Get Updates
Get notified of breaking news, exclusive insights, and must-see stories!

ಕೆಆರ್ ಮಾರುಕಟ್ಟೆ ಕೈಲಾಶ್ ಬಾರ್ ನಲ್ಲಿ ಬೆಂಕಿ, 5 ಮಂದಿ ದುರ್ಮರಣ

Recommended Video

      ಕೆಆರ್ ಮಾರುಕಟ್ಟೆಯಲ್ಲಿನ ಕೈಲಾಶ್ ಬಾರ್ ನಲ್ಲಿ ಅಚಾನಕ್ ಬೆಂಕಿ | Oneindia Kannada

      ಬೆಂಗಳೂರು, ಜನವರಿ 08: ಕೃಷ್ಣರಾಜ ಮಾರುಕಟ್ಟೆ (ಕೆ.ಆರ್ ಮಾರುಕಟ್ಟೆ) ಸಮೀಪದ ಕೈಲಾಶ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಸೋಮವಾರ ಮುಂಜಾನೆ ಅಗ್ನಿ ಆಕಸ್ಮಿಕ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬಾರ್ ನಲ್ಲಿ ಕೆಲಸ ಮಾಡುವ ಐವರು ಸಿಬ್ಬಂದಿ ಬೆಂಕಿಗೆ ಆಹುತಿಯಾಗಿರುವ ದಾರುಣ ಘಟನೆ ನಡೆದಿದೆ.

      ಸೋಮವಾರ ಮುಂಜಾನೆ 2.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟಿನಿಂದಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಬಾರ್ ನ ಸಿಬ್ಬಂದಿಗಳು ನಿದ್ದೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

      K.R Market : Kailash Bar and restaurant staffs charred to death

      ಮೃತರನ್ನು ಮಂಜುನಾಥ್, ಕೀರ್ತಿ, ಮಹೇಶ್, ಸ್ವಾಮಿ ಹಾಗೂ ಪ್ರಸಾದ್ ಎಂದು ಗುರುತಿಸಲಾಗಿದೆ. ಮಾರುಕಟ್ಟೆಗೆ ತೆರಳುತ್ತಿದ್ದ ಸಾರ್ವಜನಿಕರು ಬಾರ್ ಇರುವ ಕಟ್ಟಡದಿಂದ ಹೊಗೆಯಾಡುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ 3 ಅಗ್ನಿ ಶಾಮಕದಳ ವಾಹನ ಹಾಗೂ 25ಕ್ಕೂ ಅಧಿಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

      K.R Market : Kailash Bar and restaurant staffs charred to death

      ಪಶ್ಚಿಮ ವಲಯ ಡಿಸಿಪಿ ಅನುಚೇತ್ ಅವರು ಘಟನಾ ಸ್ಥಳಕ್ಕೆ ಬಂದು, ಪರಿಶೀಲನೆ ನಡೆಸಿದ್ದಾರೆ. ಕಲಾಸಿಪಾಳ್ಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.

      K.R Market : Kailash Bar and restaurant staffs charred to death
      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+