ಕೆಲವೇ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕನ್ನಡದ ದೀಪ?
ಬೆಂಗಳೂರು,ಮಾರ್ಚ್,15: ಕಚೇರಿಯಲ್ಲಿ ಕನ್ನಡದಲ್ಲಿಯೇ ವ್ಯವಹರಿಸಿ ಎಂಬ ಸೂಚನಾ ಫಲಕವಿದ್ದರೂ ಕನ್ನಡ ಬಳಸುವುದು ತೀರಾ ಕಡಿಮೆ. ಇದನ್ನು ಗಮನಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒಂದು ದಿಟ್ಟ ನಿರ್ಧಾರಕ್ಕೆ ಬಂದಿದ್ದು, ಸರ್ಕಾರಿ ಕಚೇರಿಯ ಎಲ್ಲಾ ರೂಪ ರಚನೆಗಳನ್ನು ಕನ್ನಡಮಯವಾಗಿಸಲು ಹೊರಟಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಿ ಕಚೇರಿಯಲ್ಲಿ ಕನ್ನಡವನ್ನು ಆಡಳಿತಾತ್ಮಕ ಭಾಷೆಯಾಗಿ ಜಾರಿಗೆ ತರಬೇಕೆಂದು ಸರ್ಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಸಮ್ಮತಿ ಸೂಚಿಸಿದ ಸರ್ಕಾರ ಅತೀ ಶೀಘ್ರದಲ್ಲಿಯೇ ಈ ವ್ಯವಸ್ಥೆಯನ್ನು ಜಾರಿಗೆ ತರುವ ಭರವಸೆ ನೀಡಿದೆ.[ಗ್ರಾಹಕ ಸೇವೆ ಹಿಂದಿಯಲ್ಲೇ ಏಕೆ? ಕನ್ನಡದಲ್ಲೇ ಇರ್ಲಿ]

ಖಾಸಗಿ ಕಚೇರಿಗಳಲ್ಲದೇ ಸರ್ಕಾರಿ ಕಚೇರಿಗಳಲ್ಲೂ ಕನ್ನಡ, ಇಂಗ್ಲೀಷ್, ಕೆಲವೊಮ್ಮೆ ಹಿಂದಿ ಭಾಷೆಯ ಬಳಕೆ ಮಾಡಲಾಗುತ್ತಿತ್ತು. ಇದನ್ನು ಮನಗಂಡ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ನಿರ್ಣಯಕ್ಕೆ ಬಂದು ಕನ್ನಡ ಉಳಿಸಿ ಬೆಳೆಸುವ ಕೆಲಸಕ್ಕೆ ಮುಂದಾಗಿದೆ.
ಬೇರೆ ಭಾಷೆಗಳ ಹಾವಳಿಯಿಂದ ಕನ್ನಡ ಎಲ್ಲಿ ನಲುಗಿಹೋಗುವುದೋ ಎಂಬ ಆತಂಕದಲ್ಲಿ ಈ ನಿಲುವಿಗೆ ಬರಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹನುಮಂತಯ್ಯ ತಿಳಿಸಿದರು.[ಮೂಲ ಅಮೆರಿಕಾ ಜನಾಂಗದ ಭಾಷೆಯಲ್ಲಿ ಕನ್ನಡದ ಪ್ರಭಾವ]
ಪದವಿ ಹಂತದ ಎಲ್ಲಾ ವೃತ್ತಿಪರ ಕೋರ್ಸ್ ಗಳಲ್ಲಿ ಕನ್ನಡ ಬಾಷೆಯನ್ನು ಕಡ್ಡಾಯಗೊಳಿಸಬೇಕೆಂಬ ನಿಯಮಕ್ಕೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಇದು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಜಾರಿ ಬರಲಿದೆ ಎಂಬ ಮಾಹಿತಿ ನೀಡಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications