ಬೆಂಗಳೂರಿನಲ್ಲಿರುವುದು 14 ಲಕ್ಷ ಮರಗಳು ಮಾತ್ರ
ಬೆಂಗಳೂರು, ಮೇ 9 : ಬೆಂಗಳೂರನ್ನು ಉದ್ಯಾನನಗರಿ ಎಂದು ಕರೆಯುವ ಮುನ್ನ ಒಮ್ಮೆ ಆಲೋಚಿಸಬೇಕಾಗಿದೆ. ಏಕೆಂದರೆ, ನಗರದಲ್ಲಿ ಕೇವಲ 14 ಲಕ್ಷ ಮರಗಳಿವೆ ಎಂಬ ಆತಂಕಕಾರಿ ಮಾಹಿತಿ ಅಧ್ಯಯನದಿಂದ ಹೊರಬಿದ್ದಿದೆ. ಅಧ್ಯಯನದ ಪ್ರಕಾರ ನಗರದ ಆರು ಮಂದಿಗೆ ಕೇವಲ ಒಂದು ಮರವಿದೆ.
ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರು ನಗರದ ಜನಸಂಖ್ಯೆ ಒಂದು ಕೋಟಿ ತಲುಪಿತ್ತಿದೆ. ಆದರೆ, ನಗರದಲ್ಲಿ ಆರು ಮಂದಿಗೆ ಒಂದು ಮರವಿದ್ದು ಇದು ಪ್ರಾಕೃತಿಕ ಅಸಮತೋಲನ ಸೂಚಿಸುತ್ತದೆ ಮತ್ತು ಮಾನವನ ಆರೋಗ್ಯದ ಮೇಲೆ ಪರಿಣಾಮ ಉಂಟುಮಾಡುತ್ತದೆ ಎಂದು ಅಧ್ಯಯನ ಆಂತಕ ವ್ಯಕ್ತಪಡಿಸಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ಭಾರತೀಯ ವಿಜ್ಞಾನ ಸಂಸ್ಥೆಯು ನಡೆಸಿದ ‘ಬೆಂಗಳೂರಿನ ವೃಕ್ಷಗಳು' ಕುರಿತ ಅಧ್ಯಯನ ವರದಿಯಲ್ಲಿ ನಗರದಲ್ಲಿ 14,78,412 ವೃಕ್ಷಗಳಿವೆ ಎಂಬ ಅಂಶ ಬೆಳಕಿಗೆ ಬಂದಿದೆ. ನಗರದ ಬಿಬಿಎಂಪಿ ವಾರ್ಡ್ ವಾರು ಚಿತ್ರಗಳನ್ನು ಸೆರೆಹಿಡಿದು ನಂತರ, ಅವುಗಳನ್ನು ಆರು ವಿಭಾಗಮಾಡಿ ಈ ಅಧ್ಯಯನ ವರದಿ ತಯಾರಿಸಲಾಗಿದೆ. [ಎಸಿ ಸಿಟಿ ಬೆಂಗಳೂರು ಆಗಲಿದೆ ಬೆಂಗಾಡು!]
ವರದಿ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕ ಡಾ.ಟಿ.ವಿ.ರಾಮಚಂದ್ರ ಅವರು, ಉಪಗ್ರಹ ಆಧಾರಿತ ತಂತ್ರಜ್ಞಾನದ ಮೂಲಕ ನಗರ ವ್ಯಾಪ್ತಿಯಲ್ಲಿರುವ ವಾರ್ಡ್ ವಾರು ವೃಕ್ಷಗಳ ಚಿತ್ರಗಳನ್ನು ಸೆರೆ ಹಿಡಿಯಲಾಗಿದೆ. ಅವುಗಳನ್ನು ಆರು ವಿಭಾಗಗಳಾಗಿ ವಿಂಗಡಿಸಿ, ಸಮೀಕ್ಷೆ ಮಾಡಲಾಗಿದ್ದು, ಇವುಗಳಲ್ಲಿ ಈ ಅಂಕಿಅಂಶಗಳು ತಿಳಿದುಬಂದಿದೆ ಎಂದು ಹೇಳಿದ್ದಾರೆ.
ವರ್ತೂರು, ಬೆಳ್ಳಂದೂರು, ಅಗರ, ಅರಮನೆ ನಗರ ವಾರ್ಡ್ಗಳಲ್ಲಿ 40,000ಕ್ಕೂ ಅಧಿಕ ಮರಗಳಿವೆ. ಆದರೆ, ಚಿಕ್ಕಪೇಟೆ, ಶಿವಾಜಿನಗರ, ಕೆಂಪಾಪುರ ಅಗ್ರಹಾರ, ಪಾದರಾಯನಪುರ, ಕುಶಾಲನಗರ ವಾರ್ಡ್ಗಳಲ್ಲಿ 100ಕ್ಕಿಂತ ಕಡಿಮೆ ಮರಗಳಿವೆ. ಈ ಮರಗಳು ಇನ್ನೆರಡು ವರ್ಷಗಳಲ್ಲಿ ಸಂಪೂರ್ಣವಾಗಿ ಕಣ್ಮರೆಯಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿ ಆತಂಕ ವ್ಯಕ್ತಪಡಿಸಿದೆ.
ನಗರದಲ್ಲಿ ಮರಗಳ ಮಾರಣ ಹೋಮದಿಂದಾಗಿ ಉಷ್ಣಾಂಶ ಹೆಚ್ಚಾಗುತ್ತಿದೆ. ನಗರದ ಪರಿಸರವನ್ನು ಸ್ವಚ್ಛವಾಗಿ ಇಡಬೇಕಾದರೆ, ಅಭಿವೃದ್ಧಿ ಹೆಸರಿನಲ್ಲಿ ಮರ ಕಡಿಯುವುದನ್ನು ತಪ್ಪಿಸಬೇಕಿದೆ ಎಂದು ಡಾ.ಟಿ.ವಿ.ರಾಮಚಂದ್ರ ಅವರು ಒತ್ತಾಯಿಸಿದ್ದಾರೆ.
ಗಿಡ ನೆಡಲು ಕ್ರಮ ಕೈಗೊಳ್ಳಿ : ವರದಿ ಕುರಿತು ಮಾತನಾಡಿದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನಾಚಾರ್ಯ ಅವರು, ರಸ್ತೆ ವಿಸ್ತರಣೆಯ ಯೋಜನೆಯಿಂದಾಗಿ ಮರಗಳ ನಾಶವಾಗುತ್ತಿದೆ. ಒಂದು ಮರ ಕಡಿದರೆ, ಮೂರು ಮರಗಳನ್ನು ನೆಡಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸುವ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications