೇಕಾದ ಕಾರಣ ನವೀನ್ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

English summary
Gauri Lankesh assassination accused KT Naveen Kumar's judicial custody has been extended 14 days more. KT Naveen kumar said to be helped murderers of Gauri Lankesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X