ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತ್ರಿವಳಿ ತಲಾಖ್ ತೀರ್ಪು: ರಾಜ್ಯ ಬಿಜೆಪಿಯಿಂದ ಸಂಭ್ರಮಾಚರಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 22 : ಸುಪ್ರೀಂ ಕೋರ್ಟ್ ಇಂದು ತ್ರಿವಳಿ ತಲಾಖ್ ನ್ನು ರದ್ದುಪಡಿಸಿ ನೀಡಿರುವ ಐತಿಹಾಸಿಕ ತೀರ್ಪನ್ನು ಕರ್ನಾಟಕ ಬಿಜೆಪಿ ಸ್ವಾಗತಿಸಿ ವಿಜಯೋತ್ಸವ ಆಚರಿಸಿತು.

ತ್ರಿವಳಿ ತಲಾಖ್ ಅಸಂವಿಧಾನಿಕ, ಸುಪ್ರಿಂ ಕೋರ್ಟ್ ಐತಿಹಾಸಿಕ ತೀರ್ಪುತ್ರಿವಳಿ ತಲಾಖ್ ಅಸಂವಿಧಾನಿಕ, ಸುಪ್ರಿಂ ಕೋರ್ಟ್ ಐತಿಹಾಸಿಕ ತೀರ್ಪು

ಬಿಜೆಪಿ ಅಲ್ಪಸಂಖ್ಯಾತ ಯುವ ಮೋರ್ಚಾ ವತಿಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಘೋಷಣೆಗಳನ್ನು ಕೂಗಿ ಸಂಭ್ರಮಸಿದರು.

Karnataka BJP celebrates for SC verdict on triple talaq

ಸಂಭ್ರಮಾಚರಣೆಯಲ್ಲಿ ಬಿಜೆಪಿ ನಾಯಕಿ ತೇಜಸ್ವಿನಿ, ಶ್ರುತಿ, ಬಿಜೆಪಿ ಅಲ್ಪಸಂಖ್ಯಾತ ಅಧ್ಯಕ್ಷ ಅಬ್ದುಲ್ ಅಜೀಂ, ರೈತ ಮೋರ್ಚಾ ರಾಜ್ಯಾದ್ಯಕ್ಷ ವಿಜಯಶಂಕರ್ ಸೇರಿದಂತೆ ಬಿಜೆಪಿಯ ಹಲವು ಕಾರ್ಯಕರ್ತರು ತ್ರಿವಳಿ ತಲಾಖ್ ಪದ್ಧತಿಗೆ ಇತಿಶ್ರೀ ಹಾಡಿದ ಸುಪ್ರೀಂ ಕೋರ್ಟ್ ತೀರ್ಪಿಗೆ ಸಂತಸ ವ್ಯಕ್ತಪಡಿಸಿದರು.

Karnataka BJP celebrates for SC verdict on triple talaq

ಇಂದು (ಆಗಸ್ಟ್ 22) ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಎಂದು ಹೇಳಿದ್ದು, ತಲಾಖ್ ಪದ್ಧತಿಗೆ ಕಾನೂನಿನ ಚೌಕಟ್ಟು ನೀಡುವಂತೆ ಕೇಮದ್ರ ಸರ್ಕಾರಕ್ಕೆ ಆದೇಶಿಸಿತ್ತು..

ತಲಾಖ್ ತಲಾಖ್ ತಲಾಖ್ ಗೆ ಭೇಷ್ ಭೇಷ್ ಭೇಷ್ ಎಂದ ಟ್ವಿಟ್ಟಿಗರುತಲಾಖ್ ತಲಾಖ್ ತಲಾಖ್ ಗೆ ಭೇಷ್ ಭೇಷ್ ಭೇಷ್ ಎಂದ ಟ್ವಿಟ್ಟಿಗರು

ಕಾನೂನು ಜಾರಿಗೆ ಆರು ತಿಂಗಳ ಸಮಯಾವಕಾಶ ನೀಡಲಾಗಿದ್ದು, ಆರು ತಿಂಗಳೊಳಗೆ ಕಾನೂನು ಜಾರಿಗೆ ಬರುವವರೆಗೆ ತಲಾಖ್ ಗೆ ಸುಪ್ರೀಂ ಕೋರ್ಟ್ ತಡೆಯಾಜ್ಜೆ ನೀಡಿ ಆದೇಶ ಹೊರಡಿಸಿದೆ.

English summary
After the Supreme Court verdict on triple talaq, Karnataka BJP minority unit celebrates Court verdict at party office Malleshwaram, Bengaluru on August 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X