ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸಿಬಿ ರಚನೆ ವಿವಾದ : ಸರ್ಕಾರಕ್ಕೆ ಗಡುವು ಕೊಟ್ಟ ಬಿಜೆಪಿ

|
Google Oneindia Kannada News

ಬೆಂಗಳೂರು, ಮಾರ್ಚ್ 28 : ಕರ್ನಾಟಕ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು. ಸರ್ಕಾರ ಈ ವಿಚಾರದಲ್ಲಿ ಹಠ ಮುಂದುವರೆಸಿದರೆ ಕಾನೂನು ಹೋರಾಟವನ್ನು ನಡೆಸಲಾಗುತ್ತದೆ ಎಂದು ನಾಯಕರು ಎಚ್ಚರಿಕೆ ನೀಡಿದರು. [ಸುದ್ದಿದನಿ : ಬಿಜೆಪಿ ನಾಯಕರ ಪ್ರತಿಭಟನೆ]

ಸರ್ಕಾರ ಎಸಿಬಿ ರಚನೆಯ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ನಾಯಕರು ಸೋಮವಾರ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರ ತನ್ನ ಆದೇಶ ವಾಪಸ್ ಪಡೆಯುವ ತನಕ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ನಾಯಕರು ಹೇಳಿದರು. [ಎಸಿಬಿ ವಿವಾದ : ಕಾಂಗ್ರೆಸ್ ಹೈಕಮಾಂಡಿಗೆ ಬಿಜೆಪಿ, ಜೆಡಿಎಸ್ ಪತ್ರ]

bjp

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ ಅನಂತ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಂತಾದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. [ಎಸಿಬಿ ಬಗ್ಗೆ ಗೊಂದಲ : ಸಿದ್ದರಾಮಯ್ಯ ನೀಡಿದ ಸ್ಪಷ್ಟನೆಗಳು]

ಕಾನೂನು ಹೋರಾಟ ಮಾಡುತ್ತೇವೆ : ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಎಸಿಬಿ ರಚನೆ ಆದೇಶವನ್ನು ವಾಪಸ್ ಪಡೆಯುವ ತನಕ ಬಿಜೆಪಿ ಹೋರಾಟ ಮಾಡಲಿದೆ. ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟವನ್ನು ಮಾಡಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿದರು. [ಎಸಿಬಿ ರಚನೆ : ಸರ್ಕಾರಕ್ಕೆ ಶೆಟ್ಟರ್ ಕೇಳಿದ ಪ್ರಶ್ನೆಗಳು]

ಶಾಸಕರ ವಿರೋಧ ಕಟ್ಟಿಕೊಂಡಿದ್ದಾರೆ : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ವಿರೋಧವನ್ನು ಕಟ್ಟಿಕೊಂಡು ಎಸಿಬಿ ರಚನೆ ಮಾಡಿದ್ದಾರೆ. ಆದೇಶವನ್ನು ಸರ್ಕಾರ ವಾಪಸ್ ಪಡೆಯುವ ತನಕ ಬಿಜೆಪಿ ವಿವಿಧ ಹಂತಗಳಲ್ಲಿ ಹೋರಾಟ ಮಾಡಲಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು. [ಭ್ರಷ್ಟಾಚಾರ ನಿಗ್ರಹ ದಳದ ಯಾವ ಕಚೇರಿ ಎಲ್ಲಿರುತ್ತದೆ?]

ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau- ACB) ಸ್ಥಾಪನೆ ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆಗಳನ್ನು ನೀಡುತ್ತಲೇ ಇದ್ದಾರೆ. ಆದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇದನ್ನು ವಿರೋಧಿಸುತ್ತಿದ್ದು, ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಹೋರಾಟ ನಡೆಸುತ್ತಿವೆ.

English summary
Karnataka opposition party BJP on Monday, March 28, 2016 continued its protest against formation of Anti Corruption Bureau (ACB). BJP leaders staged a day-long dharna before the Mahatma Gandhi statue near Maurya circle near Anand Rao circle, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X