ಅಂಬೇಡ್ಕರ್ 'ಎಕ್ಕಡ' ಅಂದಿದ್ದ ಹುಚ್ಚ ವೆಂಕಟನ ಬಂಧನ
ಬೆಂಗಳೂರು, ನವೆಂಬರ್ 20 : ನಟ, ನಿರ್ದೇಶಕ ಹುಚ್ಚ ವೆಂಕಟ್ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ವೆಂಕಟ್ನನ್ನು ಬಂಧಿಸಿದ್ದಾರೆ, ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವೆಂಕಟ್ ವಿರುದ್ಧ ದೂರು ನೀಡಿದ್ದರು.
ಗುರುವಾರ ತಡರಾತ್ರಿ ಇಂದಿರಾ ನಗರದಲ್ಲಿರುವ ಹುಚ್ಚ ವೆಂಕಟ್ ಮನೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಶುಕ್ರವಾರ ಹುಚ್ಚಾ ವೆಂಕಟ್ನನ್ನು ಸಿಟಿ ಸಿವಿಲ್ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ರಾತ್ರಿಯೂ ದಲಿತ ಸಂಘಟನೆಗಳ ಕೆಲವು ಕಾರ್ಯಕರ್ತರು ವೆಂಕಟ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. [ಹುಚ್ಚ ವೆಂಕಟ್ ಯಾರು?]

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನವೆಂಬರ್ 18ರಂದು ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಹುಚ್ಚಾ ವೆಂಕಟ್ ವಿರುದ್ಧ ದೂರು ನೀಡಿದ್ದರು. ವೆಂಕಟ್ ವಿರುದ್ಧ ಉದ್ದೇಶ ಪೂರ್ವಕವಾಗಿ ಶಾಂತಿ ಕದಡಿದ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. [ಹುಚ್ಚಾ ವೆಂಕಟ್ ಮುಖಕ್ಕೆ ಮಸಿ]
ಕೋಲಾರದಲ್ಲಿ ದೂರು ದಾಖಲು : ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಹುಚ್ಚ ವೆಂಕಟ್ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದೆ. [ಬಿಗ್ ಬಾಸ್ : ವೆಂಕಟ್ ಗೆ ಭಾರೀ ಸಂಭಾವನೆ]
ವೆಂಕಟ್ ವಿರುದ್ಧ ಪ್ರತಿಭಟನೆ : ಗುರುವಾರ ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ವೆಂಕಟ್ ವಿರುದ್ಧ ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್ ಅವರು, 'ಮಾನಸಿಕ ಅಸ್ವಸ್ಥನಾದ ವೆಂಕಟ್ ಖಾಸಗಿ ಸುದ್ದಿವಾಹಿನಿಯಲ್ಲಿ ಅಂಬೇಡ್ಕರ್ ಅವರನ್ನು ನನ್ನ ಎಕ್ಕಡ ಎಂದು ಮೂದಲಿಸಿದ್ದಾರೆ' ಎಂದು ಆರೋಪಿಸಿದರು. [ಟಿವಿ ಚಾನಲ್ಲಿನಲ್ಲಿ ಮತ್ತೆ ಕನಲಿ ಕೆಂಡವಾದ 'ಹುಚ್ಚ' ವೆಂಕಟ್]
'ಆದರ್ಶಪುರುಷರ ಕುರಿತು ವೆಂಕಟ್ ಅವರಿ ತಿಳಿದಿಲ್ಲ. ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡಿ ಶೋಷಿತ ಜನಾಂಗವನ್ನು ಅವಮಾನಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications