ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವನಗುಡಿಯಲ್ಲಿ 2 ದಿನಗಳ ವಿಪ್ರರ ಬೃಹತ್ ಸಮಾವೇಶ

By Prasad
|
Google Oneindia Kannada News

ಬೆಂಗಳೂರು, ಫೆಬ್ರವರಿ 05 : ಬೆಂಗಳೂರು ಮಹಾನಗರ ವಿಪ್ರರ ಬೃಹತ್ ಸಮಾವೇಶ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಫೆಬ್ರವರಿ 24ರ ಶನಿವಾರ ಮತ್ತು 25ರ ಭಾನುವಾರದಂದು ನಡೆಯಲಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆ ಸಮಾವೇಶವನ್ನು ಆಯೋಜಿಸುತ್ತಿದೆ.

ಬ್ರಾಹ್ಮಣ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡುರಾವ್ ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಕೆ.ಎನ್ ವೆಂಕಟನಾರಾಯಣ್ ಅವರು ಆಹ್ವಾನಿಸಿದರು.

ನಮ್ಮ ರಾಜ್ಯವೇ ಬೆಸ್ಟ್-ಫಸ್ಟ್ : ಮೋದಿಗೆ ಸಿದ್ದರಾಮಯ್ಯ ತಿರುಗೇಟು!ನಮ್ಮ ರಾಜ್ಯವೇ ಬೆಸ್ಟ್-ಫಸ್ಟ್ : ಮೋದಿಗೆ ಸಿದ್ದರಾಮಯ್ಯ ತಿರುಗೇಟು!

ಸಹಸ್ರಾರು ವಿಪ್ರವರ್ಯರು ಭಾಗವಹಿಸುತ್ತಿರುವ ಎರಡು ದಿನಗಳ ಈ ಸಮಾವೇಶದಲ್ಲಿ ಮಹಾ ಗಣಪತಿ ಹೋಮ, ವಿವಿಧ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮ, ಗುರುವಂದನಾ ಕಾರ್ಯಕ್ರಮ, ಅಭಿನಂದನಾ ಕಾರ್ಯಕ್ರಮ, ಹಾಸ್ಯ ಸಂಜೆ, ಸಂಗೀತ ಸಂಜೆವನ್ನು ಆಯೋಜಿಸಲಾಗಿದೆ.

Karnataka Brahmins conference in Bengaluru

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳ್ ರವರ ಸಾನ್ನಿಧ್ಯದಲ್ಲಿ 24ರಂದು ಉದ್ಘಾಟನೆ ಜರುಗಲಿದೆ. ಗುರುವಂದನೆ ಪೇಜಾವರ ಮಠದ ಶ್ರೀಗಳ ಸಾನ್ನಿಧ್ಯದಲ್ಲಿ 10 ಗಂಟೆಗೆ ನಡೆಯಲಿದ್ದು, ಸಂಜೆ 7.30ಕ್ಕೆ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಂಜೆ ಇರಲಿದೆ. 25ರ ಸಂಜೆ ಅರ್ಜುನ್ ಜನ್ಯ ಮತ್ತು ವಿಜಯ್ ಪ್ರಕಾಶ್ ಅವರಿಂದ ಸಂಗೀತ ಸಂಜೆ ರಂಜಿಸಲಿದೆ.

ಮದುವೆಯಾಗಲು ಸಂಬಳ ಎಷ್ಟಿರಬೇಕು? ಪಾಠ ಒಂದು...ಮದುವೆಯಾಗಲು ಸಂಬಳ ಎಷ್ಟಿರಬೇಕು? ಪಾಠ ಒಂದು...

ಭಾನುವಾರ, ಫೆಬ್ರವರಿ 25ರಂದು ಮಧ್ಯಾಹ್ನ 3 ಗಂಟೆಗೆ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಭಜನೆ, ಚಂಡೆ ವಾದ್ಯ, ಜಾನಪದ ನೃತ್ಯ, ಡೊಳ್ಳು ಕುಣಿತ, ಕೋಲಾಟ, ಕಂಸಾಳೆ, ಸ್ತಬ್ಧ ಚಿತ್ರಗಳ ಪ್ರದರ್ಶನಗಳು ಶೋಭಾಯಾತ್ರೆಯಲ್ಲಿ ನೋಡುಗರನ್ನು ರಂಚಿಸಲಿವೆ.

ಈ ಬೃಹತ್ ಶೋಭಾಯಾತ್ರೆಯಲ್ಲಿ, ಸ್ಥಳೀಯ ನಾಯಕರು ಸೇರಿದಂತೆ ಹಲವಾರು ರಾಜಕಾರಣಿಗಳು, ವಿಪ್ರ ಮುಖಂಡರು, ಅರ್ಚಕ ವೃಂದ, ಖ್ಯಾತ ಚಲನಚಿತ್ರ ನಟನಟಿಯರು, ಕಿರುತೆರೆ ಕಲಾವಿದರು, ಹಲವಾರು ಕ್ರೀಡಾಪಟುಗಳು ಕೂಡ ಭಾಗವಹಿಸುತ್ತಿರುವುದು ವಿಶೇಷ.

ಬ್ರಾಹ್ಮಣರಿಗೆ ವಧುವಿನ ಕೊರತೆ : ಕಲ್ಯಾಣಕ್ಕೆ ಹೊಸ ಪ್ಲಾನ್!ಬ್ರಾಹ್ಮಣರಿಗೆ ವಧುವಿನ ಕೊರತೆ : ಕಲ್ಯಾಣಕ್ಕೆ ಹೊಸ ಪ್ಲಾನ್!

ಸಿದ್ದರಾಮಯ್ಯನವರನ್ನು ಆಹ್ವಾನಿಸಿದ್ದಕ್ಕೆ ಆಕ್ರೋಶ : ಯಾವಾಗಲೂ ಬ್ರಾಹ್ಮಣರನ್ನು ವಿರೋಧಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಈ ಸಮ್ಮೇಳನಕ್ಕೆ ಆಹ್ವಾನಿಸುವ ಅಗತ್ಯವೇನಿತ್ತು ಎಂದು ಕೆಲ ಬ್ರಾಹ್ಮಣರು ತಕರಾರು ತೆಗೆದಿದ್ದಾರೆ.

English summary
Akhila Karnataka Brahmin Mahasabha has organized 2 days mega conference at Basavanagudi National College ground, Bengaluru on 24th and 25th February. Chief minister Siddaramaiah has been invited to grace the sammelana. Dinesh Gundu Rao has extended the invitation to CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X