ಇರಾಕಿ ಉಗ್ರರ ವಿರುದ್ಧ ಕರ್ನಾಟಕ ಮಸೀದಿಗಳ ಯುದ್ಧ
ಬೆಂಗಳೂರು, ಅ.07: ಇರಾಕಿ ಉಗ್ರ ಸಂಘಟನೆ ಐಎಸ್ಐಎಸ್ ವಿರುದ್ಧ ಕರ್ನಾಟಕದಲ್ಲಿರುವ ಮಸೀದಿಗಳು ದೊಡ್ಡ ಮಟ್ಟದ ಸಮರ ಸಾರಲು ಮುಂದಾಗಿವೆ. ಈ ಬಗ್ಗೆ ರಾಜ್ಯದ ಎಲ್ಲಾ ಮಸೀದಿಗಳಿಗೆ ಸುತ್ತೋಲೆ ಕಳಿಸಲಾಗಿದ್ದು, ಜಾಗೃತಿ ಮೂಡಿಸಲಾಗುತ್ತಿದೆ.
ಜಾಮೀಯಾ ಮಸೀದಿ ಹಾಗೂ ಮುಸ್ಲಿಂ ಚಾರಿಟೇಬಲ್ ಫಂಡ್ ವತಿಯಿಂದ ಈ ಸುತ್ತೋಲೆ ರಾಜ್ಯದ ಮಸೀದಿಗಳಿಗೆ ಪ್ರಕಟಣೆ ಹೊರಡಿಸಲಾಗಿದೆ. ಜಾಮೀಯಾ ಮಸೀದಿಯ ಇಮಾಮ್ ಮೊಹಮ್ಮದ್ ಮಕ್ಸೂದ್ ಇಮ್ರಾನ್ ಅವರು ಈ ಬಗ್ಗೆ ಮಾತನಾಡಿ ಎಲ್ಲಾ ಮಸೀದಿಗಳಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದಿದ್ದಾರೆ. [ಐಎಸ್ಐಎಸ್ ಸೇರುವ ಯುವಕರಿಗೆ ಹಣ, ಕೆಲಸದ ಆಮಿಷ]

ಬೆಂಗಳೂರು ನಗರವೊಂದರಲ್ಲೇ ಸುಮಾರು 140ಕ್ಕೂ ಅಧಿಕ ಮಸೀದಿಗಳಿಗೆ ಸುತ್ತೋಲೆ ತಲುಪಿದ್ದು, ಈಗಾಗಲೇ ಐಎಸ್ ಐಎಸ್ ಬಗ್ಗೆ ಎಚ್ಚರವಹಿಸುವಂತೆ ಯುವ ಮುಸ್ಲಿಮ್ ಸಮುದಾಯಕ್ಕೆ ತಿಳಿ ಹೇಳಲಾಗುತ್ತಿದೆ. [ಇರಾಕಿ ಉಗ್ರರಿಂದ 'ಏಡ್ಸ್ ಬಾಂಬ್' ಬೀಳಲಿದೆ ಎಚ್ಚರ!]
ರಾಜ್ಯದೆಲ್ಲೆಡೆ ಅಲರ್ಟ್: ಇರಾಕಿ ಉಗ್ರ ಸಂಘಟನೆಯ ಬಗ್ಗೆ ಜಾಗೃತಿ ಮೂಡಿಸಲು ಅಲರ್ಟ್ ಸಂದೇಶಗಳನ್ನು ಮೊದಲಿಗೆ ಬೆಂಗಳೂರಿನ ಮಸೀದಿಗಳಿಗೆ ಕಳಿಸಲಾಗಿದೆ. ನಂತರ ರಾಜ್ಯದೆಲ್ಲೆಡೆ ಇರುವ ಮಸೀದಿಗಳಿಗೆ ಕಳಿಸಲಾಗಿದ್ದು, ವ್ಯಾಪಕವಾಗಿ ಜಾಗೃತಿಯಾಗಬೇಕಿದೆ ಎಂದು ಇಮಾಮ್ ಹೇಳಿದ್ದಾರೆ.
ದೆಹಲಿ ಸೇರಿದಂತೆ ಅನೇಕ ಭಾಗಗಳಲ್ಲಿರುವ ಮುಸ್ಲಿಂ ಸಮಿತಿಗಳು ಇತ್ತೀಚೆಗೆ ಐಎಸ್ಐಎಸ್ ವಿರುದ್ಧ ಫತ್ವಾ ಹೊರಡಿಸಿದ ಮೇಲೆ ಈ ರೀತಿ ಕ್ರಮಕ್ಕೆ ಕರ್ನಾಟಕದ ಮುಸ್ಲಿಂ ಸಮಿತಿ ಮುಂದಾಗಿದೆ. ಮುಸ್ಲಿಂ ಸಂಘಟನೆಗಳ ಈ ಕ್ರಮವನ್ನು ಗುಪ್ತಚರ ಇಲಾಖೆ ಕೂಡಾ ಪ್ರೋತ್ಸಾಹಿಸಿದೆ. [ಉಗ್ರರ ವಿರುದ್ಧ ಹೋರಾಟಕ್ಕೆ ಸಜ್ಜಾದ ಹಿಂದೂ ಸಂಘಟನೆಗಳು]
ಮುಸ್ಲಿಂ ಸಮುದಾಯದ ಹಿರಿಯರು ತಮ್ಮ ಸಮುದಾಯದ ಕಿರಿಯರಿಗೆ ಈ ಬಗ್ಗೆ ಅರಿವು ಮೂಡಿಸಬೇಕು. ಇಸ್ಲಾಂ ಧರ್ಮದಲ್ಲಿ ಇಲ್ಲದ ನಿಯಮ, ಯುದ್ಧದ ನಿಲುವನ್ನು ಯುವ ಜನತೆಯಲ್ಲಿ ಬಿತ್ತುತ್ತಿರುವ ಅಲ್ ಖೈದಾ, ಐಎಸ್ ಐಎಸ್ ಸಂಘಟನೆಗಳ ಉಪಟಳ ಕೊನೆಗಾಣಿಸಬೇಕು ಎಂದು ಎಂದು ಇಲಾಖೆಯಿಂದ ಮುಸ್ಲಿಂ ಸಮುದಾಯದವರಿಗೆ ಕರೆ ಬಂದಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications